crossorigin="anonymous"> ಡಿಕೆಶಿಯನ್ನು ಮೀರಿಸುವ ಆಸ್ತಿ : ಕೋಟಿ ಕೋಟಿ ಕುಬೇರನಿಗೆ ಕಾಂಗ್ರೆಸ್ ಟಿಕೆಟ್ ಕೊಟ್ಟಿದ್ಯಾಕೆ..? - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಡಿಕೆಶಿಯನ್ನು ಮೀರಿಸುವ ಆಸ್ತಿ : ಕೋಟಿ ಕೋಟಿ ಕುಬೇರನಿಗೆ ಕಾಂಗ್ರೆಸ್ ಟಿಕೆಟ್ ಕೊಟ್ಟಿದ್ಯಾಕೆ..?

Radhakrishna Anegundi by Radhakrishna Anegundi
24-11-21, 11 : 26 am
in ರಾಜ್ಯ
kgf babu
Share on FacebookShare on TwitterWhatsAppTelegram

ಬೆಂಗಳೂರು :  ರಾಜಕೀಯ ಮೌಲ್ಯಗಳು, ಕಾರ್ಯಕರ್ತರ ಶ್ರಮಕ್ಕೆ ಪಕ್ಷದಿಂದ ಗೌರವ ಎಲ್ಲವೂ ಇದೀಗ ನಗಣ್ಯ. ಕಾಸಿದ್ದವನೇ ಬಾಸು ಅನ್ನುವುದು ಇತ್ತೀಚಿನ ಚುನಾವಣೆಗಳಲ್ಲಿ ಸಾಬೀತಾಗಿದೆ. ಅದೇ ರೀತಿ ಈ ಬಾರಿಯ ವಿಧಾನಸಭೆಯ ಚುನಾವಣೆಯಲ್ಲೂ ಕೋಟಿ ಕೋಟಿ ಕುಬೇರರಿಗೆ ಬಹುತೇಕ ಎಲ್ಲಾ ಪಕ್ಷಗಳು ಮಣೆ ಹಾಕಿವೆ.

ಆ ಪೈಕಿ ಕಾಂಗ್ರೆಸ್ ಒಂದು ಹೆಜ್ಜೆ ಮುಂದೆ ಹೋಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನೇ ಮೀರಿಸುವ ಆಸ್ತಿ ಹೊಂದಿರುವ ವ್ಯಕ್ತಿಗೆ ಟಿಕೆಟ್ ನೀಡಲಾಗಿದೆ. ಅಚ್ಚರಿ ಅಂದ್ರೆ ಬೆಂಗಳೂರು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಕೆಜಿಎಫ್ ಬಾಬು ಖ್ಯಾತಿಯ ಯೂಸೂಫ್ ಷರೀಫ್ ರಾಜ್ಯ ರಾಜಕಾರಣದಲ್ಲಿ ಅತಿ ಶ್ರೀಮಂತ ರಾಜಕಾರಣಿ ಎಂದೇ ಹೆಸರು ಮಾಡಿರುವ ಸಚಿವ ಎಂಟಿಬಿ ನಾಗರಾಜ್‌ ಅವರನ್ನು ಮೀರಿಸುವ ಆಸ್ತಿ ಹೊಂದಿದ್ದಾರೆ.

dkc1

97.98 ಕೋಟಿ ರೂ. ಮೌಲ್ಯದ ಚರಾಸ್ತಿ, 1643.59 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಸೇರಿ ಒಟ್ಟು 1,741.57 ಕೋಟಿ ರೂ. ಆಸ್ತಿ ಘೋಷಿಸಿಕೊಂಡಿರುವ ಯೂಸೂಫ್ ಷರೀಫ್ ಅವರ ವ್ಯವಹಾರ ಲೋಕ ನೋಡಿದರೆ ಮುಂದಿನ ದಿನಗಳಲ್ಲಿ ರಾಜ್ಯ ರಾಜಕೀಯದಲ್ಲಿ ಕಾಂಚಾಣದ ಸದ್ದಿನ ಮುನ್ಸೂಚನೆ ಸ್ಪಷ್ಟವಾಗಿ ಸಿಕ್ಕಿದೆ.ಯೂಸುಫ್‌ ಷರೀಫ್‌ ಬಳಿ 100 ಕೋಟಿ ರೂ.ಗೂ ಹೆಚ್ಚು ಮೊತ್ತದ ಚರಾಸ್ತಿಯಿದ್ದು, ಮೊದಲ ಹೆಂಡತಿ ಬಳಿ 98.96 ಲಕ್ಷ ರೂ., ಎರಡನೇ ಹೆಂಡತಿ ಬಳಿ 32.22 ಲಕ್ಷ ರೂ., ಪುತ್ರಿ ಬಳಿ 66.36 ಲಕ್ಷ ರೂ. ಹಾಗೂ ಪುತ್ರನ ಬಳಿ 11.57 ಲಕ್ಷ ರೂ. ಮೌಲ್ಯದ ಚರಾಸ್ತಿ ಇದೆ.

