crossorigin="anonymous"> ಧರ್ಮಸ್ಥಳದ ಪವಾಡ : 12 ವರ್ಷದ ಹಿಂದೆ ವೈದ್ಯರಿಗೆ ಹಲ್ಲೆ ಮಾಡಿದವರು ಇದೀಗ ಕ್ಷಮೆ ಕೇಳಿದ್ಯಾಕೆ... - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಧರ್ಮಸ್ಥಳದ ಪವಾಡ : 12 ವರ್ಷದ ಹಿಂದೆ ವೈದ್ಯರಿಗೆ ಹಲ್ಲೆ ಮಾಡಿದವರು ಇದೀಗ ಕ್ಷಮೆ ಕೇಳಿದ್ಯಾಕೆ…

Radhakrishna Anegundi by Radhakrishna Anegundi
15-02-21, 4 : 49 pm
in ದಕ್ಷಿಣ ಕನ್ನಡ
uppinagadi doc
Share on FacebookShare on TwitterWhatsAppTelegram

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆ ಉಪ್ಪಿನಂಗಡಿಯ ಎರಡು ಕುಟುಂಬಗಳು ವೈದ್ಯರೊಬ್ಬರ ಬಳಿ ಬಂದು ಕ್ಷಮೆ ಕೇಳಿ ಹೋಗಿದ್ದಾರೆ.

ಅವತ್ತು ನಾವು ಮಾಡಿದ್ದು ತಪ್ಪು, ನಮಗೆ ತಪ್ಪಿನ ಅರಿವಾಗಿದೆ ಕ್ಷಮಿಸಿ ಬಿಡಿ ಎಂದು ಆ ಕುಟುಂಬಗಳು ವೈದ್ಯರ ಕಾಲು ಹಿಡಿಯುವುದೊಂದು ಬಾಕಿ.

ಅಂದ ಹಾಗೇ ಈ ಕುಟುಂಬಗಳು ಕ್ಷಮೆ ಕೇಳಿದ್ದು 12 ವರ್ಷಗಳ ಹಿಂದೆ ತಾವು ಮಾಡಿದ ತಪ್ಪಿಗೆ ಪ್ರಾಯಶ್ಚಿತವಾಗಿ.

ಅದು 2008ರ ಸಪ್ಟಂಬರ್ 26 ಉಪ್ಪಿನಂಗಡಿಯ ಧನ್ವಂತರಿ ಆಸ್ಪತ್ರೆಯ ( ಆಗ ಅದು ಕ್ಲಿನಿಕ್ ಆಗಿತ್ತು ). ವೈದ್ಯರಾಗಿದ್ದ ನಿರಂಜನ್ ರೈ ಮೇಲೆ ಅವರ ಕ್ಲಿನಿಕ್ ನಲ್ಲೇ ಹಲ್ಲೆ ನಡೆದಿತ್ತು.

2008ರ ಸಪ್ಟಂಬರ್ 25ರಂದು ಚಿಕಿತ್ಸೆಗಾಗಿ ಬಂದಿದ್ದ ಮಹಿಳೆಯೊಬ್ಬರ ಗಂಡ ವೈದ್ಯರು ದುರ್ವರ್ತನೆ ತೋರಿದ್ದಾರೆ ಎಂದು ಸುಳ್ಳು ಆರೋಪ ಹೊರಿಸಿದ್ದರು.

ನಿರಂಜನ್ ರೈ ಏನಾಯ್ತು ಅನ್ನುವುದನ್ನು ವಿವರಿಸಿದರು ಆತ ಕೇಳುವ ಸ್ಛಿತಿಯಲ್ಲಿ ಇರಲಿಲ್ಲ.

ಮತ್ತೆ ಮರುದಿನ ತನ್ನ ಬಳಗವನ್ನು ಕರೆದುಕೊಂಡು ಬಂದಿದ್ದ ಮಹಿಳೆಯ ಗಂಡ ಮತ್ತೆ ನಿರಂಜನ್ ರೈ ಅವರೊಂದಿಗೆ ಗಲಾಟೆ ಪ್ರಾರಂಭಿಸಿದ್ದಾನೆ. ವೈದ್ಯರು ಅದೆಷ್ಟು ತಿಳಿ ಹೇಳಿದರು ಆತ ಕೇಳುವ ಸ್ಥಿತಿಯಲ್ಲಿ ಇರಲಿಲ್ಲ.

