crossorigin="anonymous"> Kalasipalyam police suspended : ಬಾಂಬೆ ಸಲೀಂ ವಿರುದ್ಧ ಕ್ರಮ ಕೈಗೊಳ್ಳಲು ಉದಾಸೀನ : ಕಲಾಸಿಪಾಳ್ಯ ಪೊಲೀಸ್ ಇನ್ಸ್ ಪೆಕ್ಟರ್ ಅಮಾನತು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Kalasipalyam police suspended : ಬಾಂಬೆ ಸಲೀಂ ವಿರುದ್ಧ ಕ್ರಮ ಕೈಗೊಳ್ಳಲು ಉದಾಸೀನ : ಕಲಾಸಿಪಾಳ್ಯ ಪೊಲೀಸ್ ಇನ್ಸ್ ಪೆಕ್ಟರ್ ಅಮಾನತು

ಪರಿಸ್ಥಿತಿ ನೋಡಿದರೆ ಕರ್ನಾಟಕದ ಪೊಲೀಸ್ ಠಾಣೆಗಳಿಗೆ ಹೊಸ ನೇಮಕಾತಿಯಾಗಬೇಕಾಗಬಹುದು

Radhakrishna Anegundi by Radhakrishna Anegundi
08-07-22, 11 : 07 am
in ಟಾಪ್ ನ್ಯೂಸ್
kalasipalyam-police-suspended-kalasipalya-police-inspector-sub-inspector-suspended
Share on FacebookShare on TwitterWhatsAppTelegram

ರವಿಕೃಷ್ಣಾ ರೆಡ್ಡಿ ನಾಯಕತ್ವದ ಕೆ.ಆರ್.ಎಸ್ ಪಕ್ಷ ರಾಜ್ಯದ ಪೊಲೀಸ್ ಠಾಣೆಗಳ ಕಥೆಯೇನು ಅನ್ನುವುದನ್ನು ಬಹಿರಂಗಪಡಿಸಿತ್ತು. ಆದರೆ ಬೊಮ್ಮಾಯಿ ನೇತೃತ್ವದ ಸರ್ಕಾರದ ಕಣ್ಣಿಗೆ ಕಾಣಿಸಲಿಲ್ಲ, ಕಿವಿಗೆ ಕೇಳಲಿಲ್ಲ. ಈಗ ಅದರ ಫಲ ಅನ್ನುವಂತೆ ಕಲಾಸಿಪಾಳ್ಯದ ಇನ್ಸ್ ಪೆಕ್ಟರ್ ಮತ್ತು ಸಬ್ ಇನ್ಸ್ ಪೆಕ್ಟರ್ ( Kalasipalyam police suspended) ಅಮಾನತುಗೊಂಡಿದ್ದಾರೆ

ಬೆಂಗಳೂರು :  ರೌಡಿಯೊಬ್ಬನ ವಿರುದ್ಧ ತನಿಖೆ ನಡೆಸದೆ ನಿರ್ಲಕ್ಷ್ಯ ತೋರಿದ ಆರೋಪದ ಹಿನ್ನಲೆಯಲ್ಲಿ ಕಲಾಸಿಪಾಳ್ಯ ಠಾಣೆ ಇನ್ಸ್ ಪೆಕ್ಟರ್ ಹಾಗೂ ಸಬ್ ಇನ್ಸ್ ಪೆಕ್ಟರ್ ಸೇರಿ ಇಬ್ಬರನ್ನು ಅಮಾನತು ( Kalasipalyam police suspended) ಮಾಡಲಾಗಿದೆ. ಅಮಾನತುಗೊಂಡವರನ್ನು ಇನ್ಸ್ ಪೆಕ್ಟರ್ ಎಂ.ಎಲ್. ಚೇತನ್ ಕುಮಾರ್ ಹಾಗೂ ಸಬ್ ಇನ್ಸ್ ಪೆಕ್ಟರ್ ಪ್ರಸನ್ನಕುಮಾರ್ ಎಂದು ಗುರುತಿಸಲಾಗಿದೆ.

 ಏನಿದು ಪ್ರಕರಣ…?

