crossorigin="anonymous"> ಧಾರ್ಮಿಕ ಆಚರಣೆ ನಿಷೇಧ.... ರಾಜಕೀಯ ಸಮಾರಂಭಕ್ಕಿಲ್ಲ ಯಾವುದೇ ಆತಂಕ – ಇದ್ಯಾವ ಸೀಮೆಯ ಕೊರೋನಾ ಮಾರ್ಗಸೂಚಿ... - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಧಾರ್ಮಿಕ ಆಚರಣೆ ನಿಷೇಧ…. ರಾಜಕೀಯ ಸಮಾರಂಭಕ್ಕಿಲ್ಲ ಯಾವುದೇ ಆತಂಕ – ಇದ್ಯಾವ ಸೀಮೆಯ ಕೊರೋನಾ ಮಾರ್ಗಸೂಚಿ…

Radhakrishna Anegundi by Radhakrishna Anegundi
16-04-21, 9 : 39 pm
in ಟಾಪ್ ನ್ಯೂಸ್
Campaign bjp
Share on FacebookShare on TwitterWhatsAppTelegram

ಬೆಂಗಳೂರು : ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುತ್ತಿದ್ದಂತೆ ಕೊರೋನಾ ಸೋಂಕಿನ ಎರಡನೆ ಅಲೆ ತಡೆಯುವ ನಿಟ್ಟಿನಲ್ಲಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಹಲವು ಕಠಿಣ ಕ್ರಮಗಳನ್ನು ಘೋಷಿಸಿದೆ. ಇವೆಲ್ಲವೂ ಕೂಡಾ ಆದೇಶದಲ್ಲಿರುವ ಕಠಿಣ ನಿಯಮಗಳೇ ಹೊರತು, ಜಾರಿಯಾಗುವ ನಿಯಮಗಳಲ್ಲ. ಜಾರಿಯಾಗುವ ನಿಯಮಗಳಾಗಿದ್ರೆ ಉಪಚುನಾವಣೆ ಪ್ರಚಾರ ಸಂದರ್ಭದಲ್ಲೇ ಈ ಆದೇಶ ಹೊರ ಬೀಳಬೇಕಾಗಿತ್ತು.

ಕಲ್ಯಾಣ ಮಂಟಪದಲ್ಲಿ 100 ಜನ, ಜನ್ಮ ದಿನಕ್ಕೆ 50 ಜನ ಎಂದು ಹೇಳಿರುವ ಸರ್ಕಾರ ಶಾಲಾ ಕಾಲೇಜುಗಳಲ್ಲಿ ಪರಿಸ್ಥಿತಿ ಹೇಗಿರಬೇಕು ಅನ್ನುವ ಬಗ್ಗೆ ಹೇಳಿಯೇ ಇಲ್ಲ. ರಾಜ್ಯದ ಬಹುತೇಕ ಶಿಕ್ಷಣ ಸಂಸ್ಥೆಗಳು ಕೊರೋನಾ ಹಾಟ್ ಸ್ಪಾಟ್ ಆಗಿದ್ದರೂ ಅಲ್ಲಿ ಕೈಗೊಳ್ಳಬೇಕಾದ ಕ್ರಮದ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಕನಿಷ್ಠ ಪಕ್ಷ ಶಾಲಾ ಕಾಲೇಜುಗಳಲ್ಲೇ ವಿದ್ಯಾರ್ಥಿಗಳಿಗೆ ಕೊರೋನಾ ಪರೀಕ್ಷೆ ನಡೆಸುವ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಲಿ.

ಇನ್ನು ಇದೇ ಆದೇಶದಲ್ಲಿ ಧಾರ್ಮಿಕ ಸಮಾರಂಭಗಳನ್ನು ಯಾವುದೇ ಕಾರಣಕ್ಕೂ ನಡೆಸುವಂತಿಲ್ಲ ಹೇಳಿರುವ ರಾಜ್ಯ ಸರ್ಕಾರ ರಾಜಕೀಯ ಕಾರ್ಯಕ್ರಮದಲ್ಲಿ 200 ಜನ ಪಾಲ್ಗೊಳ್ಳಬಹುದು ಅಂದಿದೆ. ಇದಕ್ಕಿಂದ ದೊಡ್ಡ ದುರಂತ ಇನ್ನೇನಿದೆ. ಕಳೆದ ವರ್ಷವೂ ಧಾರ್ಮಿಕ ಚಟುವಟಿಕೆಗಳು ಸ್ಥಗಿತಗೊಂಡ ಕಾರಣಕ್ಕೆ ಆಸ್ತಿಕರು ಘಾಸಿಗೊಂಡಿದ್ದಾರೆ. ಹೀಗಾಗಿ ಕನಿಷ್ಟ ಪಕ್ಷ ಸಂಪ್ರದಾಯಕ್ಕೆ ಚ್ಯುತಿ ಬಾರದಂತೆ, ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ಹೇರಿ ಧಾರ್ಮಿಕ ಆಚರಣೆಗೆ ಸರ್ಕಾರ ಅನುಮತಿ ಕೊಡಬಹುದಿತ್ತು. ಆದರೆ ಅದೆಲ್ಲವನ್ನೂ ಬಿಟ್ಟು ರಾಜಕೀಯ ಸಮಾರಂಭಕ್ಕೆ 200 ಜನ ಸೇರಿಸಬಹುದಂತೆ. ಅಂದ್ರೆ ರಾಜಕೀಯ ಸಮಾರಂಭಗಳ ಕಡೆ ಕೊರೋನಾ ವೈರಸ್ ಬರೋದಿಲ್ಲ, ಮದುವೆ, ಜನ್ಮದಿನ ಸೇರಿ ಇನ್ನಿತರ ಸಮಾರಂಭಗಳ ಕಡೆ ಮಾತ್ರ ಈ ಚೈನಾ ವೈರಸ್ ಬರುತ್ತದೆ ಅಂದಾಯ್ತು.

