ಚಾಮರಾಜನಗರ : ಪ್ರೇಮಿಗಳಿಬ್ಬರು ಕಾರಿನೊಳಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಮಾಂಬಳ್ಳಿ ಬಳಿ ನಡೆದಿದೆ.

ಮಾಂಬಳ್ಳಿ – ಕಿನಹಳ್ಳಿ ಸಂಪರ್ಕಿಸುವ ಗ್ರಾಮದ ರಸ್ತೆಯಲ್ಲಿ ಈ ದುರ್ಘಟನೆ ಬೆಳಕಿಗೆ ಬಂದಿದ್ದು, ಮೃತರನ್ನು ಕಾಂಚನ (20) ಮತ್ತು ಶ್ರೀನಿವಾಸ್ (23) ಎಂದು ಗುರುತಿಸಲಾಗಿದೆ.

ಕಳೆದ ಕೆಲ ವರ್ಷಗಳಿಂದ ಇವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಶ್ರೀನಿವಾಸ್ ಕಾರು ಚಾಲಕನಾಗಿದ್ದು, ಕಾಂಚನ ಜಿಲ್ಲಾಸ್ಪತ್ರೆಯಲ್ಲಿ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಈ ಸಂಬಂಧ ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Discussion about this post