crossorigin="anonymous"> ಬುದ್ದಿವಂತರ ಜಿಲ್ಲೆಯ ದಡ್ಡ ಪೊಲೀಸರು.... ಸಮವಸ್ತ್ರ ಇಲ್ಲವೆಂದು ವೈಟ್ ಬೋರ್ಡ್ ವಾಹನ ಚಾಲಕನಿಗೆ ದಂಡ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಬುದ್ದಿವಂತರ ಜಿಲ್ಲೆಯ ದಡ್ಡ ಪೊಲೀಸರು…. ಸಮವಸ್ತ್ರ ಇಲ್ಲವೆಂದು ವೈಟ್ ಬೋರ್ಡ್ ವಾಹನ ಚಾಲಕನಿಗೆ ದಂಡ

Radhakrishna Anegundi by Radhakrishna Anegundi
27-03-21, 7 : 35 am
in ದಕ್ಷಿಣ ಕನ್ನಡ
dk police fine 01
Share on FacebookShare on TwitterWhatsAppTelegram

ಮಂಗಳೂರು : ಅದೇನಾಗಿದೆಯೋ ಗೊತ್ತಿಲ್ಲ. ಕಳೆದ ಕೆಲವು ದಿನಗಳಿಂದ ಕಾನೂನು ಸುವ್ಯವಸ್ಥೆ ಕಾಪಾಡುವ ಪೊಲೀಸ್ ಇಲಾಖೆಯ ಎಡವಟ್ಟುಗಳೇ ಸುದ್ದಿಯಾಗುತ್ತಿದೆ.

ಅದರಲ್ಲೂ ಖಾಕಿಗಳ ಬಗ್ಗೆ ಅದರಲ್ಲೂ  ಟ್ರಾಫಿಕ್ ಪೊಲೀಸರ ಬಗ್ಗೆ ಜನ ವ್ಯಕ್ತಪಡಿಸುತ್ತಿರುವ ಆಕ್ರೋಶ ನೋಡಿದರೆ ದಂಗೆಯೇಳುತ್ತಾರೋ ಅನ್ನುವ ಭಯ ಕಾಡುತ್ತಿದೆ.

ವಿಶ್ವಮಟ್ಟದಲ್ಲಿ ಹೆಸರು ಮಾಡಿರುವ ಕರ್ನಾಟಕ ಪೊಲೀಸ್ ಪಡೆಯ ಮುಖ್ಯಸ್ಥರು ತಕ್ಷಣ ಟ್ರಾಫಿಕ್ ಪೊಲೀಸ್ ವಿಭಾಗಕ್ಕೆ ಬಿಸಿ ಮುಟ್ಟಿಸದೇ ಹೋದರೆ ಮುಂದೆ ದೊಡ್ಡದೊಂದು ಸಮಸ್ಯೆಯಾಗುವ ಎಲ್ಲಾ ಸಾಧ್ಯತೆಗಳಿದೆ.

ಮೊದಲಿಗೆ ಟ್ರಾಫಿಕ್ ಪೊಲೀಸರು ಕದ್ದು ಮುಚ್ಚಿ ವಾಹನ ಸವಾರರನ್ನು ಹಿಡಿಯುವ ಕೆಲಸವನ್ನು ಬಿಡಬೇಕು. ಜೊತೆಗೆ ನಡುರಸ್ತೆಗೆ ಬಂದು ವಾಹನ ಅಡ್ಡ ಹಾಕುವುದಕ್ಕೂ ಕಡಿವಾಣ ಬೀಳಬೇಕು. ಅದರಲ್ಲೂ ಮುಖ್ಯವಾಗಿ ಲಂಚ ಪಡೆಯುವುದು ಪೊಲೀಸರು ಮೊದಲು ಬಿಡಬೇಕು.

