crossorigin="anonymous"> ರಾವತ್ ಸಾವು ಸಂಭ್ರಮಿಸಿದವರ ವಿರುದ್ಧ ಕಾರ್ಯಾಚರಣೆ ಪ್ರಾರಂಭ : ನಾಲ್ವರ ಬಂಧನ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ರಾವತ್ ಸಾವು ಸಂಭ್ರಮಿಸಿದವರ ವಿರುದ್ಧ ಕಾರ್ಯಾಚರಣೆ ಪ್ರಾರಂಭ : ನಾಲ್ವರ ಬಂಧನ

ಕರ್ನಾಟಕದಲ್ಲೂ ಬಿಪಿನ್ ರಾವತ್ ಸಾವನ್ನು ಸಂಭ್ರಮಿಸಿದವರಿದ್ದಾರೆ. ಅದ್ಯಾಕೆ ಅವರ ಬಂಧನಕ್ಕೆ ವಿಳಂಭವಾಗುತ್ತಿದೆಯೋ ಗೊತ್ತಿಲ್ಲ. ವೀರ ಯೋಧನ ಸಾವನ್ನು ಸಂಭ್ರಮಿಸಿದವರಿಗೆ ಶಿಕ್ಷೆಯಾಗದಿದ್ರೆ ಮುಂದೆ ಭಾರೀ ಅಪಾಯವಿದೆ

Radhakrishna Anegundi by Radhakrishna Anegundi
11-12-21, 8 : 46 am
in ದೇಶ
For Remarks Against General Bipin Rawat, Gujarat Man Tamil Nadu Youtuber Maridhas arrested
Share on FacebookShare on TwitterWhatsAppTelegram

ನವದೆಹಲಿ : ಹೆಲಿಕಾಫ್ಟರ್ ದುರಂತದಲ್ಲಿ ವೀರ ಮರಣ ಹೊಂದಿದ ಭಾರತೀಯ ಸಶಸ್ತ್ರ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಸಾವನ್ನು ಸಂಭ್ರಮಿಸಿದವರ ವಿರುದ್ಧ ಕಾರ್ಯಾಚರಣೆ ಪ್ರಾರಂಭವಾಗಿದೆ. ಈಗಾಗಲೇ ಈ ದೇಶ ದ್ರೋಹಿಗಳಿಗೆ ಇನ್ಮುಂದೆ ನೆಮ್ಮದಿಯಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಬಹಿರಂಗವಾಗಿಯೇ ಗುಡುಗಿದ್ದಾರೆ.

ಈ ನಡುವೆ ಬಿಪಿನ್ ರಾವತ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಮೂವರನ್ನು ಬಂಧಿಸಲಾಗಿದೆ. ರಾಜಸ್ತಾನ, ಗುಜರಾತ್ ಮತ್ತು ಜಮ್ಮು ಕಾಶ್ಮೀರದಲ್ಲಿ ತಲಾ ಒಬ್ಬರನ್ನು ಬಂಧಿಸಲಾಗಿದೆ.

ಜಮ್ಮು ಕಾಶ್ಮೀರದ ರಜೌರಿಯಾದಲ್ಲಿ ಅಂಗಡಿ ಇಟ್ಟುಕೊಂಡಿದ್ದ ವ್ಯಕ್ತಿಯೊಬ್ಬ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ. ಈತನನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನದ ಟೋಂಕ್ ಜಿಲ್ಲೆಯ ಜವಾದ್ ಖಾನ್ (21) ಎಂಬಾತ, ‘ ರಾವತ್ ನರಕಕ್ಕೆ ಹೋಗುವ ಮೊದಲೇ ದಹಿಸಿ ಹೋದರು ’ ಎಂದು ಪೋಸ್ಟ್ ಹಾಕಿದ್ದ. ಹೀಗಾಗಿ ತಾಲಿಬಾನಿ ಮನಸ್ಥಿತಿಯ ವ್ಯಕ್ತಿ ಇದೀಗ ಪೊಲೀಸ್ ಠಾಣೆ ಸೇರಿದ್ದಾನೆ.

