crossorigin="anonymous"> Chandrashekhar Guruji : ಗುರೂಜಿ ಹತ್ಯೆಗೆ ಕಾರಣ ಇದೇ… - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Chandrashekhar Guruji : ಗುರೂಜಿ ಹತ್ಯೆಗೆ ಕಾರಣ ಇದೇ…

Radhakrishna Anegundi by Radhakrishna Anegundi
05-07-22, 5 : 09 pm
in ಕ್ರೈಮ್
Chandrashekhar Guruji murder case saral-vaastu-fame-dr-chandrashekhar-guruji-killed
Share on FacebookShare on TwitterWhatsAppTelegram

ಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಡೆದ ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ( Chandrashekhar Guruji ) ಕೊಲೆಯಾಗಿದೆ. ಇಂದು ಮಧ್ಯಾಹ್ನ ಈ ಕೃತ್ಯ ನಡೆದಿದ್ದು, ಹಾಡಹಗಲೇ ಕೃತ್ಯ ನಡೆದಿರುವುದರಿಂದ ರಾಜ್ಯ ಬೆಚ್ಚಿ ಬಿದ್ದಿದೆ.

ಇನ್ನು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಪ್ರಾರಂಭಿಸಿದ್ದಾರೆ. ಈಗಾಗಲೇ ತನಿಖೆ ಸಂಬಂಧ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಂ ( Hubballi police commissioner Labhu Ram ) ಮಾಹಿತಿ ನೀಡಿದ್ದು, 5 ವಿಶೇಷ ತಂಡಗಳನ್ನು ರಚಿಸಿರುವುದಾಗಿ ಹೇಳಿದ್ದಾರೆ.

ಈ ನಡುವೆ ಚಂದ್ರಶೇಖರ ಗುರೂಜಿ ಹತ್ಯೆಗೆ ಕಾರಣವೇನು ಅನ್ನುವುದರ ಬಗ್ಗೆ ಪೊಲೀಸರು ಕೆಲವೊಂದು ವಿಷಯಗಳನ್ನು ಪಾಯಿಂಟ್ ಮಾಡಿಕೊಂಡಿದ್ದಾರೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ ಚಂದ್ರಶೇಖರ ಗುರೂಜಿ ಹೋಟೆಲ್ ನಿರ್ಮಾಣ ವಿಚಾರದಲ್ಲಿ ತಂಡವೊಂದರ ಜೊತೆಗೆ ಘರ್ಷಣೆ ಮಾಡಿಕೊಂಡಿದ್ದರು ಅನ್ನಲಾಗಿದೆ. ಹೀಗಾಗಿ ಕೊಲೆಯಾಗಿರಬಹುದೇ ಅನ್ನುವ ಕುರಿತಂತೆ ತಂಡವೊಂದು ಪರಿಶೀಲನೆ ನಡೆಸುತ್ತಿದೆ.

ಇದನ್ನೂ ಓದಿ : ಚಂದ್ರಶೇಖರ ಗುರೂಜಿ ಕೊಲೆ :  ಪ್ರಾಣಕ್ಕೆ ಕುತ್ತು ತಂದ ಅದೊಂದು ತಪ್ಪು : ಲಾಬೂರಾಂ ಹೇಳಿದ್ದೇನು

ಮತ್ತೊಂದು ಕಡೆ ವಾಸ್ತು ವಿಚಾರದಲ್ಲಿ ಅನೇಕರಿಗೆ ಮೋಸವಾಗಿದೆ ಅನ್ನಲಾಗಿದೆ. ಚಂದ್ರಶೇಖರ ಗುರೂಜಿ ಕೊಟ್ಟ ಪರಿಹಾರಗಳು ಫಲ ನೀಡದ ಹಿನ್ನಲೆಯಲ್ಲಿ ಅನೇಕರು ಲಕ್ಷಾಂತರ ರೂಪಾಯಿ ಕೈ ಸುಟ್ಟುಕೊಂಡಿದ್ದರಂತೆ. ಈ ಪೈಕಿ ಕೆಲವರು ಪದೇ ಪದೇ ಫೋನ್ ಮಾಡಿ ಒತ್ತಡ ಹೇರುತ್ತಿದ್ದರು ಅನ್ನಲಾಗಿದೆ. ಈ ಪೈಕಿ ಯಾರಾದ್ರೂ ಕೃತ್ಯ ಎಸಗಿರಬಹುದೇ ಎಂದು ಶಂಕಿಸಲಾಗಿದೆ.