ಸಾರಿಗೆ ನೌಕರರ ಮುಷ್ಕರ ಮತ್ತು ಕೋವಿಡ್ ಪರಿಸ್ಥಿತಿಗಳಿಗೆ ಸಂಬಂಧಿಸಿದಂತೆ ಹಿರಿಯ ಅಧಿಕಾರಗಳೊಂದಿಗೆ ಇಂದು ಸಭೆ ನಡೆಸಲಾಯಿತು. ಸರ್ಕಾರದ ನಿಲುವಿನ ಕುರಿತಂತೆ ನೌಕರರಿಗೆ ಮನವರಿಕೆ ಮಾಡಿಕೊಡಲು ಹಾಗೂ ಕೋವಿಡ್ ಲಸಿಕೆ, ಚಿಕಿತ್ಸೆ, ನಿಯಮ ಪಾಲನೆ ಸೇರಿದಂತೆ ಸೋಂಕು ನಿಯಂತ್ರಣಕ್ಕೆ ಎಲ್ಲ ಅಗತ್ಯಕ್ರಮ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ pic.twitter.com/oKFS0hT1uz

— B.S.Yediyurappa (@BSYBJP) April 13, 2021

ರಾಜ್ಯದಲ್ಲಿ ಇವತ್ತು ಕೊರೋನಾ ಸೋಂಕು ಈ ಮಟ್ಟಿಗೆ ತಾಂಡವವಾಡುತ್ತಿದೆ ಅಂದ್ರೆ ಅದಕ್ಕೆ ಕಾರಣ ರಾಜಕೀಯ ಸಮಾವೇಶಗಳು. ಕೇರಳಕ್ಕೆ ಪ್ರಚಾರಕ್ಕೆಂದು ಹೋದ ಅದೆಷ್ಟು ಮಂದಿ ಕರ್ನಾಟಕದಲ್ಲಿ ಕೊರೋನಾ ಸೋಂಕು ಹರಡಿಲ್ಲ. ಉಪಚುನಾವಣೆಯಲ್ಲಿ ಪಾಲ್ಗೊಂಡ ಅದೆಷ್ಟು ಮಂದಿ ಕೊರೋನಾ ಸೋಂಕಿಗೆ ತುತ್ತಾಗಿಲ್ಲ. ಒಟ್ಟಿನಲ್ಲಿ ಧಾರ್ಮಿಕ ಆಚರಣೆಗೆ ನಿಷೇಧ ಹೇರಿ, ರಾಜಕೀಯ ಕಾರ್ಯಕ್ರಮ ಅನುಮತಿ ಕೊಡಬಹುದು ಅನ್ನುವ ಐಡಿಯಾ ಕೊಟ್ಟವರಿಗೊಂದು ಆವಾರ್ಡ್ ಕೊಡಲೇಬೇಕು

ಕೊರೊನಾ ಎರಡನೇ ಅಲೆ ಹಿನ್ನೆಲೆಯಲ್ಲಿ ಸೋಂಕು ಹರಡುವಿಕೆ ತಡೆಗಟ್ಟಲು ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಸಭೆ-ಸಮಾರಂಭಗಳಲ್ಲಿ ಸೇರಬಹುದಾದ ಜನಸಂದಣಿ ಮೇಲೆ ನಿರ್ಬಂಧಗಳನ್ನು ಜಾರಿ ಮಾಡಲಾಗಿದೆ.

ಕಲ್ಯಾಣ ಮಂಟಪ, ಪಾರ್ಟಿ ಹಾಲ್, ಹೋಟೆಲ್, ರೆಸಾರ್ಟ್ ಮಾಲೀಕರು, ಸಭೆ-ಸಮಾರಂಭಗಳ ಆಯೋಜಕರು ಹಾಗೂ ಸಾರ್ವಜನಿಕರು ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. pic.twitter.com/sNfH8KYHjl

— Dr Sudhakar K (@DrSudhakar_) April 16, 2021
Tags: Corona
Share1TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್