crossorigin="anonymous"> Praveen Nettar ಹತ್ಯೆಗೈದ ಆರೋಪಿಗಳ ಬಂಧನ : 10ಕ್ಕೆ ಏರಿದ ಬಂಧಿತರ ಸಂಖ್ಯೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Praveen Nettar ಹತ್ಯೆಗೈದ ಆರೋಪಿಗಳ ಬಂಧನ : 10ಕ್ಕೆ ಏರಿದ ಬಂಧಿತರ ಸಂಖ್ಯೆ

Radhakrishna Anegundi by Radhakrishna Anegundi
11-08-22, 9 : 43 am
in ದಕ್ಷಿಣ ಕನ್ನಡ
Praveen Nettar murder case 7th-accused-arrest puttur
Share on FacebookShare on TwitterWhatsAppTelegram

ಆಸ್ತಿ ಜಪ್ತಿ ಮಾಡುವುದಾಗಿ ಅಲೋಕ್ ಕುಮಾರ್ ಗುಡುಗಿದ ಬೆನ್ನಲ್ಲೇ ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ ( Praveen Nettar )

ಮಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ( Praveen Nettar) ಹತ್ಯೆ ಪ್ರಕರಣದ ಪ್ರಮುಖ ಮೂವರು ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಈ ಮೂಲಕ ಕೊಲೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 10ಕ್ಕೆ ಏರಿದೆ. ಇನ್ನು ಈ ಬಂಧನವನ್ನು ಪೊಲೀಸ್ ಮೂಲಗಳು ದೃಢಪಡಿಸಿಲ್ಲ. ಮಧ್ಯಾಹ್ನ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪತ್ರಿಕಾಗೋಷ್ಟಿ ಕರೆದಿದ್ದು, ಮಾಹಿತಿ ಹಂಚಿಕೊಳ್ಳುವ ನಿರೀಕ್ಷೆ ಇದೆ.

ನಿನ್ನೆಯಷ್ಟೇ ಮಂಗಳೂರಿನಲ್ಲಿ ಮಾತನಾಡಿದ್ದ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ( alok kumar ips) ಪ್ರಮುಖ ಆರೋಪಿಗಳ ಫೋಟೋ, ವಿಳಾಸ ನಮ್ಮ ಬಳಿ ಇದೆ. ವಾರೆಂಟ್ ಜಾರಿಗೊಳಿಸಿ ಆಸ್ತಿ ಜಪ್ತಿ ಮಾಡುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ಆರೋಪಿಗಳ ಬಂಧನವಾಗಿದೆ.

ಇದನ್ನು ಓದಿ : Praveen Nettar murder case ನಲ್ಲಿ 7 ಆರೋಪಿಯನ್ನು ಬಂಧಿಸಿದ ಖಾಕಿ ಪಡೆ

ಜುಲೈ 26ರಂದು ಸಂಜೆ ಬೆಳ್ಳಾರೆಯ ( Bellare) ಮಾಸ್ತಿಕಟ್ಟೆ ಬಳಿ ಬೈಕ್ ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಪ್ರವೀಣ್ ಅವರನ್ನು ಕಡಿದು ಬರ್ಬರವಾಗಿ ಕೊಲೆ ಮಾಡಿದ್ದರು. ಪೈಶಾಚಿಕ ಕೃತ್ಯಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಜೊತೆಗೆ ಸಮಾಜ ದ್ರೋಹಿ ಸಂಘಟನೆಯೂ ಇದರಲ್ಲಿ ಪಾಲುದಾರ ಅನ್ನುವ ವಿಷಯವೂ ಬೆಳಕಿಗೆ ಬಂದಿತ್ತು.