ಇದನ್ನೂ ಓದಿ : ಮೂರು ವರ್ಷದ ಮಗು ಸೇರಿ 9 ಜನರಿಗೆ ಒಮಿಕ್ರೋನ್ : ರಾಜ್ಯದಲ್ಲಿ ಒಮಿಕ್ರೋನ್ ಚಿಕಿತ್ಸೆಗೆ ಮಾರ್ಗಸೂಚಿ

ಗುಜರಾತ್ ನ ಅಮ್ರೇಲಿಯಲ್ಲಿ ಶಿವಭಾಯಿ ರಾಮ್ ಎಂಬಾತ ರಾವತ್ ಸಾವನ್ನು ಸಂಭ್ರಮಿಸಿದ ಕರ್ಮಕ್ಕೆ ಪೊಲೀಸರ ಬಂಧನಕ್ಕೆ ಒಳಗಾಗಿದ್ದಾನೆ. ಈತ ಈ ಹಿಂದೆಯೂ ಹಿಂದೂ ದೇವತೆಗಳನ್ನು ಅವಮಾನಿಸಿ ಪೋಸ್ಟ್ ಹಾಕಿದ್ದ. ಮತ್ತೊಂದು ಕಡೆ ರಾವತ್ ಸಾವಿನ ಸುದ್ದಿಯ ಮಾಧ್ಯಮ ವರದಿಗೆ ಅಸಭ್ಯ ಇಮೋಜಿ ಹಾಕಿದ ಕಾರಣಕ್ಕೆ ಜಮ್ಮು ಕಾಶ್ಮೀರ ಬ್ಯಾಂಕ್ ನ ಮಹಿಳಾ ಉದ್ಯೋಗಿ ಆಫ್ರೀನ್ ಳನ್ನು ಅಮಾನತು ಮಾಡಲಾಗಿದೆ. ಈ ನಡುವೆ ಕೇರಳದ ಸರ್ಕಾರಿ ವಕೀಲರೊಬ್ಬರು ರಾವತ್ ಸಾವಿನ ಬಗ್ಗೆ ಅತ್ಯಂತ ಕೀಳು ಮನಸ್ಥಿತಿಯ ಪೋಸ್ಟ್ ಹಾಕಿದ್ದಾರೆ. ಆದರೆ ಈ ಬಗ್ಗೆ ಪಿಣರಾಯಿ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ಇನ್ನು ತಮಿಳುನಾಡಿನ Maridhas ಹೆಸರಿಗ ಯೂ ಟ್ಯೂಬರ್ ಒಬ್ಬನನ್ನು ತಮಿಳುನಾಡು ಪೊಲೀಸರು ತಾಲಿಬಾನಿ ಮನಸ್ಥಿತಿಯ ಕಾರಣಕ್ಕೆ ಬಂಧಿಸಿದ್ದಾರೆ. ಈ ಯೂಟ್ಯೂಬರ್ ರಾವತ್ ಸಾವಿನ ಕುರಿತಂತೆ ಆಕ್ಷೇಪಾರ್ಹ ಟ್ವೀಟ್ ಮಾಡಿದ್ದ.

sslc-students-who-harassed-teachers-in-classroom-video-viral

ಶಿಕ್ಷಕರ ತಲೆಗೆ ಕಸದ ಬುಟ್ಟಿ ಹಾಕಿ ಹಲ್ಲೆ : ದಾವಣಗೆರೆಯಲ್ಲಿ ಅನಾಗರಿಕ ಘಟನೆ

ದಾವಣಗೆರೆ :  ಭವಿಷ್ಯದ ಪ್ರಜೆಗಳೆಂದು ಕರೆಸಿಕೊಂಡಿರುವ ಯುವ ಸಮಾಜ ಸಿಕ್ಕಾಪಟ್ಟೆ ಹಾದಿ ತಪ್ಪಿರುವುದು ಆತಂಕಕ್ಕೆ ಕಾರಣವಾಗಿದೆ.  ಅದರಲ್ಲೂ ಓದಿನಲ್ಲಿ ಮಗ್ನರಾಗಬೇಕಾಗಿರುವುದು ಅಪರಾಧ ಪ್ರಕಣಗಳಲ್ಲಿ ಕಾಣಿಸಿಕೊಳ್ಳುತ್ತಿರುವುದು ಉತ್ತಮ ಬೆಳವಣಿಗೆಯಲ್ಲ.

