crossorigin="anonymous"> ಆಕ್ಸಿಜನ್ ಬೆಡ್ ಗಾಗಿ ಪರದಾಡಿದ ಆಶಾ ಕಾರ್ಯಕರ್ತೆ: ಕೊರೋನಾ ವಾರಿಯರ್ ಪತಿಗೆ ಬೆಡ್ ಒದಗಿಸಲಾಗದ ವ್ಯವಸ್ಥೆಗೆ ಹೇಳಿ ಧಿಕ್ಕಾರ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಆಕ್ಸಿಜನ್ ಬೆಡ್ ಗಾಗಿ ಪರದಾಡಿದ ಆಶಾ ಕಾರ್ಯಕರ್ತೆ: ಕೊರೋನಾ ವಾರಿಯರ್ ಪತಿಗೆ ಬೆಡ್ ಒದಗಿಸಲಾಗದ ವ್ಯವಸ್ಥೆಗೆ ಹೇಳಿ ಧಿಕ್ಕಾರ

Radhakrishna Anegundi by Radhakrishna Anegundi
18-05-21, 9 : 09 pm
in ರಾಜ್ಯ
ASHA worker mysuru bed problem
Share on FacebookShare on TwitterWhatsAppTelegram

ಮೈಸೂರು : ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುವ ವಿಚಾರದಲ್ಲಿ ಸರ್ಕಾರ ಕೊಡುತ್ತಿರುವ ಭರವಸೆಗಳನ್ನು ನೋಡಿದರೆ ರಾಮರಾಜ್ಯವನ್ನು ನಾಚಿಸುವಂತಿದೆ ಕರ್ನಾಟಕದ ವ್ಯವಸ್ಥೆ. ಆದರೆ ಎಲ್ಲಾ ಭರವಸೆ ಕಾಗದ ಪತ್ರಗಳಲ್ಲಿದೆ.

ಬೆಡ್ ಕೇಳಿ ಕೊರತೆ ಇಲ್ಲ ಅಂತಾರೆ, ಆಕ್ಸಿಜನ್ ಕೇಳಿ ರೆಡಿ ಅಂತಾರೆ, ಲಸಿಕೆ ಕೇಳಿದ್ರೆ ಜಾಗತಿಕ ಟೆಂಡರ್ ಅಂತಾರೆ. ಆದರೆ ಬೆಡ್ ಕೊರತೆಯನ್ನು ಸರಿ ಮಾಡಲು ರಾಜ್ಯ ಸರ್ಕಾರ ಇನ್ನ ಸಾಧ್ಯವಾಗಿಲ್ಲ. ಹಳ್ಳಿಗಳಲ್ಲಿ ಕೊರೋನಾ ರಣ ಕೇಕೆ ಪ್ರಾರಂಭವಾದರೆ ಜನರನ್ನು ಎಲ್ಲಿ ಸೇರಿಸಿಕೊಳ್ಳುತ್ತಾರೋ ದೇವರಿಗೆ ಗೊತ್ತು.

ಪರಿಸ್ಥಿತಿ ಅದೆಷ್ಟರ ಮಟ್ಟಿಗೆ ಕೈ ಮೀರಿದೆ ಅಂದ್ರೆ ಕೊರೋನಾ ವಾರಿಯರ್ಸ್ ಗಳ ಕುಟುಂಬಸ್ಥರು ಕೊರೋನಾ ಸೋಂಕಿಗೆ ತುತ್ತಾದ್ರೆ ಬೆಡ್ ವ್ಯವಸ್ಥೆ ಇಲ್ಲ. ಇದಕ್ಕೊಂದು ಉದಾಹರಣೆ ಇಂದು ನಡೆದ ಘಟನೆ.

ಮೈಸೂರಿನಲ್ಲಿ ಕೊರೋನಾ ವಾರಿಯರ್ ಆಗಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆ ಟಿ ನರಸೀಪುರ ತಾಲೂಕು ಬನ್ನೂರಿನ ಚಾಮನಹಳ್ಳಿಯ ನಿವಾಸಿ ಕನ್ಯಾಕುಮಾರಿ ಎಂಬುವವರ ಪತಿ ಸ್ವಾಮಿ ಕೊರೋನಾ ಸೋಂಕಿಗೆ ತುತ್ತಾಗಿದ್ದರು.