ಹೀಗಾಗಿ ವೈದ್ಯರ ಮೇಲೆ ಹಲ್ಲೆ ಮಾಡಿದ್ದ ಗುಂಪು ಕ್ಲಿನಿಕ್ ಗೆ ಹಾನಿ ಮಾಡಿತ್ತು. ಇದರಿಂದ ದೊಡ್ಡ ಪ್ರಮಾಣದ ನಷ್ಟ ಸಂಭವಿಸಿತ್ತು.

ಬಳಿಕ ವೈದ್ಯರು ಪೊಲೀಸ್ ಠಾಣೆಗೆ ದೂರು ನೀಡಿದರು.ಹಲ್ಲೆಕೋರರು ಕೂಡಾ ಪ್ರತಿದೂರು ದಾಖಲಿಸಿದರು.

ಇನ್ನೇನು ತನಿಖೆ ಪ್ರಾರಂಭವಾಗಬೇಕು ಅನ್ನುವಷ್ಟರಲ್ಲಿ ಕಾಂಪ್ರಮೈಸ್ ಮೂಲಕ ಠಾಣೆಗೆ ಕೊಟ್ಟಿದ್ದ ದೂರನ್ನು ವಾಪಾಸ್ ಪಡೆಯಲಾಗಿತ್ತು.

ಆದರೆ ಡಾ.ನಿರಂಜನ್ ರೈ ಅವರಿಗೆ ತುಂಬಾ ನೋವಾಗಿತ್ತು. ಮಾಡಬಾರದ ತಪ್ಪಿಗೆ ಬಂದ ಆರೋಪದಿಂದ ಅವರು ನೊಂದು ಹೋಗಿದ್ದರು. ಸಮಾಜದಲ್ಲಿ ತಲೆ ತಗ್ಗಿಸಬೇಕಾಗಿ ಬಂತಲ್ಲ ಎಂದು ಕೊರಗಿದ್ದರು.

ಹೀಗಾಗಿ ನೊಂದ ಮನಸ್ಸಿನಲ್ಲೇ  ಧರ್ಮಸ್ಥಳ ಮಂಜುನಾಥ ಸ್ವಾಮಿಯನ್ನು ಪ್ರಾರ್ಥಿಸಿ, ಒಂದಲ್ಲ ಒಂದು ಸತ್ಯವನ್ನು ಪ್ರಪಂಚಕ್ಕೆ ತೋರಿಸು ಎಂದು ಕೋರಿಕೊಂಡಿದ್ದರು.

ಇದಾಗಿ ಹಲವು ವರ್ಷಗಳೇ ಕಳೆದಿರಬಹುದು. ಇತ್ತೀಚೆಗೆ ವೈದ್ಯರ ಮೇಲೆ ಹಲ್ಲೆ ನಡೆಸಿದ್ದ ಎರಡೂ ಕುಟುಂಬಗಳಲ್ಲಿ ಸಾಕಷ್ಟು ಸಮಸ್ಯೆಗಳು ಕಾಣಿಸಿಕೊಳ್ಳಲಾರಂಭಿಸಿತ್ತು. ಇನ್ನಿಲ್ಲದಂತೆ ಹಣಕಾಸಿನ ಸಮಸ್ಯೆಗಳು ಅವರನ್ನು ಕಾಡಲಾರಂಭಿಸಿದೆ ಜೊತೆಗೆ ಇಡೀ ಕುಟುಂಬ ಮಾನಸಿಕ ಹಿಂಸೆಗಳನ್ನು ಎದುರಿಸುವಂತಾಗಿದೆ.

ಏಕಾಏಕಿ ಬಂದ ಸಮಸ್ಯೆ ಆತಂಕಗೊಂಡ ಕುಟುಂಬ ಸದಸ್ಯ ಜ್ಯೋತಿಷಿಯೊಬ್ಬರ ಬಳಿ ಹೋಗಿದ್ದಾರೆ. ಈ ವೇಳೆ ಶ್ರೀ ಕ್ಷೇತ್ರ ಧರ್ಮಸ್ಥಳದ ಕಾರಣಿಕ ಕಾಣಿಸಿಕೊಂಡಿದೆ. ಸುಳ್ಳು ಆರೋಪದ ವೈದ್ಯರ ಮೇಲೆ ಮಾಡಿದ ಪಾಪ ಸುತ್ತಿಕೊಂಡಿರುವುದು ಗೊತ್ತಾಗಿದೆ.

