crossorigin="anonymous"> Kumaraswamy : ಹುಟ್ಟಿದ ಕೂಡಲೇ ಪಂಚೆ ಕಟ್ಟಿ ಸ್ವಾತಂತ್ಯ ಸಂಗ್ರಾಮಕ್ಕೆ ಧುಮುಕಿದ್ರ : ಸಿದ್ದು ಲೇವಡಿ ಮಾಡಿದ HDK - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Kumaraswamy : ಹುಟ್ಟಿದ ಕೂಡಲೇ ಪಂಚೆ ಕಟ್ಟಿ ಸ್ವಾತಂತ್ಯ ಸಂಗ್ರಾಮಕ್ಕೆ ಧುಮುಕಿದ್ರ : ಸಿದ್ದು ಲೇವಡಿ ಮಾಡಿದ HDK

Radhakrishna Anegundi by Radhakrishna Anegundi
08-08-22, 3 : 18 pm
in ರಾಜ್ಯ
kumaraswamy-tweet-on-congress-leader-siddaramaiah
Share on FacebookShare on TwitterWhatsAppTelegram

ಬಿಜೆಪಿ ನಾಯಕರು ಕುಮಾರಸ್ವಾಮಿಯ ( Kumaraswamy) ವಾಗ್ದಾಳಿಯನ್ನು ಕಲಿತುಕೊಳ್ಳಬೇಕು. ಈ ಬಾರಿ ಸಿದ್ದರಾಮಯ್ಯ ವರದಿ ಭರ್ಜರಿ ಬರೆದಿದ್ದಾರೆ ಕುಮಾರಸ್ವಾಮಿ

ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ನಡುವಿನ ವಾಕ್ಸಮರ ನಿಲ್ಲುವ ಲಕ್ಷಣಗಳಿಲ್ಲ. ಇದೀಗ ಫೇಸ್ ಬುಕ್ ನಲ್ಲಿ ಸುದೀರ್ಘವಾದ ಬರಹ ಬರೆದಿರುವ ಕುಮಾರಸ್ವಾಮಿ,( ( Kumaraswamy) ) ಸಿದ್ದರಾಮಯ್ಯ ಅವರನ್ನೇ ಗಾಬರಿಗೊಳಿಸಿದ್ದಾರೆ. ಅವರ ಪೂರ್ತಿ ಬರಹ ಇಲ್ಲಿದೆ.

“ ಸ್ವಯಂಘೋಷಿತ ಸಂವಿಧಾನ ರಕ್ಷಕ ಸಿದ್ದರಾಮಯ್ಯ ಮತ್ತೆ Janata Dal Secular  ಬಗ್ಗೆ ವಿಷ ಕಾರಿಕೊಂಡಿದ್ದಾರೆ. ಜೆಡಿಎಸ್ ಪಕ್ಷ ಸ್ವಾತಂತ್ರ್ಯ ಹೋರಾಟಕ್ಕೆ ನೀಡಿದ ಕೊಡುಗೆ ಏನು ಎಂದು ಅವರು ಪ್ರಶ್ನಿಸಿದ್ದಾರೆ.

ನಮ್ಮ ಪಕ್ಷದ್ದು ಇರಲಿ, ಸ್ವಾತಂತ್ರ್ಯ ಹೋರಾಟಕ್ಕೆ ಈ ಸೋಗಲಾಡಿ ಸಿದ್ದಸೂತ್ರದಾರನ ಕೊಡುಗೆ ಏನು?

ವಿಕಿಪೀಡಿಯಾ ಪ್ರಕಾರ ನಿಮ್ಮ ಜನ್ಮವರ್ಷ 1947. ಹುಟ್ಟಿದ ಕೂಡಲೇ ಪಂಚೆ ಕಟ್ಟಿ ಸ್ವಾತಂತ್ಯ ಸಂಗ್ರಾಮಕ್ಕೆ ಧುಮುಕಿದರಾ ಮಿಸ್ಟರ್ ಸಿದ್ದರಾಮಯ್ಯ?

