crossorigin="anonymous"> ಕೇರಳದಲ್ಲಿ ಹೈ ಅಲರ್ಟ್ : ನಿಪಾ ಸೋಂಕಿನಿಂದ ಪಾರಾಗುವುದು ಹೇಗೆ...? - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
ಕೇರಳ

ಕೇರಳದಲ್ಲಿ ಹೈ ಅಲರ್ಟ್ : ನಿಪಾ ಸೋಂಕಿನಿಂದ ಪಾರಾಗುವುದು ಹೇಗೆ…?

ನಿಪಾ ವೈರಸ್ 1999ರಲ್ಲಿ ಮೊದಲ ಸಲ ಮಲೇಷಿಯಾದಲ್ಲಿ ಕಾಣಿಸಿಕೊಂಡಿತ್ತು. ಆಗ 60 ಮಂದಿ ಬಲಿಯಾಗಿದ್ದರು.

Radhakrishna Anegundi by Radhakrishna Anegundi
06-09-21, 10 : 45 am
in ದೇಶ
nipah
Share on FacebookShare on TwitterWhatsAppTelegram

ಕೇರಳ : ಕೊರೋನಾ ನಿಯಂತ್ರಣ ವಿಚಾರದಲ್ಲಿ ಭಾರತದ ಮಾಡೆಲ್ ಆಗಬೇಕು ಎಂದು ಬಿಂಬಿಸಿಕೊಂಡಿದ್ದ ಕೇರಳ ಇಗ ಕೊರೋನಾ ಸೋಂಕು ನಿಯಂತ್ರಿಸಲು ಪರದಾಡುತ್ತಿದೆ. ಸ್ವಯಂಕೃತ ಅಪರಾಧಗಳ ಕಾರಣಗಳಿಂದ ಇದೀಗ ದೇವರನಾಡಿನಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಮಾತ್ರವಲ್ಲದೆ ಅಕ್ಕ ಪಕ್ಕದ ರಾಜ್ಯಗಳಿಗೂ ಇದು ಕಂಟಕವಾಗಿ ಪರಿಣಮಿಸಿದೆ.

ಈ ನಡುವೆ ಇದೀಗ ಕೇರಳದಲ್ಲಿ ನಿಪಾ ವೈರಸ್ ಕಾಣಿಸಿಕೊಂಡಿದೆ. ನಿಪಾ ವೈರಸ್ ಗೆ 12 ವರ್ಷದ ಬಾಲಕನೊಬ್ಬ ಬಲಿಯಾಗಿದ್ದು, ಆತನಿಗೆ ಚಿಕಿತ್ಸೆ ನೀಡಿದ ಇಬ್ಬರು ವೈದ್ಯರಿಗೂ ಸೋಂಕು ಕಾಣಿಸಿಕೊಂಡಿದೆ. ಹೀಗಾಗಿ ಇದೀಗ ಕೇರಳದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.  ಬಾಲಕನ ಸಂಪರ್ಕದಲ್ಲಿ 188 ಜನರಿದ್ದರು ಎಂದು ಗುರುತಿಸಲಾಗಿದ್ದು, ಈ ಪೈಕಿ ಹೆಚ್ಚು ಅಪಾಯದ ಭೀತಿಯಲ್ಲಿರುವ 20 ಜನರನ್ನು ಕಲ್ಲಿಕೋಟೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಾಲಕನ ಸಾವಿನ ಬೆನ್ನಲ್ಲೇ ಸೋಂಕು ನಿಯಂತ್ರಣ ಸಲುವಾಗಿ ಹಲವು ಕ್ರಮಗಳನ್ನು ಪ್ರಕಟಿಸಲಾಗಿದ್ದು, ಬಾಲಕನ ಮನೆಯ ಸುತ್ತಲಿನ 3ಕಿಮೀ ಪ್ರದೇಶವನ್ನು ಬಂದ್ ಮಾಡಲಾಗಿದೆ. ಅಕ್ಕ ಪಕ್ಕದ ವಾರ್ಡ್ ಗಳನ್ನು ಲಾಕ್ ಮಾಡಲಾಗಿದೆ. ಇನ್ನು ಕಲ್ಲಿಕೋಟೆಯ ಜಿಲ್ಲೆ ಮಾತ್ರವಲ್ಲದೆ ಕಣ್ಣೂರು ಮತ್ತು ಮಲಪ್ಪುರಂ ಜಿಲ್ಲೆಗಳನ್ನೂ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ. ಕಳೆದ ಬಾರಿ ನಿಪಾ ಕಾಣಿಸಿಕೊಂಡ ಸಂದರ್ಭದಲ್ಲಿ ಆರೋಗ್ಯ ಸಚಿವರಾಗಿದ್ದ ಶೈಲಜಾ ಟೀಚರ್ ಅದ್ಭುತವಾಗಿ ಅದನ್ನು ನಿಭಾಯಿಸಿದ್ದರು. ಆದರೆ ಕೇರಳದ ನೂತನ ಆರೋಗ್ಯ ಸಚಿವೆ ಇದನ್ನು ನಿಭಾಯಿಸುವ ಲಕ್ಷಣಗಳು ಕಾಣಿಸುತ್ತಿಲ್ಲ. ಇದೀಗ ಕೇಂದ್ರ ಸರ್ಕಾರ ಸಾಂಕ್ರಾಮಿಕ ರೋಗ ತಜ್ಞರ ತಂಡವೊಂದನ್ನು ಕೇರಳಕ್ಕೆ ಕಳುಹಿಸಿಕೊಟ್ಟಿದೆ.