ಬೆಂಗಳೂರಿನ ಸಿದ್ದಯ್ಯ ರಸ್ತೆಯ 2ನೇ ಕ್ರಾಸ್ ನಲ್ಲಿ ನೆಲೆಸಿರುವ ಮುಯೀಜ್ ಅಹಮ್ಮದ್ ರಿಯಲ್ ಎಸ್ಟೇಟ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದರು.ಈ ನಡುವೆ ಶಿವಾಜಿನಗರದ ಆಸ್ತಿ ವಿಚಾರವಾಗಿ ಅಹಮದ್ ಮತ್ತು ರಿಯಾಜ್ ನಡುವೆ ವಿವಾದ ಉಂಟಾಗಿತ್ತು. ಈ ವೇಳೆ ಸಮಸ್ಯೆ ಇತ್ಯರ್ಥ ಪಡಿಸಲು ರಿಯಾಜ್, ಶಿವಾಜಿ ನಗರದ ರೌಡಿ ಸಲೀಂ ಅಲಿಯಾಸ್ ಬಾಂಬೆ ಸಲೀಂನ ಸಹಚರರನ್ನು ಸಂಪರ್ಕಿಸಿದ್ದ.

ಇದಾದ ಬಳಿಕ ಸಲೀಂ ಸಹಚರರಾದ ಝಾಪರ್ ಮತ್ತು ಆಲಿ ಎಂಬವರು ಮುಯೀಜ್ ಅಹಮ್ಮದ್ ಮನೆಗೆ ತೆರಳಿ ವಿವಾದವನ್ನು ಬಗೆ ಹರಿಸಿಕೊಳ್ಳುವಂತೆ ರಿಯಾಜ್ ಪರವಾಗಿ ಒತ್ತಾಯಿಸಿದ್ದರು. ಮಾತ್ರವಲ್ಲದೆ ಜೈಲಿನಿಂದಲೇ ವಿಡಿಯೋ ಕಾಲ್ ನಲ್ಲಿ ಮಾತನಾಡಿದ್ದ ಬಾಂಬೆ ಸಲೀಂ 8 ಲಕ್ಷ ರೂಪಾಯಿ ಕೊಡದಿದ್ರೆ ಕೊಲೆ ಮಾಡುವುದಾಗಿ ಬೆದರಿಕೆ ಒಡ್ಡಿದ್ದ. ಕಾಸು ಕೊಡದ ಕಾರಣ ಸಲೀಂ ಸಹಚರರು ಕಾರು ಅಡ್ಡಗಟ್ಟಿ ಬೆದರಿಕೆ ಹಾಕಿದ್ದರು.

ಇದನ್ನೂ ಓದಿ : Ravikanthe gowda ips : ಪಿಯುಸಿ ವಿದ್ಯಾರ್ಥಿಗಳು ಕಾಲೇಜಿಗೆ ಬೈಕ್ ತರುವಂತಿಲ್ಲ : ರವಿಕಾಂತೇಗೌಡ ಸೂಚನೆ

ಈ ಸಂಬಂಧ ಮುಯೀಜ್ ಅಹಮ್ಮದ್ ಕಲಾಸಿಪಾಳ್ಯ ಠಾಣೆಗೆ ತೆರಳಿ ಚೇತನ್ ಕುಮಾರ್ ( M L Chethan Kumar ) ಅವರಿಗೆ ದೂರು ಸಲ್ಲಿಸಿದ್ದರು. ಈ ವೇಳೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸದೆ NCR ದಾಖಲಿಸಿಕೊಂಡಿದ್ದರು. ಇದಾದ ಬಳಿಕ ಜೈಲಿನಿಂದ ಜೀವ ಬೆದರಿಕೆ ಬರುವುದು ಹೆಚ್ಚಾಯ್ತು. ಹೀಗಾಗಿ ಆತಂಕಗೊಂಡ ಮುಯೀಜ್ ಅಹಮ್ಮದ್ ಕಾರಾಗೃಹ ಡಿಜಿಪಿ ಅಲೋಕ್ ಮೋಹನ್ ಗೆ ( Alok Mohan IPS )  ದೂರು ಸಲ್ಲಿಸಿದರು.

