crossorigin="anonymous"> ಗರಿಕೆ ಎಂಬ ದೇವಮೂಲಿಕೆ….. ಹತ್ತಾರು ರೋಗ ಪರಿಹರಿಸಬಲ್ಲ ರಾಮಬಾಣವಿದು… - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಗರಿಕೆ ಎಂಬ ದೇವಮೂಲಿಕೆ….. ಹತ್ತಾರು ರೋಗ ಪರಿಹರಿಸಬಲ್ಲ ರಾಮಬಾಣವಿದು…

Radhakrishna Anegundi by Radhakrishna Anegundi
23-12-20, 1 : 40 pm
in ಆರೋಗ್ಯ / ಆಹಾರ, ಟಾಪ್ ನ್ಯೂಸ್
garike
Share on FacebookShare on TwitterWhatsAppTelegram

ಗರಿಕೆ ಹುಲ್ಲಿನ ಕಥೆ

ಒಂದು ಕಾಲದಲ್ಲಿ ಒಬ್ಬ ರಾಕ್ಷಸ ಅನಲಾಸುರ ಇದ್ದನು. ಅವನು ಸ್ವರ್ಗದಲ್ಲಿ ಆತಂಕ ಉಂಟು ಮಾಡಿದನು.ಅವನ ಕಣ್ಣಿನಿಂದ ಬರುವ ಬೆಂಕಿಯು ಅವನ ದಾರಿಯಲ್ಲಿ ಯಾರೇ ಬಂದರು ಏನೇ ಬಂದರು ಎಲ್ಲವನ್ನು ಸುಟ್ಟು ಹಾಕುತ್ತಿದ್ದನು. ಹೀಗೆ ಎಲ್ಲವನ್ನು ನಾಶ ಮಾಡುತ್ತಿದ್ದನು. ಆಗ ದೇವನಾದ ಗಣೇಶನನ್ನು ಸಹಾಯಕ್ಕೆ ಆಹ್ವಾನಿಸಲಾಗುತ್ತದೆ.

ಗಣೇಶ ಮತ್ತು ರಾಕ್ಷಸ ಅನಲಾಸುರ ಇಬ್ಬರು ಯುದ್ಧ ಮಾಡುತ್ತಾರೆ. ಆಗ ಅನಲಾಸುರನು ಬೆಂಕಿಯ ಉಂಡೆಗಳನ್ನು ಗಣೇಶನ ಮೇಲೆ ಎಸೆಯುತ್ತಾನೆ. ಆಗ ಗಣೇಶನು ಇವನನ್ನು ಸಂಹಾರ ಮಾಡಲು ವಿರಾಟ ರೂಪವನ್ನು ಪಡೆದು ಸಂಪೂರ್ಣವಾಗಿ ಅನಲಾಸುರನನ್ನು ನುಂಗಿಬಿಟ್ಟನು.ಆಗ ಗಣೇಶನ ದೇಹದಲ್ಲಿ ಅಧಿಕವಾದ ಉಷ್ಣಾಂಶ ಉತ್ಪತ್ತಿಯಾಗಿ ಗಣೇಶನ ಹೊಟ್ಟೆಯು ಸಹ ಊದಿಕೊಂಡು ಬಿಡುವುದು.ಗಣೇಶನು ಈ ದೇಹದ ಉಷ್ಣಾಂಶದಿಂದ ದೇಹಾಲಾಸ್ಯದಿಂದ ಸುಧಾರಿಸಿಕೊಳ್ಳುವುದಕ್ಕೆ ಹರ ಸಾಹಸ ಪಡುತ್ತಿದ್ದನು.

ದೇವತೆಗಳಾದ ಬ್ರಹ್ಮ, ವಿಷ್ಣು ಮಹೇಶ್ವರ,ಸೂರ್ಯ, ಚಂದ್ರ, ಎಲ್ಲರೂ ಗಣೇಶನ ನೋವು ಕಡಿಮೆ ಮಾಡುವುದಕ್ಕೆ ಬಂದರು ಏನು ಮಾಡಿದರೂ ಹೊಟ್ಟೆ ನೋವು ಗಣೇಶನಿಗೆ ಕಡಿಮೆಯಾಗುವುದಿಲ್ಲ.

ಕೊನೆಗೆ ಋಷಿ ಮುನಿಗಳು 21 ಗರಿಕೆಯನ್ನು ತೆಗೆದುಕೊಂಡು ಬಂದು ಗಣೇಶನ ತಲೆಯ ಮೇಲೆ ಇಡುತ್ತಾರೆ. ಆಗ ಗಣೇಶನ ದೇಹದ ಉಷ್ಣಾಂಶವೆಲ್ಲವೂ ಆವಿಯಾಗಿ ಮಾಯಾಜಾಲವಾಗಿ ಕಡಿಮೆಯಾಗುತ್ತದೆ. ಗಣೇಶನು ಸಹ ಗುಣ ಮುಖನಾಗುತ್ತಾನೆ.

