ಚಂದನವನದ ನಿರ್ದೇಶಕ ಎಪಿ ಅರ್ಜುನ್ ಇಂದು ಅವರ ಸ್ವಗೃಹದಲ್ಲಿ ಅನ್ನಪೂರ್ಣ ಎಂಬುವವರ ಜೊತೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ಅರ್ಜುನ್ ಹಾಸನ ಮೂಲದ ಬಿ.ಆರ್.ಅನ್ನಪೂರ್ಣ ಜೊತೆ ಸರಳವಾಗಿ ಮದುವೆಯಾಗಿದ್ದಾರೆ. ರಾಮಸಂದ್ರದ ಮಹಾಲಕ್ಷ್ಮಿ ಎನ್ಕ್ಲೇವ್ ನಲ್ಲಿ ಅರ್ಜುನ್ ಮತ್ತು ಅನ್ನಪೂರ್ಣ ಸಪ್ತಪದಿ ತುಳಿದ್ದಾರೆ.
ಲಾಕ್ ಡೌನ್ ಹಿನ್ನಲೆಯಲ್ಲಿ ಅರ್ಜುನ್ ಮದುವೆಗೆ ಸ್ಯಾಂಡಲ್ವುಡ್ ಕಲಾವಿದರಿಗೆ ಬರಲಾಗಲಿಲ್ಲ ಹೀಗಾಗಿ. ಮನೆಯಲ್ಲಿಯೇ ಸರಳವಾಗಿ ವಿವಾಹ ಕಾರ್ಯ ನಡೆಸಿದ್ದಾರೆ.

ಇವರ ಮದುವೆಗೆ ನಟ ಧ್ರುವ ಸರ್ಜಾ ಮತ್ತು ಕಿಸ್ ಸಿನಿಮಾ ಖ್ಯಾತಿಯ ವಿರಾಟ್ ಸೇರಿದಂತೆ ಕೆಲ ಕಲಾವಿದರು ಮಾತ್ರ ಭಾಗಿಯಾಗಿದ್ದು, ನವ ಜೋಡಿಗೆ ಶುಭಾ ಹಾರೈಸಿದ್ದಾರೆ.
ತಂಗಿಗಾಗಿ’ ಚಿತ್ರದಲ್ಲಿ ಗೀತರಚನೆಕಾರನಾಗಿ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಅರ್ಜುನ್ ‘ಅಂಬಾರಿ’, ‘ಅದ್ದೂರಿ’, ‘ರಾಟೆ’, ‘ಐರಾವತ’ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಗೀತರಚನೆಕಾರರಾಗಿ ಹಲವು ಸಿನಿಮಾಗಳಿಗೆ ಕೆಲಸ ಮಾಡಿದ್ದಾರೆ, ಸಹಾಯಕ ನಿರ್ದೇಶಕನಾಗಿಯೂ ಕೂಡ ಅವರು ಕೆಲ ಸಿನಿಮಾಗಳಿಗೆ ಕೆಲಸ ಮಾಡಿದ್ದರು.

ಅರ್ಜುನ್ ನಿರ್ದೇಶನದ ‘ಕಿಸ್’ ಸಿನಿಮಾ ಕಳೆದ ವರ್ಷ ರಿಲೀಸ್ ಆಗಿತ್ತು. ವಿರಾಟ್ ಈ ಚಿತ್ರದ ನಾಯಕನಾಗಿ, ಶ್ರೀಲೀಲಾ ನಾಯಕಿಯಾಗಿ ನಟಿಸಿದ್ದರು. ಅದರ ಜೊತೆಗೆ ವಿರಾಟ್ ಹೀರೋ ಆಗಿ ನಟಿಸಲಿರುವ ಇನ್ನೊಂದು ಚಿತ್ರಕ್ಕೆ ಎಪಿ ಅರ್ಜುನ್ ನಿರ್ದೇಶನ ಮಾಡಲಿದ್ದಾರೆ. ಹಾಗೆಯೇ ನಿಖಿಲ್ ಕುಮಾರಸ್ವಾಮಿ ಮುಂದಿನ ಸಿನಿಮಾಕ್ಕೂ ಇವರೇ ನಿರ್ದೇಶನದ ಜವಾಬ್ದಾರಿ ಹೊರಲಿದ್ದಾರೆ.

Discussion about this post