crossorigin="anonymous"> state bjp organizing secretary : ದಕ್ಷಿಣ ಕನ್ನಡದ ಆರ್.ಎಸ್.ಎಸ್ ಕಾರ್ಯಕರ್ತನಿಗೆ ರಾಜ್ಯ BJP ಸಂಘಟನಾ ಕಾರ್ಯದರ್ಶಿ ಹುದ್ದೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

state bjp organizing secretary : ದಕ್ಷಿಣ ಕನ್ನಡದ ಆರ್.ಎಸ್.ಎಸ್ ಕಾರ್ಯಕರ್ತನಿಗೆ ರಾಜ್ಯ BJP ಸಂಘಟನಾ ಕಾರ್ಯದರ್ಶಿ ಹುದ್ದೆ

Radhakrishna Anegundi by Radhakrishna Anegundi
20-07-22, 6 : 30 am
in ರಾಜ್ಯ
state bjp organizing secretary rajesh kuntur
Share on FacebookShare on TwitterWhatsAppTelegram

ಚುನಾವಣೆಗೆ ಇನ್ನೂ ಒಂದೇ ವರ್ಷ ಬಾಕಿ ಅನ್ನುವಂತಿರುವಾಗ ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿಯನ್ನು ಬದಲಾಯಿಸಲಾಗಿದೆ. state bjp organizing secretary

ಬೆಂಗಳೂರು : ಮುಂಬರುವ ಚುನಾವಣೆಯಲ್ಲಿ ರಾಜ್ಯ ನಾಯಕರನ್ನು ನಂಬಿದ್ರೆ ಬಿಜೆಪಿ ಮೂರನೇ ಸ್ಥಾನಕ್ಕೆ ಕುಸಿಯೋದು ಖಚಿತ ಅನ್ನುವುದು ದೆಹಲಿಯ ವರಿಷ್ಟರಿಗೆ ಅರಿವಾಗಿದೆ. ಈ ನಡುವೆ ರಾಜ್ಯ ನಾಯಕರು ಹಲವಾರು ಏಜೆನ್ಸಿ ಮೂಲಕ  ಸರ್ವೆ ಮಾಡಿಸಿದ್ದು, ಮುಂದೆ ಬಿಜೆಪಿಯೇ ಅಧಿಕಾರಕ್ಕೆ ಅನ್ನುವ ವರದಿ ಕೇಳಿ ರಿಲ್ಯಾಕ್ಸ್ ಆಗಿದ್ದಾರೆ. ( state bjp organizing secretary ) ಆದರೆ ಆಡಳಿತ ವಿರೋಧಿ ಅಲೆಯ ಅರಿವು ದೆಹಲಿ ನಾಯಕರಿಗೆ ಆಗಿದೆ.

ಈ ನಡುವೆ ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಅವರನ್ನು ಬದಲಾಯಿಸಲಾಗಿದ್ದು, ಆ ಹುದ್ದೆಗೆ ಪುತ್ತೂರು ಮೂಲದ ಆರ್.ಎಸ್.ಎಸ್ ಪ್ರಚಾರಕ ರಾಜೇಶ್ (rajesh kuntur) ಅವರನ್ನು ನೇಮಿಸಲಾಗಿದೆ. ರಾಜೇಶ್ ಅವರು ಕಡಬ ತಾಲೂಕಿನ ಕುಂತೂರಿನವರಾಗಿದ್ದಾರೆ.

ಇದನ್ನೂ ಓದಿ : 13 ವರ್ಷಗಳ ಬಳಿಕ ದೆಹಲಿಗೆ ಭೇಟಿ : ವಿಕ್ರಾಂತ್ ರೋಣ ಬಿಡುಗಡೆಗೂ ಮುನ್ನ ಬಿಜೆಪಿ ಸಚಿವರ ಮನೆಗೆ ದೌಡು

