crossorigin="anonymous"> ಒಮಿಕ್ರೋನ್ ಶ್ವಾಸಕೋಶಕ್ಕೆ ಇಳಿಯೋದಿಲ್ಲ : ಆತಂಕದ ನಡುವೆ ಗುಡ್ ನ್ಯೂಸ್ ಕೊಟ್ಟ ಬೆಂಗಳೂರು ವೈದ್ಯ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಒಮಿಕ್ರೋನ್ ಶ್ವಾಸಕೋಶಕ್ಕೆ ಇಳಿಯೋದಿಲ್ಲ : ಆತಂಕದ ನಡುವೆ ಗುಡ್ ನ್ಯೂಸ್ ಕೊಟ್ಟ ಬೆಂಗಳೂರು ವೈದ್ಯ

ಒಮಿಕ್ರೋನ್ ಗಂಟಲಿನಿಂದ ಕೆಳಗೆ ಇಳಿದು ಶ್ವಾಸಕೋಶಕ್ಕೆ ಹಾನಿ ಮಾಡುವಷ್ಟು ತಾಕತ್ತು ಹೊಂದಿಲ್ಲ

Radhakrishna Anegundi by Radhakrishna Anegundi
04-01-22, 11 : 42 am
in ರಾಜ್ಯ
omicron symptoms covid 19 Dr US Vishal Rao, member, committee for Covid-19
Share on FacebookShare on TwitterWhatsAppTelegram

ಬೆಂಗಳೂರು : ದೇಶದಲ್ಲಿ ಮೂರನೇ ಅಲೆಗೆ ಕಾರಣವಾಗಿರುವ ಒಮಿಕ್ರೋನ್ ಆತಂಕಕ್ಕೆ ಕಾರಣವಾಗಿದೆ. ಅತ್ಯಂತ ವೇಗವಾಗಿ ಹರಡುವ ಒಮಿಕ್ರೋನ್ ರೂಪಾಂತರಿ ವೈರಸ್ ದೇಶದ ಆರೋಗ್ಯ ವ್ಯವಸ್ಥೆಯ ಮೇಲೆ ತೀವ್ರ ಒತ್ತಡ ಹೇರುವ ಲಕ್ಷಣಗಳಿದೆ.

ಎರಡನೇ ಅಲೆಯ ಸಂದರ್ಭದಲ್ಲಿ ಕಾಣಿಸಿಕೊಂಡ ಡೆಲ್ಟಾ ವೈರಸ್ ದೊಡ್ಡ ಮಟ್ಟದ ಹಾನಿ ಮಾಡಿತ್ತು.  ಹೀಗಾಗಿ ಮೂರನೇ ಅಲೆಗೆ ಕಾರಣವಾಗಿರುವ ಒಮಿಕ್ರೋನ್ ಬಗ್ಗೆ ಸಹಜವಾಗಿಯೇ ಆತಂಕವಿದೆ. ಎರಡನೇ ಅಲೆ ಸಂದರ್ಭದಲ್ಲಿ ಪ್ರಾಣವಾಯುವಿಗಾಗಿ ಪರದಾಡಿದ ಘಳಿಗೆ ಕಣ್ಣ ಮುಂದಿದೆ. ಹೀಗಾಗಿ ಈ ಬಾರಿ ಏನು ಕಾದಿದೆಯೋ ಅನ್ನುವುದೇ ಎಲ್ಲರ ಪ್ರಶ್ವೆ.

ಈ ಆತಂಕದ ನಡುವೆ ಇದೀಗ ಬೆಂಗಳೂರಿನ ವೈದ್ಯ ಡಾ. ವಿಶಾಲ್ ರಾವ್ ಶುಭ ಸುದ್ದಿಯೊಂದನ್ನು ಕೊಟ್ಟಿದ್ದು, ಡೆಲ್ಟಾಗೆ ಹೋಲಿಸಿದರೆ ಒಮಿಕ್ರೋನ್ ರೂಪಾಂತರಿ ವೈರಸ್ ಶ್ವಾಸಕೋಶಕ್ಕೆ ಹೆಚ್ಚು ಹಾನಿ ಮಾಡೋದಿಲ್ಲ ಅಂದಿದ್ದಾರೆ. ಹೀಗಾಗಿ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯೂ ಕಡಿಮೆ ಇರಲಿದೆ ಅನ್ನುವುದು ವಿಶಾಲ್ ರಾವ್ ಅವರ ಮಾತು.

