ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏರುತ್ತಿರುವ ಕೊರೋನಾ ಸಂಖ್ಯೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಈಗಾಗಲೇ ಜಾರಿಗೊಳಿಸಲಾಗಿರುವ ವೀಕೆಂಡ್ ಕರ್ಫ್ಯೂ ಈ ವಾರವೂ ಮುಂದುವರಿಯಲಿದೆ. ಇಂದು ರಾತ್ರಿ 9 ಗಂಟೆಯಿಂದ ವೀಕೆಂಡ್ ಕರ್ಫ್ಯೂ ಜಾರಿಗೆ ಬರಲಿದ್ದು, ಆಗಸ್ಟ್ 23 ರ ಮುಂಜಾನೆ 5 ಗಂಟೆ ತನಕ ಜಾರಿಯಲ್ಲಿರುತ್ತದೆ.
ಆಗಸ್ಟ್ 21 ಮತ್ತು ಆಗಸ್ಟ್ 22 ರಂದು ಮಧ್ಯಾಹ್ನ 2 ಗಂಟೆ ತನಕ ಆಗತ್ಯ ವಸ್ತುಗಳ ಖರೀದಿಗೆ ಅವಕಾಶವಿದ್ದು, ಈ ಅವಧಿಯಲ್ಲಿ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಜೊತೆಗೆ ಬೀದಿ ವ್ಯಾಪಾರಕ್ಕೂ ಅವಕಾಶವಿದೆ. ಈ ಸಂದರ್ಭದಲ್ಲಿ ಜನ ಅಗತ್ಯ ವಸ್ತುಗಳನ್ನು ಖರೀದಿಸಬಹುದಾಗಿದೆ. ತುರ್ತು ಸೇವೆಗಳಿಗೆ ಅವಕಾಶವಿದ್ದು, ಹಾಗಂತ ಅಗತ್ಯ ವಸ್ತು ಖರೀದಿ ನೆಪದಲ್ಲಿ ಅನಗತ್ಯವಾಗಿ ತಿರುಗಾಡುವಂತಿಲ್ಲ.
ಇನ್ನು ವೀಕೆಂಡ್ ಕರ್ಫ್ಯೂ ಸಂದರ್ಭದಲ್ಲಿ ಯಾವುದೇ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶವಿರುವುದಿಲ್ಲ. ಹೋಟೆಲ್ ಗಳಲ್ಲಿ ಪಾರ್ಸೆಲ್ ಗಳಿಗೆ ಅವಕಾಶ ನೀಡಲಾಗಿದೆ. ವಿಮಾನ, ಬಸ್ ರೈಲು ಸಂಚಾರಕ್ಕೆ ಯಾವುದೇ ಅಡ್ಡಿ ಇರುವುದಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.
Discussion about this post