2010ರಿಂದ ಸಂಘದ ಪೂರ್ಣಾವಧಿ ಪ್ರಚಾರಕರಾಗಿರುವ ಕುಂತೂರು, ಶಿವಮೊಗ್ಗ, ಮೈಸೂರಕು ಸೇರಿದಂತೆ ರಾಜ್ಯ ಅನೇಕ ಕಡೆಗಳಲ್ಲಿ ಪ್ರಚಾರಕರಾಗಿ ಕಾರ್ಯನಿರ್ವಹಿಸಿದ್ದಾರೆ. ಪ್ರಸ್ತುತ ಅವರು ತುಮಕೂರು ಪ್ರಚಾರಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇನ್ನು ಈ ತನಕ ರಾಜ್ಯ ಸಂಘಟನಾ ಕಾರ್ಯದರ್ಶಿ ಹುದ್ದೆಯಲ್ಲಿದ್ದ ಅರುಣ್ ಕುಮಾರ ಅವರನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಕರ್ನಾಟಕ ದಕ್ಷಿಣ ಮತ್ತು ಉತ್ತರ ಪ್ರಾಂತದ ಪ್ರಚಾರ ಪ್ರಮುಖರಾಗಿ ನೇಮಿಸಲಾಗಿದೆ.

ಸಂಘಟನಾ ಕಾರ್ಯದರ್ಶಿ ಹುದ್ದೆಯಲ್ಲಿದ್ದು ಸದ್ದು ಮಾಡಿದವರು ಈಗ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿರುವ ಬಿ.ಎಲ್.ಸಂತೋಷ್. ಪಕ್ಷದ ಮೇಲೆ ಈ ಹುದ್ದೆಗೆಷ್ಟು ಹಿಡಿತವಿದೆ ಅನ್ನುವುದರ ಅರಿವನ್ನು ರಾಜಕಾರಣಿಗಳಿಗೆ ಅರ್ಥ ಮಾಡಿಸಿದ ಹಿರಿಮೆ ಸಂತೋಷ್ ಅವರದ್ದು. ಹೀಗಾಗಿಯೇ ರಾಜೇಶ್ ಕುಂತೂರು ನೇಮಕ ಕುತೂಹಲ ಕೆರಳಿಸಿದೆ.

ಇನ್ನು ಆರ್ ಎಸ್ ಎಸ್ ನಲ್ಲಿ ಒಟ್ಟು ಐವರನ್ನು ಬದಲಾಯಿಸಲಾಗಿದೆ.

1. ಗ.ರಾ. ಸುರೇಶ್ : ಸಾಮರಸ್ಯ ಗತಿವಿಧಿ ಕರ್ನಾಟಕ ದಕ್ಷಿಣ ಪ್ರಾಂತ ಟೋಳಿ ಸದಸ್ಯರು. ಹಾಗೂ ಘುಮಂತು (ಅಲೆಮಾರಿ ಸಮುದಾಯ) ಕಾರ್ಯದ ಕರ್ನಾಟಕ ರಾಜ್ಯ ಪ್ರಮುಖರು.

2. ಶಿ.ಲ. ಕೃಷ್ಣಮೂರ್ತಿ : ಹಿಂದು ಸೇವಾ ಪ್ರತಿಷ್ಠಾನ

3. ಮನೋಹರ ಮಠದ್ : ಕರ್ನಾಟಕ ದೇವಸ್ಥಾನ ಸಂವರ್ಧನ ಸಮಿತಿ ರಾಜ್ಯ ಸಂಯೋಜಕರು

4. ಅರುಣ್ ಕುಮಾರ್ : ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಮತ್ತು ಉತ್ತರ ಪ್ರಾಂತದ ಪ್ರಚಾರ ಪ್ರಮುಖರು

5. ರಾಜೇಶ್ : ರಾಜನೈತಿಕ ಕ್ಷೇತ್ರ

ಡೆಂಘೀ ಜ್ವರದ ಅಪಾಯದಿಂದ ಪಾರಾಗುವುದು ಹೇಗೆ..?

ಕೊರೋನಾ ಸಂದರ್ಭದಲ್ಲಿ ಡೆಂಘೀ ಜ್ವರದ ಅಬ್ಬರ ಕಡಿಮೆಯಾಗಿತ್ತು. ಈಗ ಕೊರೋನಾ ಅಬ್ಬರ ಕಡಿಮೆಯಾಯ್ತು ಡೆಂಘೀ ಅಬ್ಬರಿಸಲಾರಂಭಿಸಿದೆ.