ಇನ್ನು ಸ್ಥಿರಾಸ್ತಿ ಲೆಕ್ಕಕ್ಕೆ ಬರುವುದಾದ್ರೆ  ಯೂಸುಫ್‌ ಹೆಸರಿನಲ್ಲಿ 47.31 ಕೋಟಿ ರೂ. ಮೌಲ್ಯದ ಎರಡು ಕೃಷಿ ಭೂಮಿ, ಮೊದಲ ಪತ್ನಿ ಹೆಸರಿನಲ್ಲಿ 1.30 ಕೋಟಿ ರೂ. ಮೌಲ್ಯದ ಕೃಷಿ ಭೂಮಿ, 1593.27 ಕೋಟಿ ರೂ. ಮೊತ್ತದ ಕೃಷಿಯೇತರ ಜಮೀನು ಹೀಗೆ ಒಟ್ಟು 26 ಜಮೀನುಗಳನ್ನು ಅವರು ಹೊಂದಿದ್ದಾರೆ. ಇನ್ನು ಅವರ ಮನೆ ನಿವೇಶನದ ಮೌಲ್ಯ  3.01 ಕೋಟಿ ರೂಪಾಯಿ.ವಾಹನಗಳ ಲೆಕ್ಕಕ್ಕೆ ಬಂದ್ರೆ  ಕೆಜಿಎಫ್ ಬಾಬು, 2.99 ಕೋಟಿ ರೂ. ಮೌಲ್ಯದ ವಾಹನವನ್ನು ಹೊಂದಿದ್ದು, 2.01 ಕೋಟಿ ರೂ. ಬೆಲೆಯ ಒಂದು ರೋಲ್ಸ್‌ ರಾಯ್ಸ್‌ ಕಾರು, ಎರಡು ಫಾರ್ಚ್ಯೂನರ್‌ ಕಾರುಗಳು ಅವರಲ್ಲಿದ್ದು ಮೊದಲ ಪತ್ನಿ 1.65 ಲಕ್ಷ ರೂ. ಮೌಲ್ಯದ ವಾಹನದೊಂದಿಗೆ ಎರಡು ಟೂವೀಲ್ಹರ್ ಕೂಡಾ ಹೊಂದಿದ್ದಾರೆ.

kgf babu1

ಚಿನ್ನಾಭರಣಗಳ ಲೆಕ್ಕಕ್ಕೆ ಬಂದ್ರೆ  ಷರೀಫ್‌ ಬಳಿ 2.19 ಕೋಟಿ ರೂ. ಮೌಲ್ಯದ ಚಿನ್ನ, ಬೆಳ್ಳಿ ಮತ್ತು ವಜ್ರಾಭರಣ, ಎಲೆಕ್ಟ್ರಾನಿಕ್ಸ್‌ ಮತ್ತು ಎಲೆಕ್ಟ್ರಿಕ್‌ ವಸ್ತುಗಳಿವೆ. ಮೊದಲ ಪತ್ನಿ ಬಳಿ 77.15 ಲಕ್ಷ ರೂ., ಎರಡನೇ ಪತ್ನಿ ಬಳಿ 30.37 ಲಕ್ಷ ರೂ., ಪುತ್ರಿ ಬಳಿ 58.73 ಲಕ್ಷ ರೂ. ಮೌಲ್ಯದ ಆಭರಣಗಳಿವೆ ಎಂದು ಅವರ ಅಫಿಡವಿತ್ ನಲ್ಲಿ ಹೇಳಿಕೊಂಡಿದ್ದಾರೆ.ಇನ್ನು ಇಷ್ಟೆಲ್ಲಾ ಆಸ್ತಿಗಳ ಒಡೆಯ ಯೂಸುಫ್‌ ಷರೀಫ್‌ 58.12 ಕೋಟಿ ರೂ.ವನ್ನು ಇತರರಿಗೆ ಸಾಲವಾಗಿ ನೀಡಿದ್ದಾರೆ.

ಈ ಆಸ್ತಿಯನ್ನು ನೋಡಿಯೇ ಅವರಿಗೆ ಕಾಂಗ್ರೆಸ್ ಟಿಕೆಟ್ ಕೊಟ್ಟಿದೆ ಅನ್ನುವುದು ರಾಜಕೀಯ ಪಡಸಾಲೆಯ ಮಾತು. ಮುಂದಿನ ಚುನಾವಣೆಗೆ ತನು ಮನ ಧನದಿಂದ ದುಡಿಯುವ ವ್ಯಕ್ತಿಗೆ ಕಾಂಗ್ರೆಸ್ ಬೇಕಾಗಿದ್ದಾರೆ, ಹೀಗಾಗಿಯೇ ಅವರನ್ನು ವಿಧಾನ ಪರಿಷತ್ ಗೆ ಕಳುಹಿಸಲು ಕಾಂಗ್ರೆಸ್ ಮನಸ್ಸು ಮಾಡಿದೆಯಂತೆ.

Tags: CongressMAIN
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್