ಹೀಗಾಗಿ ಜ್ಯೋತಿಷಿಗಳ ಸಲಹೆಯಂತೆ ವೈದ್ಯರ ಬಳಿ ಓಡಿ ಬಂದ ಕುಟುಂಬ ಕ್ಷಮಿಸುವಂತೆ ವಿನಂತಿಸಿದೆ. ಮಾತ್ರವಲ್ಲದೆ ಸ್ಥಳೀಯ ಪತ್ರಿಕೆಯೊಂದರಲ್ಲಿ ತಮ್ಮ ತಪ್ಪನ್ನು ಒಪ್ಪಿ ಜಾಹೀರಾತು ಬೇರೆ ಕೊಟ್ಟಿದ್ದಾರೆ.

ಈ ಎಲ್ಲಾ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಡಾ.ನಿರಂಜನ್ ರೈ, ಸತ್ಯ ಗೆದ್ದಿದೆ. 12 ವರ್ಷಗಳ ಬಳಿಕವಾದರೂ ಆರೋಪ ಮುಕ್ತನಾದೆನಲ್ಲ. ಮಾಡದ ತಪ್ಪಿಗೆ ಆನಾಹುತವೊಂದು ನಡೆದು ಹೋಯ್ತಲ್ಲ ಎಂದು ಕೊರಗುತ್ತಿದ್ದ ನನಗೆ ನೆಮ್ಮದಿ ಸಿಕ್ಕಿದೆ ಅಂದಿದ್ದಾರೆ.

Share11TweetSendShare

Discussion about this post

Related News

ಆಯುಷ್ಮಾನ್ ಭಾರತ್ ಯೋಜನೆ ದಕ ಜಿಲ್ಲೆಗೆ ೨೫ ಕೋಟಿ ೧೧ ಲಕ್ಷ ರೂಪಾಯಿ ಅನುದಾನ

ಆಯುಷ್ಮಾನ್ ಭಾರತ್ ಯೋಜನೆ ದಕ ಜಿಲ್ಲೆಗೆ ೨೫ ಕೋಟಿ ೧೧ ಲಕ್ಷ ರೂಪಾಯಿ ಅನುದಾನ

ನಾಳೆಯಿಂದ 6,7,8 ನೇ ತರಗತಿ ಪ್ರಾರಂಭ : ವಿದ್ಯಾರ್ಥಿಗಳ ಸ್ವಾಗತಕ್ಕೆ ಸಜ್ಜಾದ ಶಾಲೆಗಳು

ಕರಾವಳಿಯಲ್ಲಿ ಮಳೆಯ ಅಬ್ಬರ : ನಾಳೆ ಜುಲೈ 09ಕ್ಕೆ ಶಾಲಾ ಕಾಲೇಜುಗಳಿಗೆ ರಜೆ

Dose Mela in refresh cafe puttur three days

ಪುತ್ತೂರಿನಲ್ಲಿ ದೋಸೆ ಮೇಳ : ಮೂರು ದಿನಗಳ ಕಾಲ ನಡೆಯಲಿದೆ ದೋಸೆ ಜಾತ್ರೆ

ಸಾಮಾಜಿಕ ಹೋರಾಟಗಾರ ಕಾಂಗ್ರೆಸ್ ಮುಖಂಡ ಪದ್ಮನಾಭ ನರಿಂಗಾನ ಇನ್ನಿಲ್ಲ

ಅರುಣ್ ಪುತ್ತಿಲ ವಿರುದ್ಧ ತೊಡೆ ತಟ್ಟಿದ ಸಂಜೀವ ಮಠಂದೂರು

ಪುತ್ತಿಲ ಬಿಜೆಪಿಗೆ ಬಂದ್ರೆ ಕರಾವಳಿಯಲ್ಲಿ ಕಾಂಗ್ರೆಸ್ ಗೆ ಸಂಕಷ್ಟ…?

ಹತ್ತೂರ ಒಡೆಯನ ಸನ್ನಿಧಿಯ ಅಭಿವೃದ್ಧಿಗೆ 2 ಕೋಟಿ ರೂ ಅನುದಾನ ತಂದ ಅಶೋಕ್ ರೈ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

Yakshagana : ಲೀಲಾವತಿಯವರಿಗೆ leelavathi baipadithaya ಪ್ರಶಸ್ತಿ ಒಲಿದಿದ್ದು ಹೇಗೆ…. ಮಗ ಬಿಚ್ಚಿಟ್ಟ ರಹಸ್ಯ

ಕೊರಗಜ್ಜ koragajja ಸಿನಿಮಾಗೆ ಸಂಕಷ್ಟ : ಕಳಸದಲ್ಲಿ ನಡೆದ ಕಿರಿಕ್ ನ ಅಸಲಿ ಕಥೆಯೇನು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್