ತಾಲೂಕು ಆಸ್ಪತ್ರೆಯ ವೈದ್ಯರು ಹಾಗೂ ಮೈಸೂರಿನ ಆಸ್ಪತ್ರೆಯ ವೈದ್ಯರು ಪತಿಯನ್ನು ಮನೆಯಲ್ಲಿಯೇ ಐಸೋಲೇಷನ್ ನಲ್ಲಿ ಇರಿಸುವಂತೆ ಸೂಚಿಸಿದ್ದರು. ಆದರೆ, ಅವರ ಆಕ್ಸಿಜನ್ ಪ್ರಮಾಣ ದಿನದಿಂದ ದಿನಕ್ಕೆ ಕುಸಿಯುತ್ತಿತ್ತು. ಆರೋಗ್ಯ ಸ್ಥಿತಿ ಕ್ಷೀಣಿಸುತ್ತಿದ್ದ ಹಿನ್ನಲೆಯಲ್ಲಿ ಆಸ್ಪತ್ರೆಗೆ ಸೇರಿಸಲು ಕನ್ಯಾಕುಮಾರಿ ನಿರ್ಧರಿಸಿದರು. ಈ ವೇಳೆ ಕೋವಿಡ್ ಮಿತ್ರ ಸಹಾಯ ಕೇಳಿದರೂ ಸಹಾಯ ಸಿಗಲಿಲ್ಲ. ಜಿಲ್ಲಾ ವಾರ್ ರೂಮ್ ನಿಂದಲೂ ಯಾವುದೇ ಸ್ಪಂದನೆ ಸಿಗಲಿಲ್ಲ. ಮೈಸೂರು ಆಸ್ಪತ್ರೆಗೆ ಕರೆದುಕೊಂಡು ಹೋದ್ರೆ ಅಲ್ಲಿನ ಸಿಬ್ಬಂದಿಗಳು ದಾಖಲಿಸಿಕೊಳ್ಳಲು ನಿರಾಕರಿಸಿದ್ದರು. ಎಲ್ಲಾ ಸರ್ಕಾರಿ ಆಸ್ಪತ್ರೆ ಸುತ್ತಾಡಿದರೂ ಎಲ್ಲೂ ಚಿಕಿತ್ಸೆ ಸಿಗಲಿಲ್ಲ. ಖಾಸಗಿ ಆಸ್ಪತ್ರೆಗೆ ತೆರಳಿದರೆ ಮೊದಲೇ ರೂ.50,000 ಕಟ್ಟುವಂತೆ ತಿಳಿಸಿದರು ಎಂದು ಕನ್ಯಾಕುಮಾರಿ ವ್ಯವಸ್ಥೆ ಕುರಿತು ಬೇರಸ ವ್ಯಕ್ತಪಡಿಸಿದರು.

ಬಳಿಕ ಮಂಡ್ಯ ಆಸ್ಪತ್ರೆಗೆ ಕರೆದುಕೊಂಡು ಹೋದರೆ ಅಲ್ಲಿನ ವೈದ್ಯರು ಹಾಸಿಗೆ ಖಾಲಿಯಿಲ್ಲ ಎಂದು ವಾಪಾಸ್ ಕಳುಹಿಸಿದ್ದಾರೆ.

ವಿಷಯ ತಿಳಿದ ಉಳಿದ ಆಶಾ ಕಾರ್ಯಕರ್ತೆಯರು ಹಾಗೂ ಸಂಘಟನೆಯ ಕಾರ್ಯಕರ್ತರು ಧ್ವನಿ ಎತ್ತಿದ ಬಳಿಕ ಎಚ್ಚೆತ್ತ ಮೈಸೂರು ಜಿಲ್ಲಾಧಿಕಾರಿಗಳು ಹಾಸಿಗೆ ಒದಗಿಸಿಕೊಡುವ ಭರವಸೆ ನೀಡಿದರು. ಆದರೆ ಕೋವಿಡ್ ಆಸ್ಪತ್ರೆಗೆ ತೆರಳಿದಾಗ ಅಲ್ಲಿನ ಸಿಬ್ಬಂದಿಗಳು ಮತ್ತೆ ಹಾಸಿಗೆ ಇಲ್ಲ ಎಂದು ಹೇಳಿದ್ದಾರೆ. ಕೊನೆಗೆ ನರಸೀಪುರ ತಾಲೂಕು ಆಸ್ಪತ್ರೆಯಲ್ಲಿ ಆಕ್ಸಿಜನ್ ಬೆಡ್ ವ್ಯವಸ್ಥೆಯಾಗಿದೆ.

ಸಮಾಜದ ಆರೋಗ್ಯ ಸಲುವಾಗಿ ಓಡಾಡುವ ಆಶಾ ಕಾರ್ಯಕರ್ತೆಯ ಸಂಬಂಧಿಕರಿಗೆ ಬೆಡ್ ವ್ಯವಸ್ಥೆ ಮಾಡಲಾಗಲಿಲ್ಲ ಅಂದ್ರೆ ಈ ಸರ್ಕಾರಕ್ಕೆ ಅದ್ಯಾವ ನೈತಿಕತೆ ಇದೆ ಹೇಳಿ.

Tags: CoronaMysoremysuru
Share13TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್