ಕೇರಳ : ರಾಜ್ಯ ವಿಧಾನಸಭೆ ಚುನಾವಣೆ ಹೊತ್ತಲ್ಲಿ ಸಿಎಂ ಪಿಣರಾಯಿ ವಿಜಯನ್ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ.
ದೇಶದಲ್ಲೇ ಸಂಚಲನ ಮೂಡಿಸಿರುವ ಕೇರಳ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಕೇರಳ ಸಿಎಂ ಪಿಣರಾಯಿ ವಿಜಯನ್, ವಿಧಾನಸಭಾ ಅಧ್ಯಕ್ಷ ಪಿ.ಶ್ರೀರಾಮಕೃಷ್ಣನ್ ಮತ್ತು ಮೂವರು ಸಚಿವರು ಭಾಗಿಯಾಗಿದ್ದಾರೆ ಎಂದು ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಆರೋಪಿಸಿದ್ದಾರೆ.

ಈ ಸಂಬಂಧ ಕಸ್ಟಮ್ ಇಲಾಖೆ ಹೈಕೋರ್ಟ್ ಗೆ ಹೇಳಿಕೆಯೊಂದನ್ನು ಸಲ್ಲಿಸಿದ್ದು, ಅದರಲ್ಲಿ ವಿಜಯನ್ ಹಾಗೂ ಚಿನ್ನ ಕಳ್ಳ ಸಾಗಾಣಿಕೆ ನಡೆಯುತ್ತಿದ್ದ ಸಂಯುಕ್ತ ಅರಬ್ ಸಂಸ್ಥಾನ ದೇಶದ ಕಾನ್ಸುಲ್ ಜನರಲ್ ಗೂ ಸಂಪರ್ಕವಿತ್ತು.
ಪಿಣರಾಯಿ ಪ್ರಧಾನ ಕಾರ್ಯದರ್ಶಿ ಮತ್ತು ಅವರ ಆಪ್ತ ಸಿಬ್ಬಂದಿಯ ಪರಿಚಯ ನನಗಿತ್ತು ಅಂದಿರುವ ಸ್ವಪ್ನಾ ನನಗೆ ಅರೇಬಿಕ್ ಭಾಷೆ ಗೊತ್ತಿದ್ದುದರಿಂದ ಮಧ್ಯವರ್ತಿಯಾಗಿ ಕೆಲಸ ಮಾಡಲು ಬಳಸಿಕೊಂಡಿದ್ದಾರೆ ಅಂದಿದ್ದಾರೆ.
ಕೇರಳ ಚುನಾವಣೆ ಸಂದರ್ಭದಲ್ಲಿ ಈ ಹೇಳಿಕೆ ಹೊರ ಬಿದ್ದಿರುವುದು ಸಂಚಲನ ಮೂಡಿಸಿದೆ.
Discussion about this post