crossorigin="anonymous"> ಕೊರಗ ಸಮುದಾಯದ ಮೇಲೆ ಪೊಲೀಸ್ ದೌರ್ಜನ್ಯ : ರಾಕ್ಷಸಿ ಕೃತ್ಯ ಮೆರೆದ ಕೋಟ ಪೊಲೀಸರು..? - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕೊರಗ ಸಮುದಾಯದ ಮೇಲೆ ಪೊಲೀಸ್ ದೌರ್ಜನ್ಯ : ರಾಕ್ಷಸಿ ಕೃತ್ಯ ಮೆರೆದ ಕೋಟ ಪೊಲೀಸರು..?

Radhakrishna Anegundi by Radhakrishna Anegundi
29-12-21, 9 : 42 am
in ರಾಜ್ಯ
kota-police-lathi-charge-on-koraga-community
Share on FacebookShare on TwitterWhatsAppTelegram

ಉಡುಪಿ : ಕರ್ನಾಟಕದ ಪೊಲೀಸ್ ವ್ಯವಸ್ಥಗೆ ಸೂಕ್ತ ತರಬೇತಿಯ ಅವಶ್ಯಕತೆಯಿದೆ. ಅದರಲ್ಲೂ ಇನ್ಸ್ ಪೆಕ್ಟರ್ ಮತ್ತು ಕೆಳಹಂತದ ಸಿಬ್ಬಂದಿಗೆ ಜನ ಸಾಮಾನ್ಯರೊಂದಿಗೆ ಹೇಗೆ ನಡೆದುಕೊಳ್ಳಬೇಕು ಅನ್ನುವುದನ್ನು ವಿವರಿಸುವ ಅಗತ್ಯವಿದೆ. ಇತ್ತೀಚಿನ ದಿನಗಳಲ್ಲಿ ಪೊಲೀಸ್ ಠಾಣೆಗಳು ಮಾನವೀಯತೆ ಮರೆಯುತ್ತಿರುವ ಕಾರಣ ಈ ತರಬೇತಿಯ ಅಗತ್ಯವಿದೆ. ಇದಕ್ಕೆಲ್ಲಾ ಕಾರಣ ಉಡುಪಿಯಲ್ಲಿ ಕೊರಗ ಸಮುದಾಯದ ಮೇಲೆ ನಡೆದ ದೌರ್ಜನ್ಯ. ದುರಂತ ಅಂದ್ರೆ ಈ ಘಟನೆ ನಡೆದಿರುವುದು ರಾಜ್ಯ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ತವರೂರಿನಲ್ಲಿ.

ಕುಂದಾಪುರ ಕೋಟತಟ್ಟು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊರಗ ಕಾಲನಿಯ ರಾಜೇಶ್ ಅನ್ನುವವರ ವಿವಾಹ ಡಿಸೆಂಬರ್ 29ಕ್ಕೆ ನಿಗದಿಯಾಗಿತ್ತು. ಈ ಸಂಬಂಧ ಸೋಮವಾರ ವರನ ಮನೆಯಲ್ಲಿ ಮೆಹಂದಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸೋಮವಾರ ರಾತ್ರಿಯ ಮೆಹಂದಿ ಕಾರ್ಯಕ್ರಮದಲ್ಲಿ ಡಿಜೆ ವ್ಯವಸ್ಥೆಯೊಂದಿಗೆ ಊಟವನ್ನೂ ಆಯೋಜಿಸಲಾಗಿತ್ತು. ಇಡೀ ಮದುವೆ ಮನೆ ಸಂಭ್ರಮದಲ್ಲಿ ಮುಳುಗಿದ್ರೆ. 10 ಗಂಟೆಯ ಹೊತ್ತಿಗೆ ಯಮಕಂಕಿರಂತೆ ಆಗಮಿಸಿದ್ದು ಕೋಟ ಪೊಲೀಸರು.

ಪಿಎಸ್ಐ ಸಂತೋಷ್ ಸೇರಿ ಬಂದ ಹಲ ಸಿಬ್ಬಂದಿ ಡಿಜೆ ತೆಗೆಯುವಂತೆ ಸೂಚಿಸಿದ್ದಾರೆ. ಹಾಗೇ ಹೇಳಿ ಹೋಗಿದ್ರೆ ಪರವಾಗಿರಲಿಲ್ಲ, ಬದಲಾಗಿ ಮೆಹಂದಿ ಮನೆಯಲ್ಲಿ ಸೇರಿದ್ದವರ ಮೇಲೆ ಲಾಠಿ ಬೀಸಿದ್ದಾರೆ. ಮಕ್ಕಳು ಮಹಿಳೆಯರು ಅನ್ನುವುದನ್ನು ಗಮನಿಸಿದೆ ಲಾಠಿಯೇಟು ಕೊಟ್ಟಿದ್ದಾರೆ. ಇನ್ನು ಘಟನೆ ಮೊಬೈಲ್ ಚಿತ್ರೀಕರಣ ಮಾಡುತ್ತಿದ್ದವರಿಗೂ ಲಾಠಿ ಬೀಸಿ ಮೊಬೈಲ್ ಕಸಿದು ವಿಡಿಯೋ ಡಿಲೀಟ್ ಮಾಡಿಸಿದ್ದಾರೆ. ಈ ವೇಳೆ ಸಹಜವಾಗಿಯೇ ಪೊಲೀಸರ ಮೇಲೆ ಆಕ್ರೋಶ ವ್ಯಕ್ತವಾಗಿದೆ.(  ಕ್ರಿಯೆಗೆ ಪ್ರತಿಕ್ರಿಯೆ ಎಂದು ಸಿಎಂ ಬೊಮ್ಮಾಯಿಯವರೇ ಹೇಳಿಲ್ಲವೇ )