ಅಲೋಕ್ ಮೋಹನ್ ( Alok Mohan IPS ) ಈ ದೂರನ್ನು ಬೆಂಗಳೂರು ಪೊಲೀಸ್ ಆಯುಕ್ತರಿಗೆ ರವಾನಿಸಿದರು. ನಗರ ಪೊಲೀಸ್ ಆಯುಕ್ತ ಸಿ.ಎಚ್. ಪ್ರತಾಪ್ ರೆಡ್ಡಿ ( ch pratap reddy ips ) ಈ ಬಗ್ಗೆ ವಿಚಾರಣೆ ನಡೆಸುವಂತೆ ಸಿಸಿಬಿಗೆ ಸೂಚನೆ ಕೊಟ್ಟರು.

ಆಯುಕ್ತರ ( ch pratap reddy ips ) ಸೂಚನೆಯಂತೆ ಕಲಾಸಿಪಾಳ್ಯ ಠಾಣೆಯಲ್ಲಿ ಅಹಮದ್ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡ ಸಿಸಿಬಿ ಬಾಂಬೆ ಸಲೀಂ ಸಹಚರರಾದ ಅಬ್ದುಲ್ ಜಾಫರ್, ಶೂಟರ್ ಖದೀಮ, ಇಮ್ರಾನ್, ಬಾಂಬೆ ರಿಯಾಜ್, ಖದೀರ್ ಹಾಗೂ ಆಲಿಯನ್ನು ಬಂಧಿಸಿದ್ದಾರೆ. ಧಾರವಾಡ ಕೇಂದ್ರ ಜೈಲಿನಲ್ಲಿದ್ದ ಬಾಂಬೆ ಸಲೀಂನನ್ನು ವಾರೆಂಟ್ ಮೇರೆಗೆ ವಶಕ್ಕೆ ಪಡೆದು ವಿಚಾರಣೆ ನಡೆಸಿ ಕ್ರಮ ಕೈಗೊಂಡಿದ್ದಾರೆ. ಬಳಿಕ ಸಿಸಿಬಿ ಆಯುಕ್ತರಿಗೆ ವರದಿ ಸಲ್ಲಿಸಿತ್ತು. ಈ ವರದಿಯಲ್ಲಿ ಕಲ್ಯಾಸಿಪಾಳ್ಯ ಠಾಣೆಯ ಸಿಬ್ಬಂದಿಯ ನಿರ್ಲಕ್ಷ್ಯವನ್ನೂ ಉಲ್ಲೇಖಿಸಲಾಗಿತ್ತು.

ಇದೇ ವರದಿಯ ಆಧಾರದಲ್ಲಿ ಇದೀಗ ಇನ್ಸ್ ಪೆಕ್ಟರ್ ಎಂ.ಎಲ್. ಚೇತನ್ ಕುಮಾರ್ ಹಾಗೂ ಸಬ್ ಇನ್ಸ್ ಪೆಕ್ಟರ್ ಪ್ರಸನ್ನಕುಮಾರ್ ಅವರನ್ನು ಅಮಾನತುಗೊಳಿಸಲಾಗಿದೆ. ಅಂದ ಹಾಗೇ ಈ ಕಲಾಸಿಪಾಳ್ಯ ಠಾಣೆಯ ಸಿಬ್ಬಂದಿ ಅಮಾನತುಗೊಳ್ಳುವುದು ಇದು ಮೊದಲಲ್ಲ, 2015ರಲ್ಲಿ ಲಂಚ ಸ್ವೀಕರಿಸಿದ ಕಾರಣಕ್ಕೆ ಮುಖ್ಯ ಪೇದೆ ಅಮಾನತುಗೊಂಡಿದ್ದರು. 2018ರಲ್ಲಿ ಇಲ್ಲೇ ಕರ್ತವ್ಯ ನಿರ್ವಹಿಸುತ್ತಿದ್ದ ಆರ್ ಪ್ರಕಾಶ್ ಅನ್ನುವ ಇನ್ಸ್ ಪೆಕ್ಟರ್ ಕರ್ತವ್ಯ ಲೋಪದಿಂದ ಅಮಾನತುಗೊಂಡಿದ್ದರು. 2012ರಲ್ಲಿ ಕರ್ತವ್ಯದ ವೇಳೆ ನಿದ್ದೆ ಮಾಡಿದ ಕಾರಣಕ್ಕೆ ಇದೇ ಠಾಣೆಯ ಪೇದೆಯೊಬ್ಬರು ಅಮಾನತುಗೊಂಡಿದ್ದರು.

Tags: FEATURED
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್