ಜೆಡಿಎಸ್ ಸ್ಥಾಪನೆ ಆಗಿದ್ದೇ 1999ರಲ್ಲಿ. ಆಗ ನೀವು ಎಲ್ಲಿದ್ದೀರಿ? ನಿಮಗೂ ಕಾಂಗ್ರೆಸ್ ಪಕ್ಷಕ್ಕೂ ಏನು ಸಂಬಂಧ? ನೀವು ಕಾಂಗ್ರೆಸ್ ಸೇರಿದ್ದು 2006ರಲ್ಲಿ. ಹೀಗಾಗಿ ಆ ಪಕ್ಷದ ಪೂರ್ವಾಪರದ ಬಗ್ಗೆ ಮಾತನಾಡಲು ಏನು ನೈತಿಕತೆ ಇದೆ ನಿಮಗೆ?

ಗೆದ್ದಲು ಕಟ್ಟಿಕೊಂಡ ಹುತ್ತಕ್ಕೆ ಹಾವಿನಂತೆ ಸೇರಿಕೊಂಡ ನೀವು, ಸ್ವಾರ್ಥ ಬೀಜಾಸುರನಾಗಿ ಆ ಪಕ್ಷದ ಮೂಲ ನಾಯಕರನ್ನೆಲ್ಲ ನುಂಗುತ್ತಿರುವ ನಿಮ್ಮ ಭಕಾಸುರ ಬಾಯಲ್ಲಿ ಸ್ವಾತಂತ್ರ್ಯ ಹೋರಾಟದ ಪಾರಾಯಣವೇ? ನಿಮಗೆ ಅದು ಬೇರೆ ಕೇಡು.

ಇದನ್ನು ಓದಿ : Savitha kundar : ಬಿಟ್ಹೋಗ್ಬೇಡಿ…. ಸರ್ಕಾರಿ ವೈದ್ಯೆ ವರ್ಗಾವಣೆಗೆ ಕಣ್ಣೀರಿಟ್ಟ ಗ್ರಾಮಸ್ಥರು

ಅಧಿಕಾರಕ್ಕಾಗಿ ದೀನ ದಲಿತರು, ಅಲ್ಪಸಂಖ್ಯಾತರ ಹೆಸರು ಬಳಸಿಕೊಂಡು, ಹಾದಿಬೀದಿಯಲ್ಲಿ ಹೈಡ್ರಾಮಾ ಆಡಿ ಕಾಂಗ್ರೆಸ್ ಪಕ್ಷಕ್ಕೆ ವಕ್ಕರಿಸಿಕೊಂಡ ನಿಮಗೆ, ಸ್ವಾತಂತ್ರ್ಯ ಹೋರಾಟದ ಬಗ್ಗೆ ಮಾತನಾಡುವ ನೈತಿಕ ಹಕ್ಕಿದೆಯಾ? ಖಂಡಿತಾ ಇಲ್ಲ.

ನೀವು ಹೇಳಿದ ಕಾಂಗ್ರೆಸ್ ಈಗೆಲ್ಲಿದೆ? ನೀವು ಕದ್ದಮಾಲು ಹ್ಯೂಬ್ಲೆಟ್ ವಾಚು ಕಟ್ಟಿದಾಗಲೇ 1947ರ ಕಾಂಗ್ರೆಸ್ ಗೆ ಸಮಾಧಿ ಕಟ್ಟಿದಿರಿ. 5 ವರ್ಷಗಳ ನಿಮ್ಮ ಆಡಳಿತದಲ್ಲಿ ಆ ನತದೃಷ್ಟ ಕಾಂಗ್ರೆಸ್ ಪಕ್ಷಕ್ಕೆ ಎಷ್ಟು ಸಾವಿನ ಮೊಳೆ ಹೊಡೆದಿರಿ, ಲೆಕ್ಕ ಹೇಳಬೇಕೆ ಮಿಸ್ಟರ್ ಸಿದ್ದರಾಮಯ್ಯ?