ಗಣೇಶನ ಪೂಜೆಯಲ್ಲಿ ಗರಿಕೆಗೆ ವಿಶೇಷ ಮಹತ್ವವಿದೆ. ಇದನ್ನು ದೂರ್ವೆ ಎಂದೂ ಕರೆಯುತ್ತಾರೆ. ದೂರ್ವೆ ಈ ಶಬ್ದವು ದೂಃ ಅವಮ್ ಹೀಗೆ ಆಗಿದೆ. ‘ದೂಃ’ ಅಂದರೆ ದೂರದಲ್ಲಿ ಇದ್ದದ್ದು ಮತ್ತು ‘ಅವಮ್’ ಅಂದರೆ ಯಾವುದು ಹತ್ತಿರ ತರುತ್ತದೆಯೋ ಅದು. ದೂರದಲ್ಲಿರುವ ಗಣೇಶನ ಪವಿತ್ರಕಗಳನ್ನು ಯಾವುದು ಹತ್ತಿರ ತರುತ್ತದೆಯೋ, ಅದುವೇ ದೂರ್ವೆಯಾಗಿದೆ, ಅಂದರೆ ಗರಿಕೆಯಾಗಿದೆ. ಗಣಪತಿಗೆ ಅರ್ಪಿಸಬೇಕಾದ ಗರಿಕೆಯು ಎಳೆಯದಾಗಿರಬೇಕು. ಇದನ್ನೇ ‘ಬಾಲತೃಣಮ್’ ಎನ್ನುತ್ತಾರೆ.

ಗರಿಕೆ ಹುಲ್ಲು ಜಾತಿಯ ಸಸ್ಯ. ಹೆಚ್ಚು ಆರೈಕೆ ಬೇಡದೆ ತನ್ನಷ್ಟಕ್ಕೆ ತಾನು ಬೆಳೆಯುವ ಗರಿಕೆ ಹುಲ್ಲು ಅನೇಕ ರೋಗಗಳ ನಿವಾರಕ. ಗರಿಕೆಯನ್ನು ಸಂಸ್ಕೃತದಲ್ಲಿ ಅನಂತಾ, ಶತಪರ್ವಿಕಾ, ಸಹಸ್ರವೀರ್ಯಾ, ಶತವಲ್ಲಿ ಎನ್ನುತ್ತಾರೆ. ಕ್ಯಾಲ್ಸಿಯಂ, ವಿಟಮಿನ್ ಬಿ ಮತ್ತು ಸಿ ಹೊಂದಿರುವ ಗರಿಕೆಯನ್ನು ಅನಾದಿ ಕಾಲದಿಂದಲೂ ರಕ್ತ ಸೋರಿಕೆ ತಡೆಗಟ್ಟಲು ಬಳಕೆ ಮಾಡುವುದಿದೆ. ಹಸಿರು, ಬಿಳಿ ಬಣ್ಣದಲ್ಲಿ ಸಾಮಾನ್ಯವಾಗಿ ಇರುತ್ತದೆ. ಎಲೆಗಳು ಉದ್ದವಾಗಿ, ಕಾಂಡಗಳು ದಪ್ಪವಾಗಿರುವ ಗಂಡದೂರ್ವಾ ಎಂಬ ಇನ್ನೊಂದು ಬಗೆ ಗರಿಕೆ ಕೂಡ ಇದೆ. ರಕ್ತಸೋರಿಕೆ ತಡೆಗಟ್ಟಲು, ಅಜೀರ್ಣ ನಿವಾರಣೆಗೆ, ಚರ್ಮ ವ್ಯಾಧಿಗೆ, ಮಧುಮೇಹ, ಸರ್ಪಸುತ್ತು, ಮೂತ್ರ ಸಂಬಂಧಿ ಕಾಯಿಲೆ ನಿವಾರಣೆಗೆ ಗರಿಕೆ ಬಳಕೆಯಾಗುತ್ತದೆ.