ಒಮಿಕ್ರೋನ್ ರೂಪಾಂತರಿ ವೈರಸ್ ಮಾನವ ದೇಹದ ಮೇಲೆ ಬೀರುವ ಪರಿಣಾಮ ಕುರಿತಂತೆ  ಹಾಂಕಾಂಗ್ ವಿವಿ ಅಧ್ಯಯನ ನಡೆಸಿದ್ದು, ಈ ಅಧ್ಯಯನ ಪ್ರಕಾರ , ಡೆಲ್ಟಾಗೆ ಹೋಲಿಸಿದರೆ ಒಮಿಕ್ರೋನ್ ಸಾಧು ವೈರಸ್ ಅನ್ನುವುದು ಗೊತ್ತಾಗಿದೆ.

ಒಮಿಕ್ರೋನ್ ಹರಡುವ ಪ್ರಮಾಣ ಶೇ70ರಷ್ಟಿದ್ದರೂ, ಶ್ವಾಸಕೋಶಕ್ಕೆ ಹಾನಿ ಮಾಡುವ ಪ್ರಮಾಣ ತೀರಾ ಕಡಿಮೆಯಿದ್ದು , ಶೇ5ರಷ್ಟು ಮಂದಿಗೆ ಮಾತ್ರ ಆಕ್ಸಿಜನ್ ಬೇಕಾಗಬಹುದು. ಆದರೆ ಡೆಲ್ಟಾದಲ್ಲಿ ಶೇ 17ರಷ್ಟು ಮಂದಿ ಪ್ರಾಣವಾಯುವಿನ ಅಗತ್ಯತೆ ಕಂಡು ಬಂದಿತ್ತು ಎಂದು ಡಾ. ವಿಶಾಲ್ ರಾವ್ ಹೇಳಿದ್ದಾರೆ.

ಈಗ ನಡೆದಿರುವ ಸಂಶೋಧನೆಗಳಲ್ಲಿ ಒಮಿಕ್ರೋನ್ ರೂಪಾಂತರಿ ವೈರಸ್ ನೆಗಡಿ, ಕೆಮ್ಮು ಉಂಟು ಮಾಡಿದೆ. ಒಮಿಕ್ರೋನ್ ಗಂಟಲಿನಿಂದ ಕೆಳಗೆ ಇಳಿದು ಶ್ವಾಸಕೋಶಕ್ಕೆ ಹಾನಿ ಮಾಡುವಷ್ಟು ತಾಕತ್ತು ಹೊಂದಿಲ್ಲ. ಹೀಗಾಗಿ ಸರಿಯಾಗಿ ಮಾಸ್ಕ್ ಬಳಸಿದರೆ ಮೂರನೇ ಅಲೆಯನ್ನು ಧೈರ್ಯವಾಗಿ ಎದುರಿಸಬಹುದಾಗಿದೆ.

ಇನ್ನು ಹಾಂಕಾಂಗ್ ವಿವಿಯ ಸಂಶೋಧನೆಗೆ ಪೂರಕವಾಗಿ ನೋಡುವುದಾದರೆ ರಾಜ್ಯದಲ್ಲಿ ಈ ತನಕ ಒಮಿಕ್ರೋನ್ ದೃಢಪಟ್ಟವರ ಪೈಕಿ ಯಾರೊಬ್ಬರೂ ಗಂಭೀರವಾಗಿಲ್ಲ. ಮಾತ್ರವಲ್ಲದೆ ಬಹುತೇಕ ಮಂದಿಯಲ್ಲಿ ರೋಗ ಲಕ್ಷಣಗಳೇ ಇಲ್ಲ ಎಂದು ವಂಶವಾಹಿ ಪರೀಕ್ಷೆಗಳ ಸರ್ವೇಕ್ಷಣಾ ಸಮಿತಿ ಸದಸ್ಯರಾಗಿರುವ ಡಾ. ವಿಶಾಲ್ ರಾವ್ ಹೇಳಿದ್ದಾರೆ.

Tags: CoronaFEATURED
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್