crossorigin="anonymous"> Shivamogga Harsha murder case : ಜೈಲಿನಲ್ಲಿ ಆರೋಪಿಗಳಿಗೆ ರಾಜಾತಿಥ್ಯ : ಬಿಜೆಪಿ ಸರ್ಕಾರದ ವಿರುದ್ಧ ಭುಗಿಲೆದ್ದ ಆಕ್ರೋಶ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Shivamogga Harsha murder case : ಜೈಲಿನಲ್ಲಿ ಆರೋಪಿಗಳಿಗೆ ರಾಜಾತಿಥ್ಯ : ಬಿಜೆಪಿ ಸರ್ಕಾರದ ವಿರುದ್ಧ ಭುಗಿಲೆದ್ದ ಆಕ್ರೋಶ

Radhakrishna Anegundi by Radhakrishna Anegundi
04-07-22, 9 : 34 pm
in ರಾಜ್ಯ
Shivamogga Harsha murder case prisoners-are-using-mobiles-in-bengaluru-central-jail
Share on FacebookShare on TwitterWhatsAppTelegram

ಹಿಂದುಗಳ ರಕ್ಷಣೆ ಸೇರಿದಂತೆ ಹಿಂದೂಗಳ ಪರ ಎಂದು ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರದ ಅವಧಿಯಲ್ಲೇ Shivamogga Harsha murder case ನಲ್ಲಿ ಜೈಲು ಸೇರಿರುವ ಆರೋಪಿಗಳು ಎಂಜಾಯ್ ಮಾಡುತ್ತಿದ್ದಾರೆ.

ಬೆಂಗಳೂರು :  ಶಿವಮೊಗ್ಗದಲ್ಲಿ ನಡೆದ ಭಜರಂಗದಳ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣ ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡಿತ್ತು. ರಾಜಕೀಯ ಪಕ್ಷಗಳು ಇದೊಂದು ಕೊಲೆ ಪ್ರಕರಣದಲ್ಲಿ ಆಡಿದ ಮಾತುಗಳಿಗೆ ಲೆಕ್ಕವಿಲ್ಲ. ಅಷ್ಟೇ ಯಾಕೆ ಹರ್ಷನ ಕುಟುಂಬಕ್ಕೆ ಜನ ಸಹಾಯ ಹಸ್ತವನ್ನು ಕೂಡಾ ಚಾಚಿದ್ದರು. ರಾಜ್ಯದಲ್ಲಿ ಬಿಜೆಪಿ ಸರ್ಕಾರವಿರುವ ಕಾರಣ ಆರೋಪಿಗಳಿಗೆ ಶಿಕ್ಷೆ ಗ್ಯಾರಂಟಿ ಅಂದುಕೊಂಡಿದ್ದರು. ಆದರೆ ಈಗ Shivamogga Harsha murder case ಹಳ್ಳ ಹಿಡಿಯುವ ಲಕ್ಷಣ ಗೋಚರಿಸುತ್ತಿದೆ. ಆರೋಪಿಗಳು ಜೈಲಿನಲ್ಲಿ ಬಿಂದಾಸ್ ಆಗಿದ್ರೆ, ಗೃಹ ಸಚಿವರು ಕಠಿಣ ಕ್ರಮದ ಭರವಸೆಯೊಂದಿಗೆ ಮಾತು ಮುಗಿಸಿದ್ದಾರೆ.