ಈ ನಡುವೆ ಬುದ್ದಿ ಹೇಳ್ತಾರೆ ಅನ್ನುವ ಏಕೈಕ ಕಾರಣಕ್ಕೆ ವಿದ್ಯಾರ್ಥಿಗಳ ಗುಂಪೊಂದು ಶಿಕ್ಷಕರ ತಲೆಗೆ ಕಸದ ಬುಟ್ಟಿ ಹಾಕಿ ಹಲ್ಲೆ ನಡೆಸಿದ ಘಟನೆ ಚನ್ನಗಿರಿ ತಾಲೂಕಿನ ನಲ್ಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. ಇದೀಗ ಈ ವಿಡಿಯೋ ವೈರಲ್ ಆಗಿದ್ದು, ವಿದ್ಯಾರ್ಥಿಗಳನ್ನು ಟಿಸಿ ಕೊಟ್ಟು ಕಳುಹಿಸಲಾಗಿದೆ. ಈ ನಡುವೆ ವಿದ್ಯಾರ್ಥಿಗಳ ವಿರುದ್ಧ ಪೊಲೀಸ್ ಪ್ರಕರಣ ದಾಖಲಿಸುವಂತೆ ಆಗ್ರಹ ಕೇಳಿ ಬಂದಿದೆ.

ಇನ್ನು ಘಟನೆಯ ಬೆನ್ನಲ್ಲೇ ಶಾಲೆಗೆ ದೌಡಾಯಿಸಿದ ಶಾಸಕ ಮಾಡಾಳಿ ವಿರೂಪಾಕ್ಷಪ್ಪ, ಶಾಲಾ ಆಡಳಿತ ಮಂಡಳಿ, ಶಿಕ್ಷಕರು, ಗ್ರಾಮಸ್ಥರು, ಪೋಷಕರು, ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದರು. ಇದೇ ಸಭೆಯಲ್ಲಿ ವಿದ್ಯಾರ್ಥಿಗಳಿಗೆ ಟಿಸಿ ಕೊಡುವ ನಿರ್ಧಾರಕ್ಕೆ ಬರಲಾಯ್ತು.

ಈ ಹಲ್ಲೆ ನಡೆಸಿದ 10ನೇ ತರಗತಿಯ ಹುಡುಗರ ಗ್ಯಾಂಗ್ ಕಳೆದ ಕೆಲ ದಿನಗಳಿಂದ ಕಿಡಿಗೇಡಿ ಕೃತ್ಯಗಳನ್ನು ಎಸಗುತ್ತಿತ್ತು. ಈ ಬಗ್ಗೆ ಶಾಲೆಯ ಹಿಂದಿ ಶಿಕ್ಷಕರೊಬ್ಬರು ಪದೇ ಪದೇ ಬುದ್ದಿಮಾತು ಹೇಳಿದ್ದರು. ಹುಡುಗು ಬುದ್ದಿ ಇಂದಲ್ಲ ನಾಳೆ ಬದಲಾಗುತ್ತಾರೆ ಅನ್ನುವುದು ಅವರ ನಿರೀಕ್ಷೆಯಾಗಿತ್ತು. ಆದರೆ ಸಂಯಮದಿಂದ ಕಾದ ಶಿಕ್ಷಕರಿಗೆ ಹಲ್ಲೆ ಮಾಡಲು ಮುಂದಾದ ಈ ಪುಂಡರ ಗ್ಯಾಂಗ್ ಹಿಂದಿ ಶಿಕ್ಷಕರ ತಲೆಗೆ ಕಸದ ಬುಟ್ಟಿ ಮುಚ್ಚಿ ಹಲ್ಲೆ ನಡೆಸಿದೆ. ಈ ಘಟನೆಯನ್ನು ಕೆಲ ವಿದ್ಯಾರ್ಥಿಗಳು ವಿಡಿಯೋ ಮಾಡಿಕೊಂಡಿದ್ದರು.

Tags: FEATUREDrawat
Share1TweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್