ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಲ್ಲಿ ಹಜರತ್ ನಿಜಾಮುದ್ದೀನ್ ರಾಜಧಾನಿ ಏಕ್ಸ್ ಪ್ರೆಸ್ ಸುರಂಗವೊಂದರಲ್ಲಿ ಶನಿವಾರ ಹಳಿ ತಪ್ಪಿದೆ. ಅದೃಷ್ಟ ಅನ್ನುವಂತೆ ಯಾವುದೇ ಸಾವು ನೋವಿನ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಂದು ನಸುಕಿನ ಜಾವ 4.15ರ ಸುಮಾರಿಗೆ ಮುಂಬೈಯಿಂದ 325 ಕಿಲೋ ಮೀಟರ್ ದೂರದಲ್ಲಿ ಕರ್ಬುಡೆ ಸುರಂಗದ ಒಳಗೆ ರೈಲಿನ ಹಳಿ ತಪ್ಪಿತು ಎಂದು ಕೊಂಕಣ ರೈಲ್ವೆಯ ವಕ್ತಾರರು ತಿಳಿಸಿದ್ದಾರೆ.
ರಾಜಧಾನಿ ಎಕ್ಸ್ ಪ್ರೆಸ್ ರೈಲು ಸಂಖ್ಯೆ 02414 ಗೋವಾದ ಮಡಂಗಾವ್ ಗೆ ಹಸ್ರತ್ ನಿಜಾಮುದ್ದೀನ್ ಕಡೆಯಿಂದ ಬರುತ್ತಿತ್ತು.
ದೊಡ್ಡ ಬಂಡೆ ಕಲ್ಲೊಂದು ಹಳಿಯ ಮೇಲೆ ಬಿದ್ದಿದ್ದರಿಂದ ರೈಲು ಹಳಿ ತಪ್ಪಿದ್ದು. ರಾಜಧಾನಿ ಸೂಪರ್ ಫಾಸ್ಟ್ ರೈಲು ಚಲಿಸುತ್ತಿರುವಾಗ ಮುಂದಿನ ಚಕ್ರ ಕರ್ಬುಡೆ ಸುರಂಗ ಮಾರ್ಗದಲ್ಲಿ ಕಲ್ಲಿಗೆ ಗುದ್ದಿ ಈ ದುರ್ಘಟನೆ ಸಂಭವಿಸಿದೆ.
ಸ್ಥಳಕ್ಕೆ ರೈಲ್ವೆ ನಿರ್ವಹಣಾ ವಾಹನ ತಲುಪಿದ್ದು, ಮರು-ರೇಲಿಂಗ್ ಉಪಕರಣಗಳನ್ನು ಹೊಂದಿರುವ ಅಪಘಾತ ಪರಿಹಾರ ವೈದ್ಯಕೀಯ ವ್ಯಾನ್ ಕೂಡಾ ರತ್ನಗಿರಿಯಿಂದ ದೌಡಾಯಿಸಿದೆ. ಇದೀಗ ರಕ್ಷಣಾ ಕಾರ್ಯ ಭರದಿಂದ ಸಾಗಿದೆ.
Discussion about this post