ಗರಿಕೆ ಹುಲ್ಲಿನ ಔಷಧಿ ಗುಣಗಳು
ಗರಿಕೆ ಹುಲ್ಲು ವಿಶೇಷ ಔಷಧಿ ಗುಣಗಳನ್ನು ಹೊಂದಿದ್ದು, ಇದನ್ನು ಸಂಜೀವಿನಿ ಎಂದು ಕರೆಯುತ್ತಾರೆ. ಹಸಿರು ರಕ್ತ ಎಂದು ಕರೆಯಲ್ಪಡುವ ಇದು, ನಮ್ಮ ರಕ್ತದಲ್ಲಿ ಸುಲಭವಾಗಿ ಹೊಂದಿಕೊಳ್ಳುತ್ತದೆ. ಹಾಗೂ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ಗರಿಕೆ ಹುಲ್ಲು ರಕ್ತವನ್ನು ಶುದ್ಧೀಕರಿಸುವ ಗುಣವನ್ನು ಹೊಂದಿದೆ. ರಕ್ತದಲ್ಲಿ ಕೊಲೆಸ್ರ್ಟಾಲ್ ಪ್ರಮಾಣ ಕಡಿಮೆಮಾಡಲು, ಸುಮಾರು ಗರಿಕೆ ಹುಲ್ಲನ್ನು ತೆಗೆದುಕೊಂಡು, ಅದಕ್ಕೆ ಸಲ್ಪ ನೀರು ಬೆರಸಿ, ಮಿಕ್ಸಿಗೆ ಹಾಕಿ ರುಬ್ಬಿ, ನಂತರ ರಸವನ್ನು ಸೋಸಿಕೊಂಡು ಕುಡಿಯಬೇಕು. ಹೀಗೆ 1 ತಿಂಗಳ ಕಾಲ ಮಾಡಿದರೆ, ರಕ್ತ ಶುದ್ಧಿಗೊಂಡು, ರೋಗಗಳು ನಿವಾರಣೆಯಾಗುತ್ತವೆ.

ತಾಯಿಯ ಎದೆ ಹಾಲಿನ ಪ್ರಮಾಣ ಕಡಿಮೆಯಾದಾಗ

ತಾಯಿಯ ಎದೆ ಹಾಲಿನ ಪ್ರಮಾಣ ಕಡಿಮೆಯಾದಾಗ, ಮಗುವಿಗೆ 1 ಚಮಚ ಗರಿಕೆ ಹುಲ್ಲಿನ ರಸದ ಜೊತೆ ಜೇನು ತುಪ್ಪ ಬೆರಸಿ ಕೊಡುವುದರಿಂದ, ಮಗುವು ದಷ್ಟಪುಷ್ಟವಾಗಿ ಬೆಳೆಯುತ್ತದೆ.

ಬಿದ್ದ ಗಾಯದಿಂದ ರಕ್ತ ಸೋರುವುದನ್ನು ಗರಿಕೆ ಹುಲ್ಲಿನಿಂದ ತಡೆಯಬಹುದು
ಗರಿಕೆ ಹುಲ್ಲನ್ನು ನೀರಿನಲ್ಲಿ ತೊಳೆದು, ನುಣುಪಾಗಿ ಅರೆದು, ಅದರ ರಸವನ್ನು ಅಥವಾ ನುಣುಪಾದ ಹುಲ್ಲನ್ನು ಬಿದ್ದ ಗಾಯಕ್ಕೆ ಹಚ್ಚುವುದರಿಂದ, ರಕ್ತ ಸ್ರಾವವನ್ನು ತಡೆಯಬಹುದು.

ಉಗುರು ಸುತ್ತನ್ನು ಕಡಿಮೆ ಮಾಡಲು ಗರಿಕೆ ಹುಲ್ಲನ್ನು ಉಪಯೋಗಿಸುತ್ತಾರೆ

ಗರಿಕೆ ಹುಲ್ಲನ್ನು ಚೆನ್ನಾಗಿ ಅರೆದು, ಅದಕ್ಕೆ ಅರಿಶಿಣ ಮತ್ತು ಸುಣ್ಣವನ್ನು ಸೇರಿಸಿ, ಉಗುರು ಸುತ್ತಿಗೆ ಹಚ್ಚುವುದರಿಂದ, ಅದು ಕಡಿಮೆಯಾಗುತ್ತದ

ಶೀತ ಕಡಿಮೆ ಮಾಡಲು, ಗರಿಕೆ ಹುಲ್ಲು ಸಹಕಾರಿಯಾಗಿದೆ

ಸ್ವಲ್ಪ ತುಳಸಿ ಮತ್ತು ಸ್ವಲ್ಪ ಗರಿಕೆ ಹುಲ್ಲನ್ನು ನೀರಿಗೆ ಹಾಕಿ, ರಾತ್ರೆ ಕುದಿಸಿಡಬೇಕು. ನಂತರ ಬೆಳಿಗ್ಗೆ ನೀರನ್ನು ಸೊಸಿ ಕುಡಿಯಬೇಕು. ಹೀಗೆ 3 ದಿನಗಳ ಕಾಲ ಕುಡಿಯುವುದರಿಂದ ಶೀತ ಕಡಿಮೆಯಾಗುವುದು.