basavaraj-bommai-siddaramaiah-twitter-war-over-karnataka

ಮಹಾತ್ಮ ಗಾಂಧಿ ಅವರ ಕಾಂಗ್ರೆಸ್ ಪಕ್ಷವನ್ನು ನೀವೆಲ್ಲಾ ಸೇರಿ ಎಂದೋ ಮುಗಿಸಿದಿರಿ. ಅದಕ್ಕೆ ಸಮಾಧಿಯೂ ಕಟ್ಟಿ ತಿಥಿ ಊಟವನ್ನೂ ಮಾಡಿದ್ದೀರಿ. ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸ್ವಾತಂತ್ರ್ಯ ಉದ್ಯಾನವನದಲ್ಲಿ ಹೇಳಿದ ತಲೆ ತಲೆಮಾರುಗಳ ಲೂಟಿ ಕಾಂಗ್ರೆಸ್ ಮಾತ್ರವಷ್ಟೇ ಈಗ ಉಳಿದಿರುವುದು.

ಗಾಂಧಿ ಹೆಸರೇಳಿಕೊಂಡು ಮತ್ತೆ ಅಧಿಕಾರಕ್ಕೆ ಬರಲು ಹೊಂಚು ಹಾಕುತ್ತಿದ್ದೀರಿ. ಇನ್ನೆಷ್ಟು ತಲೆಮಾರಿಗೆ ಆಗುವಷ್ಟು ಲೂಟಿ ಹೊಡೆಯಬೇಕು ಮಿಸ್ಟರ್ ಸಿದ್ದರಾಮಯ್ಯ?

ಅಧಿಕಾರಕ್ಕಾಗಿ ಸ್ವಾತಂತ್ರ್ಯ ಹೋರಾಟದ ಜಪವೇ? ನೇರವಾಗಿ ಕುರ್ಚಿ ಜಪವನ್ನೇ ಮಾಡಬಹುದಲ್ಲವೇ?

ಅಂದು ದೇಶ ಉಳಿಸಿದ ಕಾಂಗ್ರೆಸ್ ಬೇರೆ, ಈಗ ದೇಶವನ್ನು ಲೂಟಿ ಹೊಡೆಯುತ್ತಿರುವ ಕಾಂಗ್ರೆಸ್ಸೇ ಬೇರೆ. ಲೂಟಿ ಹೊಡೆಯೋದೇ ದೇಶಪ್ರೇಮವಾ ಮಿಸ್ಟರ್ ಸಿದ್ದರಾಮಯ್ಯ? ನಿಮ್ಮ 5 ವರ್ಷದ ಆಡಳಿತದಲ್ಲಿ ನಿಮ್ಮ ಸುತ್ತಮುತ್ತಲಿನ ಪಟಾಲಂ ಹೊಡೆದ ಕೊಳ್ಳೆಯ ಲೆಕ್ಕ ಕೊಡಲೇ? ಅರ್ಕಾವತಿ ರೀಡು ಹಗರಣ ತೆಗೆದರೆ ಮುಖ ಎಲ್ಲಿಟ್ಟುಕೊಳ್ಳುತ್ತೀರಿ?

ಜೆಡಿಎಸ್ ಇನ್ನೊಂದು ಪಕ್ಷದ ಬಳಿ ಬೆಂಕಿ ಕಾಯಿಸಿಕೊಳ್ಳುವ ಪಕ್ಷ ಎನ್ನುತ್ತೀರಿ. ಆದರೆ, ನಿಮ್ಮನ್ನು ನಂಬಿದ್ದಕ್ಕೆ ನಮ್ಮ ಪಕ್ಷಕ್ಕೆ ನೀವೇ ಬೆಂಕಿ ಹಾಕಿದ್ದು ಮರೆತಿರಾ? ಬಿಜೆಪಿ ಜತೆ ಒಳಒಪ್ಪಂದ ಮಾಡಿಕೊಂಡು ಆಪ್ತರನ್ನೆಲ್ಲ ಮುಂಬಯಿಗೆ ಸಾಗಹಾಕಿದ ಕತ್ತಲ ಕಿತಾಪತಿ ಮಾಡಿದ್ದು ಯಾರು?