ಸೋಂಕು ಹರಡುವುದು ಹೇಗೆ..?

ಸೋಂಕಿಗೆ ತುತ್ತಾಗಿರುವ ಬಾವಲಿಗಳು ತಿಂದ ಹಣ್ಣನ್ನು ಅನ್ಯ ಪ್ರಾಣಿಗಳು ಅಥವಾ ಮನುಷ್ಯರು ತಿಂದರೆ ನಿಪಾ ವೈರಸ್ ಅಂಟಿಕೊಳ್ಳುತ್ತದೆ. ಬಳಿಕ ಜೊಲ್ಲು ಮತ್ತು ಉಗುಳಿನ ಮೂಲಕ ಹರಡುತ್ತದೆ.

ರೋಗ ಲಕ್ಷಣಗಳೇನು..?

ಜ್ವರ, ಉಸಿರಾಟ ಸಮಸ್ಯೆ, ತಲೆನೋವು, ಮೈಕೈ ನೋವು, ವಾಂತಿ, ಗಂಟಲು ಉರಿ, ಮಂಪರು. ಶೀಘ್ರವಾಗಿ ಚಿಕಿತ್ಸೆ ನೀಡಿದರೆ ಇದು ಪ್ರಾಣಕ್ಕೆ ಅಪಾಯ ತರುವುದಿಲ್ಲ.5 ರಿಂದ 14 ದಿನಗಳ ಕಾಲ ಮನುಷ್ಯರ ದೇಹದಲ್ಲಿ ಈ ಸೋಂಕು ಇರುತ್ತದೆ. ಶೀಘ್ರದಲ್ಲೇ ರೋಗ ಪತ್ತೆ ಮಾಡಿ ಚಿಕಿತ್ಸೆ ಪಡೆದರೆ ಅಪಾಯವಿರುವುದಿಲ್ಲ.

ವೈರಸ್ ನಿಂದ ರಕ್ಷಣೆ ಹೇಗೆ..?

ಪಕ್ಷಿಗಳು, ಪ್ರಾಣಿಗಳು ತಿಂದ ಹಣ್ಣುಗಳನ್ನು ಸೇವಿಸದಿರುವುದು ಎಂದಿಗೂ ಉತ್ತಮ. ಜೊತೆಗೆಆಗಾಗ ಸೋಪಿನಿಂದ ಕೈಗಳನ್ನು ಸ್ವಚ್ಛಗೊಳಿಸುವುದು ಒಳ್ಳೆಯ ಅಭ್ಯಾಸ

ನಿಪಾ ಇತಿಹಾಸ

ನಿಪಾ ವೈರಸ್ 1999ರಲ್ಲಿ ಮೊದಲ ಸಲ ಮಲೇಷಿಯಾದಲ್ಲಿ ಕಾಣಿಸಿಕೊಂಡಿತ್ತು. ಆಗ 60 ಮಂದಿ ಬಲಿಯಾಗಿದ್ದರು. 2001ರಲ್ಲಿ ಭಾರತದ ಬಂಗಾಳದಲ್ಲಿ ಮೊದಲ ಬಾರಿಗೆ ಸೋಂಕು ಕಾಣಿಸಿಕೊಂಡಿತ್ತು. ಆಗ 45 ಮಂದಿ ಮೃತಪಟ್ಟಿದ್ದರು. ಬಳಿಕ 2018ರಲ್ಲಿ ಕೇರಳದಲ್ಲಿ ನಿಪಾ ಕಾಣಿಸಿಕೊಂಡಿತ್ತು  ಆಗ 17 ಮಂದಿ ಮೃತಪಟ್ಟಿದ್ದರು.

Tags: KeralaMAINಕೇರಳನಿಪಾ
Share17TweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್