ಮಗದೊಂದು ಕಡೆ ತಮ್ಮ ಸಂಸ್ಥೆಯ ಕೆಲ ಉದ್ಯೋಗಿಗಳನ್ನು ಚಂದ್ರಶೇಖರ್ ಗುರೂಜಿ ಕೆಲಸದಿಂದ ತೆಗೆದಿದ್ದರು. ಈ ಕಾರಣಕ್ಕೆ ಪ್ರತೀಕಾರ ತೀರಿಸಲಾಗಿದೆಯೇ ಅನ್ನುವ ಬಗ್ಗೆಯೂ ಅನುಮಾನಗಳು ವ್ಯಕ್ತವಾಗುತ್ತಿದೆ.

ಇದೀಗ ಈ ಎಲ್ಲಾ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ.

ಚಂದ್ರಶೇಖರ ಗುರೂಜಿ ಕೊಲೆ :  ಪ್ರಾಣಕ್ಕೆ ಕುತ್ತು ತಂದ ಅದೊಂದು ತಪ್ಪು : ಲಾಬೂರಾಂ ಹೇಳಿದ್ದೇನು

ಹುಬ್ಬಳ್ಳಿ : ಸರಳ ವಾಸ್ತು ( saral Vaastu) ಸಂಸ್ಥೆಯ ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ( chandrashekhar guruji Murder case ) ಅವರ ಕೊಲೆ ಪ್ರಕರಣ ಸಂಬಂಧದ ತನಿಖೆಯಲ್ಲಿ ಪೊಲೀಸರು ಮಹತ್ವದ ಪ್ರಗತಿ ಸಾಧಿಸಿದ್ದಾರೆ. ಈ ನಡುವೆ ಕೊಲೆ ಕುರಿತಂತೆ ಮಾತನಾಡಿರುವ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಂ ಮಾತನಾಡಿದ್ದು, ಹಂತಕರ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಅಂದಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿರುವ ಪೊಲೀಸ್ ಆಯುಕ್ತ ಲಾಬೂರಾಂ ( Hubballi police commissioner Labhu Ram ) ಹೊಟೇಲ್ ನ ರೂಮ್ ನಲ್ಲಿದ್ದ ಚಂದ್ರಶೇಖರ ಗುರೂಜಿಯವರನ್ನು ಯಾರೋ ಫೋನ್ ಮಾಡಿ ಕೆಳಗೆ ಕರೆಸಿಕೊಂಡಿದ್ದಾರೆ. ಈ ವೇಳೆ ಅವರು ಹೋಟೆಲ್ ನ ರಿಸೆಪ್ಸನ್ ಗೆ ಬಂದಿದ್ದಾರೆ. ಇದೇ ಸಂದರ್ಭದಲ್ಲಿ ಅವರಿಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಗಾಗಿ ಎಸಿಪಿ 5 ಪೊಲೀಸರ ಐದು ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ಲಾಬೂರಾಮ್ ತಿಳಿಸಿದ್ದಾರೆ.

ಜುಲೈ 2ರಂದು ಹೋಟೆಲ್ ಗೆ ಬಂದಿದ್ದ ಚಂದ್ರಶೇಖರ ಗುರೂಜಿ ನಾಳೆ ರೂಮ್ ಕೊಠಡಿ ಖಾಲಿ ಮಾಡುವವರಿದ್ದರು. ಅಷ್ಟು ಹೊತ್ತಿಗೆ ಇವರ ಕೊಲೆ ಮಾಡಲಾಗಿದೆ.

ಪ್ರಾಥಮಿಕ ಮಾಹಿತಿಗಳ ಪ್ರಕಾರ ಪರಿಚಿತರೇ ಈ ಕೃತ್ಯ ಮಾಡಿರುವ ಸಾಧ್ಯತೆಗಳಿದೆ. ಸಿಸಿಟಿವಿಯಲ್ಲಿ ದಾಖಲಾದ ಕೊಲೆ ಪ್ರಕರಣದ ದೃಶ್ಯಗಳನ್ನು ಗಮನಿಸಿದರೆ, ಗುರೂಜಿಗೆ ಇವರು ಪರಿಚಿತರು ಅನ್ನುವಂತಿದೆ. ರೂಮ್ ನಿಂದ ರಿಸೆಪ್ಸನ್ ಗೆ ಬಂದ ಗುರೂಜಿ ನಡೆದುಕೊಳ್ಳುವ ರೀತಿ, ಅವರು ಕಾಲಿಗೆ ಬಿದ್ದ ದೃಶ್ಯಗಳು ಹಲವು ಅನುಮಾನಕ್ಕೆ ಕಾರಣವಾಗಿದೆ.

Tags: MAIN
ShareTweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್