ಬಾಗಲಕೋಟೆ : ಆಸ್ತಿ ವಿಚಾರದಲ್ಲಿ ಒಂದೇ ಕುಟುಂಬದ ನಾಲ್ವರು ಸಹೋದರರನ್ನು ಕೊಲೆ ಮಾಡಿರುವ ದಾರುಣ ಘಟನೆ ಬಾಗಲಕೋಟೆಯ ಮಧುರಖಂಡಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಹನುಮಂತ ಉದಗಟ್ಟಿ (45), ಮಲ್ಲಪ್ಪ ಉದಗಟ್ಟಿ (35), ಬಸಪ್ಪ ಉದಗಟ್ಟಿ (37), ಈಶ್ವರ ಉದಗಟ್ಟಿ (35) ಎಂದು ಗುರುತಿಸಲಾಗಿದೆ. ಬಾಗಲಕೋಟೆಯ ಮಧುರಖಂಡಿ ಗ್ರಾಮದ ತೋಟದ ಮನೆಯಲ್ಲಿ ನಾಲ್ವರನ್ನು ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಜಮೀನು ವಿಚಾರಕ್ಕೆ ಕೊಲೆ ನಡೆದಿದೆ ಅನ್ನುವುದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ.ಮೃತ ಕುಟುಂಬಸ್ಥರು ಹಾಗೂ ಪುಟಾಣಿ ಅನ್ನುವ ಮನೆತನದ ನಡುವೆ 3 ಎಕೆರೆ 21 ಗುಂಟೆ ಜಾಗದ ವಿಚಾರವಾಗಿ ತಗಾದೆ ಪ್ರಾರಂಭವಾಗಿತ್ತು. ಈ ವಿಚಾರವಾಗಿ ಶನಿವಾರ ತಡರಾತ್ರಿ ಜಗಳವಾಗಿದೆ ಎನ್ನಲಾಗಿದೆ.
ಈ ಸಂಬಂಧ ಜಮಖಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Discussion about this post