ಬೆಂಗಳೂರು : ರಾಜ್ಯದ ನೂತನ ಗೃಹ ಸಚಿವರಾಗಿ ಅರಗ ಜ್ಞಾನೇಂದ್ರ ಅವರು ಆಗಮಿಸಿದ ಬೆನ್ನಲ್ಲೇ ಬೆಂಗಳೂರಿನಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮರೆದಿದ್ದಾರೆ. ಬೆಂಗಳೂರಿನ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಐಷಾರಾಮಿ ಕಾರುಗಳಿಗೆ ಬೆಂಕಿ ಹಾಕಿರುವ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ತಡರಾತ್ರಿ 1.30ರ ವೇಳೆಗೆ ನಾಲ್ವರು ಕಿಡಿಗೇಡಿಗಳು ಈ ಕೃತ್ಯವೆಸಗಿದ್ದ, 2 ಕಾರುಗಳು ಸುಟ್ಟು ಕರಕಲಾಗಿವೆ. ಎರಡೂ ಕಾರುಗಳು ದುಬಾರಿ ಮೌಲ್ಯದ್ದಾಗಿದ್ದು, ಬೆಂಕಿ ಹಚ್ಚಿದವರ ಸುಳಿವು ಇನ್ನೂ ಸಿಕ್ಕಿಲ್ಲ. ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಜಕೀಯ ದ್ವೇಷಕ್ಕಾಗಿ ಬೆಂಕಿ ಹಚ್ಚಲಾಗಿದೆಯೇ? ವೈಯಕ್ತಿಕ ದ್ವೇಷವೇ ಅನ್ನುವ ಕುರಿತಂತೆ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.

ಸತೀಶ್ ರೆಡ್ಡಿಯಂತಹ ಶಾಸಕರ ಮನೆ ಮುಂದೆ ಭದ್ರತಾ ಸಿಬ್ಬಂದಿ ಇರುತ್ತಾರೆ. ಮನೆಯ ಇಂಚಿಂಚನ್ನು ಸಿಸಿಟಿವಿಗಳು ಕವರ್ ಮಾಡಿರುತ್ತದೆ. ಹಾಗಿದ್ದ ಮೇಲೆ ದುಷ್ಕರ್ಮಿಗಳು ಕಾರ್ ಪಾರ್ಕಿಂಗ್ ಏರಿಯಾಗೆ ಹೇಗೆ ಎಂಟ್ರಿ ಕೊಟ್ಟರು ಅನ್ನುವುದೇ ಯಕ್ಷ ಪ್ರಶ್ನೆ.

Discussion about this post