ಪರಪ್ಪನ ಅಗ್ರಹಾರ ( Bengaluru Central Jail ) ಸೇರಿರುವ ಆರೋಪಿಗಳು ಜೈಲಿನಲ್ಲೇ ಕೂತು, ಆಪ್ತರಿಗೆ ಕುಟುಂಬದ ಸದಸ್ಯರಿಗೆ ಕರೆ ಮಾಡುತ್ತಿದ್ದಾರೆ. ಅಷ್ಟು ಮಾತ್ರವಲ್ಲದೆ ಜೈಲಿನಲ್ಲಿ ಕೂತು ರೀಲ್ಸ್ ಬೇರೆ ಮಾಡುತ್ತಿದ್ದಾರೆ ಅನ್ನುವ ಆರೋಪಗಳು ಕೇಳಿ ಬಂದಿದೆ. ಹಾಗಾದ್ರೆ ಜೈಲಿನ ಅಧಿಕಾರಿಗಳು ಅದ್ಯಾವ ಕೆಲಸ ಮಾಡುತ್ತಿದ್ದಾರೆ. ಪರಿಸ್ಥಿತಿ ನೋಡಿದರೆ ಯಥಾ ರಾಜ ತಥಾ ಪ್ರಜಾ ಅನ್ನುವಂತಿದೆ. ಮುಖ್ಯಮಂತ್ರಿಗಳು, ಗೃಹ ಸಚಿವರು ಅಧಿಕಾರಿಗಳನ್ನು ಹಿಡಿತದಲ್ಲಿಟ್ಟುಕೊಂಡ್ರೆ ಹೀಗಾಗುತ್ತಿರಲಿಲ್ಲ.

ಇದನ್ನೂ ಓದಿ : ಜಮೀರ್ ಗೆ ಸೆಡ್ಡು :  ಈದ್ಗಾ ಮೈದಾನಕ್ಕಾಗಿ ಜುಲೈ 12ಕ್ಕೆ ಚಾಮರಾಜಪೇಟೆ ಬಂದ್

ಈ ನಡುವೆ ಅಣ್ಣನ ಕೊಲೆಯ ಆರೋಪಿಗಳು ಜೈಲಿನಲ್ಲಿ ಎಂಜಾಯ್ ಮಾಡುತ್ತಿರುವುದಕ್ಕೆ ಪ್ರತಿಕ್ರಿಯಿಸಿರುವ ಹರ್ಷನ ಸಹೋದರಿ ಅಶ್ವಿನಿ, ನಾವು ಬದುಕಿದ್ದೂ ಸತ್ತ ಹಾಗಾಗಿದೆ. ಕಠಿಣ ಕ್ರಮದ ಭರವಸೆ ಏನಾಗಿದೆ ಅನ್ನುವುದು ಈಗ ಗೊತ್ತಾಗಿದೆ. ಆರೋಪಿಗಳಿಗೆ ಶಿಕ್ಷೆಯಾಗುತ್ತದೆ ಅನ್ನುವ ನಂಬಿಕೆ ಕಳೆದು ಹೋಗಿದೆ. ಇನ್ನು ಜೈಲಿನ ಅಧಿಕಾರಿಗಳ ವರ್ಗಾವಣೆ ಮಾಡಿದರೆ ಸಾಲದು ಅವರ ಅಮಾನತು ಆಗಬೇಕು, ಒಂದು ವೇಳೆ ಸಸ್ಪಂಡ್ ಆಗದಿದ್ರೆ ನಾನೇ ಜೈಲಿನ ಮುಂದೆ ಧರಣಿ ಕೂರುತ್ತೇನೆ ಅಂದಿದ್ದಾರೆ.

