ಬೆಂಗಳೂರು : ನಟಿ ಲೀಲಾವತಿ ಅವರು ಪುತ್ರ, ನಟ ವಿನೋದ್ ರಾಜ್ಕುಮಾರ್ ಮಂಗಳವಾರ ರಾತ್ರಿ ಪೊಲೀಸ್ ಠಾಣೆಗೆ ಭೇಟಿ ಕೊಟ್ಟಿದ್ದಾರೆ. ಯಾವುದೇ ವಿವಾದಗಳಿಗೆ ಸಿಲುಕಿಕೊಳ್ಳದ ವಿನೋದ್ ರಾಜ್ ಕುಮಾರ್ ಪೊಲೀಸ್ ಠಾಣೆಗೆ ಬಂದಿದ್ಯಾಕೆ ಅನ್ನುವುದು ಕುತೂಹಲಕ್ಕೆ ಕಾರಣವಾಗಿತ್ತು. ಪೊಲೀಸ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ಬಳಿಕ ಅವರೇ ತಮ್ಮ ಭೇಟಿಯ ಉದ್ದೇಶವನ್ನು ವಿವರಿಸಿದ್ದಾರೆ.
8 ತಿಂಗಳ ಹಿಂದೆ ಫೇಸ್ ಬುಕ್ ನಲ್ಲಿ ವಿನೋದ್ ರಾಜ್ ಕುಮಾರ್ ಅವರ, ಫೋಟೋವನ್ನು ದುರ್ಬಳಕೆ ಮಾಡಿಕೊಂಡು ಅಶ್ಲೀಲವಾಗಿ ಚಿತ್ರಿಸಲಾಗಿತ್ತು. ಈ ಬಗ್ಗೆ ಗೆಳೆಯರ ಸಲಹೆಯಂತೆ.8 ತಿಂಗಳ ಹಿಂದೆ ಯಶವಂತಪುರದ ಸೈಬರ್ ಕ್ರೈಂ ಠಾಣೆಗೆ ದೂರು ಕೊಟ್ಟಿದ್ದರು.
ಇದೀಗ ಪೊಲೀಸರಿಗೆ ಈ ಪ್ರಕರಣದ ಬಗ್ಗೆ ಸುಳಿವು ಸಿಕ್ಕಿದ್ದು ಆ ಸಂಬಂಧ ಪೊಲೀಸರು ಹೆಚ್ಚಿನ ಮಾಹಿತಿಗೆ ವಿನೋದ್ ರಾಜ್ಕುಮಾರ್ ಅವರನ್ನು ಕರೆಸಿದ್ದರು. ತನಿಖಾ ಹಂತದಲ್ಲಿ ಮಾಹಿತಿಯನ್ನು ಕಲೆ ಹಾಕಲು ಅವರನ್ನು ಕರೆಸಿಕೊಳ್ಳಲಾಗಿತ್ತು.
“ ನಾನು ಫೇಸ್ಬುಕ್ ಸೇರಿ ಸಾಮಾಜಿಕ ಜಾಲತಾಣಗಳನ್ನು ಬಳಸುವುದಿಲ್ಲ. ಕೆಲ ತಿಂಗಳುಗಳ ಹಿಂದೆ ನನ್ನ ಮಾನಹಾನಿಯಾಗುವತ ಫೋಟೋ ಫೇಸ್ಬುಕ್ನಲ್ಲಿ ಪೋಸ್ಟ್ ಆಗಿತ್ತು. ಅದರಲ್ಲಿ ನನ್ನ ಫೋಟೋ ತಿರುಚಿ ಅವಹೇಳಕಾರಿಯಾಗಿ ಪೋಸ್ಟ್ ಮಾಡಲಾಗಿತ್ತು ಅಂದಿದ್ದಾರೆ.
Discussion about this post