ಬೆಂಗಳೂರು :  ರಾಜಧಾನಿ ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಡೆಂಘೀ ಜ್ವರದ ಅಬ್ಬರ ತೀವ್ರವಾಗಿದೆ. ಅದರಲ್ಲೂ ಬೆಂಗಳೂರಿನಲ್ಲಿ ಪರಿಸ್ಥಿತಿ ಕೈ ಮೀರಿದಂತೆ ಗೋಚರಿಸುತ್ತಿದೆ. ಖಾಸಗಿ ಆಸ್ಪತ್ರೆ, ಗಲ್ಲಿ ಮೂಲೆಯ ಕ್ಲಿನಿಕ್ ಗಳಲ್ಲಿ ಡೆಂಘೀ ಜ್ವರದಿಂದ ಬಳಲುತ್ತಿರುವವರೇ ಕಾಣಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ಜ್ವರ ಕಾಣಿಸಿಕೊಂಡ ಕಾರಣ ಊರಲ್ಲಿರುವ ಪೋಷಕರ ಆತಂಕವೂ ಹೆಚ್ಚಾಗಿದೆ. ಇನ್ನೂ ರಕ್ತ ಪರೀಕ್ಷಾ ಕೇಂದ್ರದಲ್ಲಿ ಪ್ಲೇಟ್ಲೆಟ್ ಲೆಕ್ಕ ಪತ್ತೆ ಹಚ್ಚಲು ಬಂದವರೇ ಹೆಚ್ಚಾಗಿದ್ದಾರೆ.

ಈಗಿನ ವ್ಯವಸ್ಥೆಯಲ್ಲಿ ಡೆಂಘೀ ರೋಗಿಗಳೆಷ್ಟು ಅನ್ನುವ ಪಕ್ಕಾ ಡಾಟಾ ಆರೋಗ್ಯ ಇಲಾಖೆಯ ಬಳಿ ಇಲ್ಲ. ಆದರೆ ಖಾಸಗಿ ವೈದ್ಯರು ಹೇಳುವ ಪ್ರಕಾರ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಡೆಂಘೀಯಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಡೆಂಘೀ ಬಂದ ಮೇಲೆ ಪರಿತಪಿಸುವ ಬದಲು ಅದು ಬಾರದಂತೆ ನೋಡಿಕೊಳ್ಳುವುದು ಮುಖ್ಯ.

ಮೂರು ಹಂತದಲ್ಲಿ ಕಾಡುವ ಡೆಂಘೀ

ಸಂಗ್ರಹಿಸಿಟ್ಟ ತಿಳಿ ನೀರಿನಲ್ಲಿ ಮೊಟ್ಟೆ ಇಡುವ ಈಡಿಸ್ ಈಜಿಪ್ಟೆ ಅನ್ನುವ ಸೊಳ್ಳೆ ಈ ಡೆಂಘೀ ಜ್ವರವನ್ನು ಹರಡುತ್ತದೆ. ಈ ಈಡಿಸ್ ಈಜಿಪ್ಟೆ ಸೊಳ್ಳೆ ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಿಗೆ ಕಚ್ಚಿದರೆ ಅಪಾಯ ಹೆಚ್ಚು. ಮೂರು ಹಂತಗಳಲ್ಲಿ ಕಾಡುವ ಈ ಜ್ವರ ಮೊದಲು ಸಾಮಾನ್ಯ ಜ್ವರದಿಂದ ಗೋಚರಿಸಿ ಸರಿಯಾದ ಸಮಯಕ್ಕೆ ಚಿಕಿತ್ಸೆ ಪಡೆದುಕೊಂಡರೆ ಅಪಾಯ ಇರೋದಿಲ್ಲ. ಎರಡನೇ ಹಂತದಲ್ಲಿ ದೇಹದಲ್ಲಿ ನೀರಿನ ಅಂಶ ಕಡಿಮೆಯಾಗಲು ಆರಂಭವಾಗುತ್ತದೆ. ಅಲ್ಲೂ ನಿರ್ಲಕ್ಷ್ಯ ವಹಿಸಿದರೆ ದೇಹದಲ್ಲಿ ರಕ್ತಸ್ರಾವ ಪ್ರಾರಂಭವಾಗಿ ರೋಗಿ ಅಪಾಯದ ಹಂತಕ್ಕೆ ತಲುಪುತ್ತಾನೆ.

