ಬೆಂಗಳೂರು : ಕೊರೋನಾ ಆತಂಕದ ನಡುವೆಯೇ ಈ ಬಾರಿಯೂ SSLC ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಾಗಿದೆ. ನಿನ್ನೆಯಷ್ಟೇ ಹೈಕೋರ್ಟ್ ಕೂಡಾ ಪರೀಕ್ಷೆ ನಡೆಸುವುದಕ್ಕಿಂತ ಅಡ್ಡಿಯನ್ನು ನಿವಾರಿಸಿದ್ದು, ಪರೀಕ್ಷೆ ನಡೆಸಲು ಹಸಿರು ನಿಶಾನೆ ತೋರಿದೆ.
ಹೀಗಾಗಿ ನಿಗದಿಯಂತೆ ಜುಲೈ 19 ಹಾಗೂ 22 ರಂದು ಪರೀಕ್ಷೆಗಳು ನಡೆಯಲಿವೆ.ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಬಸ್ಸುಗಳಲ್ಲಿ ಉಚಿತ ಪ್ರಯಾಣ ಮಾಡಲು KSRTC ಹಾಗೂ BMTC ಅವಕಾಶ ಮಾಡಿಕೊಟ್ಟಿದೆ. ಈ ಸಂಬಂಧ ಎರಡೂ ಸಂಸ್ಥೆಗಳು ಆದೇಶ ಹೊರಡಿಸಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ, ಮಕ್ಕಳು ತಮ್ಮ ಮನೆಯಿಂದ ಪರೀಕ್ಷಾ ಕೇಂದ್ರಕ್ಕೆ ಹೋಗಲು ಮತ್ತು ವಾಪಸ್ ಬರಲು ಈ ಅನುಮತಿ ನೀಡಲಾಗಿದೆ.
ಒಂದು ವೇಳೆ ರಸ್ತೆ ಮಧ್ಯೆದಲ್ಲಿ ಪರೀಕ್ಷಾ ಕೇಂದ್ರಗಳಿದ್ದಲ್ಲಿ ಅಲ್ಲಿ ಕೋರಿಕೆಯ ಮೇರೆಗೆ ಬಸ್ ನಿಲುಗಡೆಗೆ ಅವಕಾಶವಿದ್ದು, ವಿದ್ಯಾರ್ಥಿಗಳು ಪ್ರಯಾಣಿಸುವ ಸಂದರ್ಭದಲ್ಲಿ ಪರೀಕ್ಷೆ ಪ್ರವೇಶ ಪತ್ರವನ್ನು ಕಡ್ಡಾಯವಾಗಿ ತೋರಿಸಬೇಕಿದೆ.
Discussion about this post