kota koraga1

ಅಷ್ಟಕ್ಕೆ ಪೊಲೀಸರ ಅಟ್ಟಹಾಸ ನಿಲ್ಲಲಿಲ್ಲ, ಮದುವೆ ಮನೆಯಲ್ಲಿದ್ದ ಮೂವರನ್ನು ಜೀಪಿನಲ್ಲಿ ಕೂರಿಸಿ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಠಾಣೆಯಲ್ಲಿ ಬಟ್ಟೆ ಬಿಚ್ಚಿಸಿ ಮತ್ತೆ ಹಲ್ಲೆ ಮಾಡಿದ್ದಾರೆ.

ಡಿಜೆ ಸೌಂಡ್ ಹೆಚ್ಚಾಗಿದೆ ಅಂದ್ರೆ ಹಲ್ಲೆ ನಡೆಸು ಅಧಿಕಾರ ಕಟ್ಟವರು ಯಾರು ಅನ್ನುವುದೇ ಈಗಿರುವ ಪ್ರಶ್ನೆ. ಹೋಗ್ಲಿ ಕೊರಗರು ಬಡವರು ಅನ್ನುವ ಕಾರಣಕ್ಕೆ ದೌರ್ಜನ್ಯ ನಡೆಸಲಾಗಿದೆ. ಇದೇ ಡಿಜೆ ಸದ್ದು ಕೋಟ ಶ್ರೀನಿವಾಸ ಪೂಜಾರಿ ಮನೆಯಲ್ಲೋ, ಪ್ರಮೋದ್ ಮಧ್ವರಾಜ್ ಮನೆಯಲ್ಲೋ ಕೇಳಿ ಬಂದ್ರೆ ಪೊಲೀಸರು ಹೀಗೆ ಲಾಠಿ ಬೀಸುವ ಎದೆಗಾರಿಕೆ ತೋರಿಸುತ್ತಿದ್ರ ಅನ್ನುವುದು ಪ್ರಜ್ಞಾವಂತರ ಮಾತು.

ಘಟನೆಯ ಬಳಿಕ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ವ್ಯವಸ್ಥೆಯ ಬಗ್ಗೆ ಖೇದ ವ್ಯಕ್ತಪಡಿಸಿ ಕ್ಷಮೆ ಕೇಳಿದ್ದಾರೆ. ಸಚಿವ ಶ್ರೀನಿವಾಸ ಪೂಜಾರಿ ಇಂದು ಕೊರಗ ಕೇರಿಗೆ ಭೇಟಿ ನೀಡಲಿದ್ದು, ನೊಂದ ಕುಟುಂಬಕ್ಕೆ ಸಾಂತ್ವಾನ ಹೇಳಲಿದ್ದಾರೆ.

ಇನ್ನು ಉಡುಪಿ ಎಸ್ಪಿ ಎನ್ ವಿಷ್ಣುವರ್ಧನ್ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಪೊಲೀಸರ ಮೇಲೆ ನಂಬಿಕೆ ಇರಲಿ ಅಂದಿದ್ದಾರೆ. ಜೊತೆಗೆ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುತ್ತೇನೆ ಅಂದಿದ್ದಾರೆ.

ದೌರ್ಜನ್ಯ ಎಸಗಿದ ಪೊಲೀಸರಿಗೆ ಶಿಕ್ಷೆ ಅಂದ್ರೆ ಏನಾಗಬಹುದು, ನಾಲ್ಕೈದು ತಿಂಗಳು ಅಮಾನತುಗೊಂಡು ಮತ್ತೆ ಕೆಲಸಕ್ಕೆ ಮರಳುತ್ತಾರೆ. ಅವರೇನೂ ಶಾಶ್ವತವಾಗಿ ಮನೆಗೆ ಹೋಗೋದಿಲ್ಲ. ಒಂದೆರೆಡು ದಿನ ಜೈಲಿಗೂ ಹೋಗೋದಿಲ್ಲ ಅಂತಾರೆ ಈ ಹಿಂದೆ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರು.

Tags: FEATUREDkota
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್