ಡೆಂಘೀ ಜ್ವರದ ಲಕ್ಷಣಗಳು

ಜ್ವರ, ಅತೀಯಾದ ತಲೆನೋವು, ಶೀತ ಗಂಟಲು ನೋವು, ಕೆಲವೊಂದು ವ್ಯಕ್ತಿಗಳಲ್ಲಿ ವಾಂತಿ ಹೊಟ್ಟೆನೋವು ಕಾಣಿಸಿಕೊಳ್ಳುತ್ತದೆ. ನಿಶಕ್ತಿ, ಮೈ-ಕೈ ನೋವು, ಭೇದಿ, ಮೈ ಮೇಲೆ ಗುಳ್ಳೆ ಏಳುವುದು. ಹಾಗಂತ ಈ ಎಲ್ಲಾ ಲಕ್ಷಣಗಳಿಗೆ ಕಾಯುವ ಬದಲು ಜ್ವರ ಬಂತು ಅಂದ್ರೆ ತಕ್ಷಣ ವೈದ್ಯರನ್ನು ಭೇಟಿಯಾಗಿ, ಯಾವುದಕ್ಕೂ ಒಂದು ರಕ್ತ ಪರೀಕ್ಷೆಯನ್ನು ಮಾಡಿಸಿಕೊಳ್ಳುವುದು ಉತ್ತಮ.

ಮುನ್ನೆಚ್ಚರಿಕಾ ಕ್ರಮಗಳು

ಕೊರೋನಾ ಕಾಲದಲ್ಲಿ ಸ್ವಚ್ಛತೆಗೆ ಸಿಕ್ಕಾಪಟ್ಟೆ ಆದ್ಯತೆ ಕೊಟ್ಟ ಡೆಂಘೀ ಕಾಟ ಕೊಟ್ಟಿರಲಿಲ್ಲ. ಈಗ ಮತ್ತೆ ಸ್ವಚ್ಛತೆಯ ವಿಚಾರದಲ್ಲಿ ನಿರ್ಲಕ್ಷ್ಯ ಪ್ರಾರಂಭವಾಗಿದೆ. ಹೀಗಾಗಿ ಮಳೆಗಾಲದ ಪ್ರಾರಂಭದೊಂದಿಗೆ ಡೆಂಘೀಯೂ ಬಂದಿದೆ. ಹೀಗಾಗಿ ಹೊರಗಡೆ ಹೋಗುವ ಸಂದರ್ಭದಲ್ಲಿ ಸೊಳ್ಳೆ ಕಚ್ಚಿಸಿಕೊಳ್ಳದಂತೆ ಮುನ್ನೆಚ್ಚರಿಕೆ ವಹಿಸಿ. ಅದರಲ್ಲೂ ಮಕ್ಕಳ ಬಗ್ಗೆ ತೀವ್ರ ಕಾಳಜಿ ಅತೀ ಆಗತ್ಯ.

ಇನ್ನು ಹಗಲಲ್ಲಿ ಸೊಳ್ಳೆ ಕಚ್ಚಿಸಿಕೊಳ್ಳಬೇಡಿ, ನೀರು ಶೇಖರಿಸುವ ತೊಟ್ಟಿಗಳ ಮುಚ್ಚಳವನ್ನು ಭದ್ರವಾಗಿಸಿ, ಮನೆಯ ಸುತ್ತ, ತಾರಸಿ, ಹೀಗೆ ಎಲ್ಲೆ ಆಗ್ಲೀ ನೀರು ನಿಲ್ಲದಂತೆ ನೋಡಿಕೊಳ್ಳಿ. ಇನ್ನು ಮನೆಯ ಸುತ್ತ ಮುತ್ತ ಸೊಳ್ಳೆ ಕಾಟ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಿ.

Tags: MAIN
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್