ಸಾಮಾನ್ಯ ಜ್ವರ ಕಡಿಮೆ ಮಾಡಲು ಗರಿಕೆಹುಲ್ಲು ಉಪಯುಕ್ತವಾಗಿದೆ

ಗರಿಕೆ ಹುಲ್ಲು, ತುಳಸಿ ಮತ್ತು ಒಂದೆಲಗವನ್ನು, ಬೇರು ಸಮೇತವಾಗಿ ನೀರಿಗೆ ಹಾಕಿ, ಚೆನ್ನಾಗಿ ಕುದಿಸಬೇಕು. ನಂತರ ಸ್ವಲ್ಪ ಬೆಲ್ಲ ಸೇರಿಸಿ, 2-3 ದಿನಗಳ ಕಾಲ ಕುಡಿಯುವುದರಿಂದ ಒಳ ಜ್ವರಗಳು ಕಡಿಮೆಯಾಗುತ್ತವೆ.

ಮೈಕೈ ನೋವಿಗೆ ಗರಿಕೆ ಹುಲ್ಲು ಉಪಯುಕ್ತ
ಪ್ರತಿದಿನ ಬಿಸಿ ನೀರಿಗೆ ಗರಿಕೆ ಹುಲ್ಲನ್ನು ಹಾಕಿಕೊಂಡು ಸ್ನಾನ ಮಾಡುವುದರಿಂದ, ಮೈಕೈ ನೋವು ಕಡಿಮೆಯಾಗುವುದು.

ಅಸ್ತಮಾ, ಅಲರ್ಜಿಗಳಂತಹ ರೋಗಗಳ ನಿವಾರಣೆಗೆ ಗರಿಕೆ ಹುಲ್ಲನ್ನು ಉಪಯೋಗಿಸುತ್ತಾರೆ
ಗರಿಕೆ ಹುಲ್ಲಿನ ರಸವನ್ನು, ಬೆಳಿಗ್ಗೆ ಖಾಲಿ ಹೊಟ್ಟೆಗೆ 2-3 ಚಮಚ ಸೇವಿಸುವುದರಿಂದ ಅಸ್ತಮಾ , ಅಲರ್ಜಿಗಳಂತಹ ರೋಗಗಳನ್ನು ನಿಯಂತ್ರಿಸಬಹುದು.

1.ರಕ್ತಹೀನತೆ ಮತ್ತು ಮುಟ್ಟಿನ ಹೊಟ್ಟೆ ನೋವಿಗೆ-ಒಂದು ಚಮಚ ಗರಿಕೆ ಹುಲ್ಲಿನ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಪ್ರತಿದಿನ ಬೆಳಿಗ್ಗೆ ಖಾಲಿಹೊಟ್ಟೆಯಲ್ಲಿ ಒಂದು ತಿಂಗಳವರೆಗೆ ಸೇವಿಸಬೇಕು.
2.ಬೆವರುಸಾಲೆಗೆ-ಗರಿಕೆ ಮತ್ತು ತುಳಸಿ ಎಲೆಯನ್ನು ಅಕ್ಕಿ ತೊಳೆದ ನೀರಿನೊಂದಿಗೆ ಅರೆದು ಮೈಗೆ ಹಚ್ಚಬೇಕು.
3.ಗಜಕರ್ಣ ಅಥವಾ ಯಾವುದೇ ಕಜ್ಜಿ-ಗರಿಕೆ ರಸಕ್ಕೆ ಅರಸಿನ ಪುಡಿ ಸೇರಿಸಿ ಹಚ್ಚುವುದು ಪರಿಣಾಮಕಾರಿ.
4.ಬಿಳಿಮುಟ್ಟು-ಗರಿಕೆ ರಸವನ್ನು ಮೊಸರಿನೊಂದಿಗೆ ಸೇವಿಸಬೇಕು.
5.ಉರಿಮೂತ್ರ ಮತ್ತು ಮೂತ್ರಕೋಶದ ಕಲ್ಲು-ಗರಿಕೆ ರಸವನ್ನು ಎಳನೀರಿನೊಂದಿಗೆ ಸೇವಿಸಬೇಕು.
6.ಉಗುರು ಸುತ್ತು-ಗರಿಕೆಯನ್ನು ಸುಣ್ಣ ಮತ್ತು ಅರಸಿನದೊಂದಿಗೆ ಅರೆದು ಬೆರಳಿನ ಸುತ್ತಲೂ ಹಚ್ಚಬೇಕು.
7.ನಿತ್ಯವೂ ಇದರ ರಸ(ಜ್ಯೂಸ್) ಸೇವಿಸುವುದು ಮಧುಮೇಹಿಗಳಿಗೆ ಹಾಗೂ ಗ್ಯಾಸ್ಟ್ರೈಟಿಸ್ ನಿಂದ ಬಳಲುವವರಿಗೆ ಪರಿಣಾಮಕಾರಿ. ಇದರ ತಂಬುಳಿಯನ್ನೂ ಮಾಡಿ ಸೇವಿಸಬಹುದು.

Share1TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್