crossorigin="anonymous"> ಬಾಲಕನ ರಕ್ಷಿಸಿದ ಚಾಲಕ : ಪೋಷಕರ ಮಡಿಲು ಸೇರಿದ 1ನೇ ತರಗತಿ ವಿದ್ಯಾರ್ಥಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಬಾಲಕನ ರಕ್ಷಿಸಿದ ಚಾಲಕ : ಪೋಷಕರ ಮಡಿಲು ಸೇರಿದ 1ನೇ ತರಗತಿ ವಿದ್ಯಾರ್ಥಿ

Radhakrishna Anegundi by Radhakrishna Anegundi
27-10-21, 9 : 51 am
in ಟಾಪ್ ನ್ಯೂಸ್
auto driver govinda raju
Share on FacebookShare on TwitterWhatsAppTelegram

ಬೆಂಗಳೂರು : ಶಾಲೆಗೆ ಬಂದ ಮೊದಲ ದಿನವೇ ದಾರಿ ತಪ್ಪಿದ 1 ನೇ ತರಗತಿಯ ಬಾಲಕನನ್ನು ಆಟೋ ತಾಲಕನೊಬ್ಬ ರಕ್ಷಿಸಿದ ಘಟನೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದಿದೆ.

ಚಾಮರಾಜಪೇಟೆಯಲ್ಲಿರುವ ಹಾಸ್ಟೆಲ್ ನಲ್ಲಿ ಅಜಿತ್ ಹಾಗೂ ಅವರ ಪತ್ನಿ ಅಡುಗೆ ಕೆಲಸ ಮಾಡುತ್ತಾರೆ, ಪುತ್ರ ರೋಹನ್ ನನ್ನು ಚಾಮರಾಜಪೇಟೆಯ 5ನೇ ಮುಖ್ಯರಸ್ತೆಯ ಶ್ರೀರಾಮಮಂದಿರ ಶಾಲೆಯಲ್ಲಿ ಒಂದನೇ ತರಗತಿಗೆ ಆಡ್ಮಿಶನ್ ಮಾಡಿದ್ದರು. ಶಾಲೆ ಪ್ರಾರಂಭದ ಮೊದಲ ದಿನ ಅಜಿತ್ ಅವರೇ ರೋಹನ್ ನನ್ನು ಶಾಲೆಗೆ ಬಿಟ್ಟು ಹೋಗಿದ್ದರು.

ಮಧ್ಯಾಹ್ನ ಮಗನನ್ನು ಕರೆದುಕೊಂಡು ಬರಲು ಅಜಿತ್ ಶಾಲೆಗೆ ಬಂದ್ರೆ ಮಗ ಶಾಲೆಯಲ್ಲಿ ಇರಲಿಲ್ಲ. ಶಿಕ್ಷಕರಲ್ಲೂ ಕೇಳಿದರೂ ಸರಿಯಾದ ಉತ್ತರವಿಲ್ಲ. ಇದರಿಂದ ಆತಂಕಗೊಂಡ ಪೋಷಕರು ಹುಡುಕಾಡಿದ್ದಾರೆ. ಜೊತೆಗೆ ಚಾಮರಾಜಪೇಟೆ ಠಾಣೆಗೆ ತೆರಳಿ ದೂರು ಕೊಟ್ಟಿದ್ದಾರೆ. ತಕ್ಷಣ ಸ್ಪಂದಿಸಿದ ಪೊಲೀಸರು ಶಾಲೆಯ ಸುತ್ತಮುತ್ತಲಿನ ಸಿಸಿಟಿವಿ ಪರಿಶೀಲನೆ ಮಾಡಿದ್ದಾರೆ. ಆಗ ರೋಹನ್ ಶಾಲೆಯ ಗೇಟಿನಿಂದ ಹೊರಗಡೆ ಬಂದು ರಸ್ತೆಯಲ್ಲಿ ನಡೆದುಕೊಂಡು ಹೋಗುವ ದೃಶ್ಯ ಸೆರೆಯಾಗಿದೆ.

ತಕ್ಷಣ ವೈರ್ ಲೆಸ್ ಮೂಲಕ ಮಗು ಕಾಣಿಯಾದ ಬಗ್ಗೆ ಎಲ್ಲಾ ಠಾಣೆಗಳಿಗೆ ಮಾಹಿತಿಯನ್ನು ನೀಡಲಾಗಿದೆ. ಈ ವೇಳೆ ಸಂದೇಶಕ್ಕೆ ಪ್ರತಿಕ್ರಿಯಿಸಿದ ವಿಶ್ವೇಶ್ವರಪುರಂ ಪೊಲೀಸರು ಕಾಣೆಯಾಗಿರುವ ಮಗು ನಮ್ಮ ಠಾಣೆಯಲ್ಲಿದೆ ಅಂದಿದ್ದಾರೆ. ಬಳಿಕ ಮಗುವನ್ನು ಪೋಷಕರಿಗೆ ಒಪ್ಪಿಸಲಾಗಿದೆ.

ಮಗು ಪೊಲೀಸರ ಕೈ ಸೇರಿದ್ದು ಹೇಗೆ..

ಮೊದಲ ದಿನ ಶಾಲೆಗೆ ಹೋಗಿದ್ದ ರೋಹನ್ ಮಧ್ಯಾಹ್ನ 12 ಗಂಟೆ ಸುಮಾರಿಗೆ ಶೌಚಾಲಯಕ್ಕೆ ಹೋಗಿದ್ದಾನೆ. ಈ ವೇಳೆ ಅದ್ಯಾರೋ ಅಪರಿಚಿತರು ಶಾಲೆಗೆ ರಜೆ ಅಂದಿದ್ದಾರೆ. ಇದರಿಂದ ಗಲಿಬಿಲಿಯಾದ ಬಾಲಕ ಶಾಲೆ ಆವರಣದಿಂದ ಹೊರ ಬಂದಿದ್ದಾನೆ. ಮನೆಗೆ ಹೋಗುವ ದಾರಿ ತಿಳಿಯದೆ ಆತಂಕಿತವನಾಗಿದ್ದಾನೆ. ಅದೃಷ್ಟ ಅನ್ನುವಂತೆ ಅ ದಾರಿಯಲ್ಲಿ ಬಂದ ಆಟೋ ಚಾಲಕ ಗೋವಿಂದರಾಜು, ಅನುಮಾನಗೊಂಡು ಮಗುವನ್ನು ಪ್ರಶ್ನಿಸಿದ್ದಾರೆ. ಉತ್ತರಿಸದ ಮಗು ಅಳಲು ಪ್ರಾರಂಭಿಸಿದೆ. ಬಳಿಕ ಮಗುವನ್ನು ಸಮಾಧಾನ ಪಡಿಸಿದ ಗೋವಿಂದರಾಜು ತಮ್ಮದೇ ಆಟೋ ದಲ್ಲಿ ಮಗುವನ್ನು ವಿಶ್ವೇಶ್ವರಪುರಂ ಪೊಲೀಸರಿಗೆ ಒಪ್ಪಿಸಿದ್ದಾರೆ.

ಇಡೀ ಪ್ರಕರಣದಲ್ಲಿ ಶಾಲೆಯ ಶಿಕ್ಷಕರ ನಿರ್ಲಕ್ಷ್ಯ ಎದ್ದು ಕಾಣಿಸುತ್ತಿದೆ.

Tags: Bangalore
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್