ಕೊಡಗಿನಲ್ಲಿ ಮತ್ತೆ ಕಂಪಿಸಿದ ಭೂಮಿ : 9ನೇ ಬಾರಿ ಅದುರಿದ ವಸುಂಧರೆ : ಆತಂಕದಲ್ಲಿ ಜನ

ಕೊಡಗು : ಜಿಲ್ಲೆಯಲ್ಲಿ ಭೂಮಿ ಕಂಪನ ( earthquake) ಮುಂದುವರಿದಿದ್ದು, ಜುಲೈ 2 ರಂದು 8ನೇ ಬಾರಿಗೆ ಕಂಪಿಸಿದ ಭೂಮಿ, ಜುಲೈ 4 ರಂದು ಮತ್ತೆ ಕಂಪಿಸಿದೆ. ಪದೇ ಪದೇ ಭೂಮಿ ಕಂಪಿಸುತ್ತಿರುವುದು ಜನರಲ್ಲಿ ಆತಂಕ ಸೃಷ್ಟಿಸಿದೆ. ಇದೀಗ 9ನೇ ಬಾರಿಗೆ ಮಡಿಕೇರಿ ತಾಲೂಕಿನ ಚೆಂಬು, ಪೆರಾಜೆ ಭಾಗದಲ್ಲಿ ದೊಡ್ಡ ಶಬ್ಧದೊಂದಿಗೆ ಸಣ್ಣ ಪ್ರಮಾಣದಲ್ಲಿ ಭೂಮಿ ಕಂಪಿಸಿದೆ.

ಚೆಂಬು ಗ್ರಾಮದಲ್ಲೇ ಪದೇ ಪದೇ ಭೂಮಿ ಕಂಪಿಸುತ್ತಿರುವ ಹಿನ್ನಲೆಯಲ್ಲಿ ನೈಸರ್ಗಿತ ವಿಕೋಪ ಅಧ್ಯಯನ ತಂಡ ಭೇಟಿ ಕೊಟ್ಟಿದ್ದು, ಚೆಂಬು ಪ್ರೌಢ ಶಾಲೆಯಲ್ಲಿ seismometer ಅಳವಡಿಸಲಾಗಿದೆ.

ಇನ್ನು ಕೊಡಗು ಭಾಗದಲ್ಲಿ ಸಂಭವಿಸಿದ ಭೂಕಂಪನದ ವಿವರ ಹೀಗಿದೆ

ಜೂನ್ 23 : ಬೆಳಗ್ಗೆ 4:37 – ಹಾಸನ ಸಮೀಪದ ಮಲುಗಾನಹಳ್ಳಿ – 3.4 ತೀವ್ರತೆ

 ಜೂನ್ 26 : ಬೆಳಗ್ಗೆ 9:09 – ಕೊಡಗು ಸಮೀಪದ ಕರಿಕೆ – 3.2 ತೀವ್ರತೆ

ಜೂನ್ 28 : ಬೆಳಗ್ಗೆ 7:45 – ಕೊಡಗು ಸಮೀಪದ ಚೆಂಬು – 3 ತೀವ್ರತೆ

ಜೂನ್ 28 : ಸಂಜೆ 4: 40 – ಕೊಡಗು ಸಮೀಪದ ಚೆಂಬು – 3ರಷ್ಟು ತೀವ್ರತೆ

ಜೂನ್ 30 : ರಾತ್ರಿ 1:40 – ಸುಳ್ಯ ಸಮೀಪದ ಸಂಪಾಜೆ, ಪೆರಾಜೆ, ಗೂನಡ್ಕ – 1.8ರ ತೀವ್ರತೆ

ಜುಲೈ 1 : ಬೆಳಗ್ಗೆ  – ಕೊಡಗು ಮತ್ತು ಸುಳ್ಯದ ಹಲವು ಗಡಿ ಭಾಗಗಳಲ್ಲಿ 1.8ರಷ್ಟು ತೀವ್ರತೆ

ಜುಲೈ 2 : ಮಧ್ಯಾಹ್ನ 1.21 – ಚೆಂಬು, ಕರಿಕೆ, ಪೆರಾಜೆ ಭಾಗಗಳಲ್ಲಿ 1.8ರಷ್ಟು ತೀವ್ರತೆ

ಜುಲೈ 2 : ರಾತ್ರಿ 8 :30 – ಚೆಂಬು, ಕರಿಕೆ, ಪೆರಾಜೆ ಪ್ರದೇಶಗಳಲ್ಲಿ 1.8ರ ತೀವ್ರತೆ

ಜುಲೈ 4 : ರಾತ್ರಿ 9.20 – ಚೆಂಬು, ಪೆರಾಜೆ ಪ್ರದೇಶಗಳಲ್ಲಿ ಭೂಕಂಪನ

Tags: MAIN
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್