ಈಗೆಲ್ಲಾ ಪೊಲೀಸರು ಅಂದ್ರೆ ಅಭಯ ಕೊಡುವವರಲ್ಲ, ಭಯ ಹುಟ್ಟಿಸುವವರು ಅನ್ನುವಂತಾಗಿದೆ.

ಈ ನಡುವೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಮಾಡಿದ ತಪ್ಪೊಂದನ್ನು ಒಪ್ಪಿಕೊಂಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ವಸೂಲಿ ಮಾಡಿದ ದಂಡವನ್ನು ಹಿಂತಿರುಗಿಸಿ ದೊಡ್ಡತನ ಮೆರೆದಿದ್ದಾರೆ.

ಆ ಐಪಿಎಸ್ ಅಧಿಕಾರಿಗಿದ್ದ ಮನಸ್ಥಿತಿ ಕೆಳಹಂತದ ಅಧಿಕಾರಿಗಳಿಗೂ ಇದ್ರೆ ಖಾಕಿ ವ್ಯವಸ್ಥೆ ಜನಸ್ನೇಹಿಯಾಗಿರುತ್ತದೆ.

ಇದೇ ತಿಂಗಳ 23 ರಂದು ರಾಮಲ್ ಕಟ್ಟೆಯಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸರು, ಪಾಣಿಮಂಗಳೂರು ಮೂಲದ ಅನಿಲ್ ಕೋಲ್ಪೆ ಚಲಾಯಿಸುತ್ತಿದ್ದ ಓಮ್ನಿ ವಾಹನವನ್ನು ಅಡ್ಡ ಹಾಕಿದ್ದಾರೆ.

ದಾಖಲೆಗಳೆಲ್ಲವನ್ನೂ ಪರಿಶೀಲಿಸಿದಾಗ ಎಲ್ಲವೂ ಸರಿ ಇತ್ತು. ಕೊನೆಗೆ ಪೊಲೀಸರು ದಂಡ ಹಾಕಿದ್ದು ಅನಿಲ್ ಕೋಲ್ಪೆಯವರು ಸಮವಸ್ತ್ರ ಧರಿಸಿಲ್ಲ ಅನ್ನುವ ಕಾರಣಕ್ಕಾಗಿ.ಚಾಲಕ ಯೂನಿಫಾರ್ಮ್ ಹಾಕಿಲ್ಲ ಎಂದು 500 ರೂಪಾಯಿ ಚೀಟಿ ಹಿರಿದಿದ್ದಾರೆ.

ಪಾಪ ಅನಿಲ್ ಕೋಲ್ಪೆಯವರು 500 ರೂಪಾಯಿ ದಂಡ ಕಟ್ಟಿದ್ದಾರೆ. ಮನೆಗೆ ಬಂದಾಗ ವಿಷಯ ಅನಿಲ್ ಅವರ ಮಗನಿಗೆ ಗೊತ್ತಾಗಿದೆ. ನಿಯಮಗಳ ಪ್ರಕಾರ ವೈಟ್ ಬೋರ್ಡ್ ವಾಹನ ಚಾಲಕರು, ಮಾಲೀಕರು ಯೂನಿಫಾರ್ಮ್ ಧರಿಸುವ ಅಗತ್ಯವಿಲ್ಲ. ಅಂತಹ ಕಾನೂನೇ ಇಲ್ಲ. ಅದೇನಿದ್ರೂ ಹಳದಿ ಬೋರ್ಡ್ ವಾಹನಗಳಿಗೆ ಮಾತ್ರ ಅನ್ವಯಿಸುತ್ತದೆ.

dk police fine

ತಕ್ಷಣ ಪೊಲೀಸರ ಕಡೆಯಿಂದ ಆಗಿರುವ ಯಡವಟ್ಟನ್ನು ಅನಿಲ್ ಅವರ ಪುತ್ರ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿಎಂ ಲಕ್ಷ್ಮಿ ಪ್ರಸಾದ್ ಗಮನಕ್ಕೆ ತಂದಿದ್ದಾರೆ.

ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ವರಿಷ್ಠಾಧಿಕಾರಿಗಳು ಸಮಸ್ಯೆ ಸರಿಪಡಿಸುವುದಾಗಿ ಹೇಳಿದ್ದಾರೆ. ಇದೀಗ ಕಾರು ಚಾಲಕನಿಗೆ ದಂಡ ವಿಧಿಸಿದ್ದ ಅಧಿಕಾರಿಗಳು ಹಣವನ್ನು ಹಿಂತಿರುಗಿಸಿದ್ದಾರೆ.

Tags: Mangaloreದಂಡಪೊಲೀಸ್
Share1TweetSendShare

Discussion about this post

Related News

ಆಯುಷ್ಮಾನ್ ಭಾರತ್ ಯೋಜನೆ ದಕ ಜಿಲ್ಲೆಗೆ ೨೫ ಕೋಟಿ ೧೧ ಲಕ್ಷ ರೂಪಾಯಿ ಅನುದಾನ

ಆಯುಷ್ಮಾನ್ ಭಾರತ್ ಯೋಜನೆ ದಕ ಜಿಲ್ಲೆಗೆ ೨೫ ಕೋಟಿ ೧೧ ಲಕ್ಷ ರೂಪಾಯಿ ಅನುದಾನ

ನಾಳೆಯಿಂದ 6,7,8 ನೇ ತರಗತಿ ಪ್ರಾರಂಭ : ವಿದ್ಯಾರ್ಥಿಗಳ ಸ್ವಾಗತಕ್ಕೆ ಸಜ್ಜಾದ ಶಾಲೆಗಳು

ಕರಾವಳಿಯಲ್ಲಿ ಮಳೆಯ ಅಬ್ಬರ : ನಾಳೆ ಜುಲೈ 09ಕ್ಕೆ ಶಾಲಾ ಕಾಲೇಜುಗಳಿಗೆ ರಜೆ

Dose Mela in refresh cafe puttur three days

ಪುತ್ತೂರಿನಲ್ಲಿ ದೋಸೆ ಮೇಳ : ಮೂರು ದಿನಗಳ ಕಾಲ ನಡೆಯಲಿದೆ ದೋಸೆ ಜಾತ್ರೆ

ಸಾಮಾಜಿಕ ಹೋರಾಟಗಾರ ಕಾಂಗ್ರೆಸ್ ಮುಖಂಡ ಪದ್ಮನಾಭ ನರಿಂಗಾನ ಇನ್ನಿಲ್ಲ

ಅರುಣ್ ಪುತ್ತಿಲ ವಿರುದ್ಧ ತೊಡೆ ತಟ್ಟಿದ ಸಂಜೀವ ಮಠಂದೂರು

ಪುತ್ತಿಲ ಬಿಜೆಪಿಗೆ ಬಂದ್ರೆ ಕರಾವಳಿಯಲ್ಲಿ ಕಾಂಗ್ರೆಸ್ ಗೆ ಸಂಕಷ್ಟ…?

ಹತ್ತೂರ ಒಡೆಯನ ಸನ್ನಿಧಿಯ ಅಭಿವೃದ್ಧಿಗೆ 2 ಕೋಟಿ ರೂ ಅನುದಾನ ತಂದ ಅಶೋಕ್ ರೈ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

Yakshagana : ಲೀಲಾವತಿಯವರಿಗೆ leelavathi baipadithaya ಪ್ರಶಸ್ತಿ ಒಲಿದಿದ್ದು ಹೇಗೆ…. ಮಗ ಬಿಚ್ಚಿಟ್ಟ ರಹಸ್ಯ

ಕೊರಗಜ್ಜ koragajja ಸಿನಿಮಾಗೆ ಸಂಕಷ್ಟ : ಕಳಸದಲ್ಲಿ ನಡೆದ ಕಿರಿಕ್ ನ ಅಸಲಿ ಕಥೆಯೇನು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್