Kumaraswamy tears Father HD Devegowda Health

ಇಷ್ಟಕ್ಕೂ ತಾವೇನೂ ಮೂಲ ಕಾಂಗ್ರೆಸ್ಸಿಗರಲ್ಲ. ವಲಸೆ ಹೋಗಿ, ವಿಷಹುಳವಾಗಿ ಅಲ್ಲಿಗೆ ಕರೆದುಕೊಂಡು ಹೋದವರ ಕೈ ಕಚ್ಚಿದ್ದು, ಆಮೇಲೆ ನಿಮ್ಮಿಂದ ಆ ಪಕ್ಷ ಬಿಟ್ಟುಹೋದವರ ಪಟ್ಟಿ ಹನುಮನ ಬಾಲದಂತೆ ಬೆಳೆದದ್ದು ಗೊತ್ತಿಲ್ಲವೆ? ಆಶ್ರಯ ಕೊಟ್ಟ ಮನೆಯಲ್ಲೇ ಗಳ ಇರಿದವರು ಯಾರು?

ಹಿರಿಯರಾದ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ನೀವು ನಡೆಸುತ್ತಿರುವ ಷಡ್ಯಂತ್ರ ಇನ್ನೂ ನಿಂತಿಲ್ಲ, ಇನ್ನೊಬ್ಬರನ್ನು ಸೈಡಿಗೆ ತಳ್ಳಿ ಆಗಲೇ ಸಿಎಂ ಕುರ್ಚಿ ಮೇಲೆ ಟವೆಲ್ ಹಾಕಿದ್ದೀರಲ್ಲ ಮಿಸ್ಟರ್ ಸಿದ್ದರಾಮಯ್ಯ? ಇದು ಸ್ವಾತಂತ್ರ್ಯ ಸಂಗ್ರಾಮವೋ ಅಥವಾ ಕರ್ಚಿಗಾಗಿ ಹೋರಾಟವೋ?

ನಿಮ್ಮಂತಹ ರಾಜಕೀಯ ಭಸ್ಮಾಸುರರು ಇರುವ ಕಾಂಗ್ರೆಸ್ ಪಕ್ಷದ ಹತ್ತಿರಕ್ಕೆ ಬಂದವರೆಲ್ಲ ಸುಟ್ಟು ಭಸ್ಮವಾಗಿದ್ದಾರೆ. ನಮ್ಮ ಪಕ್ಷ ಇರಲಿ, ಪಕ್ಕದ ಮಹಾರಾಷ್ಟ್ರದಲ್ಲಿ ಶಿವಸೇನೆ ಗತಿ ಏನಾಯಿತು? ಯುಪಿಎ-1 ಸರಕಾರಕ್ಕೆ ಬೆಂಬಲ ಕೊಟ್ಟ ತಪ್ಪಿಗೆ 65 ಕ್ಷೇತ್ರ ಗೆದ್ದಿದ್ದ ಕಮ್ಯುನಿಸ್ಟರು ಈಗೆಲ್ಲಿದ್ದಾರೆ? ನಿಮ್ಮ ಸಹವಾಸ ಮಾಡಿದವರಿಗೆಲ್ಲ ಇದೇ ಗತಿ!

ಅಧಿಕಾರದ ದುರಾಸೆಗೆ ಅನ್ಯಪಕ್ಷಗಳನ್ನು ನಂಬಿಸಿ ಕತ್ತು ಕುಯ್ಯವ ಕಾಂಗ್ರೆಸ್ ಪಕ್ಷ ಎಸಗಿದ ಪಾಪಕ್ಕೆ ಈಗ ಫಲ ಉಣ್ಣುತ್ತಿದೆ. ಚುನಾವಣೆ ಹತ್ತಿರ ಬರುತ್ತಿದ್ದಂತೆ ಸೋಗಲಾಡಿ ಸಿದ್ದರಾಮಾಯಣ ಶುರುವಾಗಿದೆ. ಈ ಸೋಗಲಾಡಿ ಸಿದ್ದಯ್ಯನ ಅಸಲಿಯೆತ್ತು ಏನು ಎಂಬುದು ಜನರಿಗೆ ಚೆನ್ನಾಗಿ ಗೊತ್ತಿದೆ.

Tags: FEATURED
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್