praveen-nettar-case-identified-main-accuses-adgp-alok-kumar

ಇದೇ ಪ್ರಕರಣ ಸಂಬಂಧ ಜುಲೈ 28 ರಂದು ಸವಣೂರಿನ ಜಾಕಿರ್ (29) ಮತ್ತು ಬೆಳ್ಳಾರೆಯ ಶಫೀಕ್ (27) ಎಂಬವರನ್ನು ಬಂಧಿಸಲಾಗಿತ್ತು. ಬಳಿಕ ಆಗಸ್ಟ್ 2 ರಂದು ಬೆಳ್ಳಾರೆ ಪಳ್ಳಿಮಜಲಿನ ಸದ್ದಾಂ (32) ಮತ್ತು ಹ್ಯಾರಿಸ್ (42) ಎಂಬವರನ್ನು ಬಂಧಿಸಲಾಗಿತ್ತು. ಆಗಸ್ಟ್ 6 ರಂದು  ಸುಳ್ಯ ನಾವೂರಿನ ಅಬಿದ್ (22) ( Abid (22), son of Yakub, a resident of Mahamayi temple Navoor ) ಮತ್ತು ಬೆಳ್ಳಾರೆ ಗೌರಿ ಹೊಳೆ ನಿವಾಸಿ ನೌಫಲ್ (28) ( Naufal (28), son of Mohammed of Gaurihole,Bellare) ಎಂಬವರನ್ನು ಬಂಧಿಸಲಾಗಿತ್ತು. ಆಗಸ್ಟ್ 9 ರಂದು ಅಬ್ದುಲ್ ಕಬೀರ್ ಎಂಬಾತನನ್ನು ಬಂಧಿಸಲಾಗಿತ್ತು. ಇದೀಗ ಮತ್ತೆ ಮೂವರ ಬಂಧನವಾಗಿದೆ.

ಇನ್ನು ಬಂಧಿತರ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿದ್ದು, ಕೊಲೆಗಾರರಿಗೆ ರಕ್ಷಣೆ ನೀಡಿದವರನ್ನು ಕೂಡಾ ಬಂಧಿಸಲು ರಾಷ್ಟ್ರೀಯ ತನಿಖಾ ದಳ ಮಾ,ಟರ್ ಪ್ಲಾನ್ ರೂಪಿಸಿದೆ.

Tags: FEATURED
ShareTweetSendShare

Discussion about this post

Related News

ಆಯುಷ್ಮಾನ್ ಭಾರತ್ ಯೋಜನೆ ದಕ ಜಿಲ್ಲೆಗೆ ೨೫ ಕೋಟಿ ೧೧ ಲಕ್ಷ ರೂಪಾಯಿ ಅನುದಾನ

ಆಯುಷ್ಮಾನ್ ಭಾರತ್ ಯೋಜನೆ ದಕ ಜಿಲ್ಲೆಗೆ ೨೫ ಕೋಟಿ ೧೧ ಲಕ್ಷ ರೂಪಾಯಿ ಅನುದಾನ

ನಾಳೆಯಿಂದ 6,7,8 ನೇ ತರಗತಿ ಪ್ರಾರಂಭ : ವಿದ್ಯಾರ್ಥಿಗಳ ಸ್ವಾಗತಕ್ಕೆ ಸಜ್ಜಾದ ಶಾಲೆಗಳು

ಕರಾವಳಿಯಲ್ಲಿ ಮಳೆಯ ಅಬ್ಬರ : ನಾಳೆ ಜುಲೈ 09ಕ್ಕೆ ಶಾಲಾ ಕಾಲೇಜುಗಳಿಗೆ ರಜೆ

Dose Mela in refresh cafe puttur three days

ಪುತ್ತೂರಿನಲ್ಲಿ ದೋಸೆ ಮೇಳ : ಮೂರು ದಿನಗಳ ಕಾಲ ನಡೆಯಲಿದೆ ದೋಸೆ ಜಾತ್ರೆ

ಸಾಮಾಜಿಕ ಹೋರಾಟಗಾರ ಕಾಂಗ್ರೆಸ್ ಮುಖಂಡ ಪದ್ಮನಾಭ ನರಿಂಗಾನ ಇನ್ನಿಲ್ಲ

ಅರುಣ್ ಪುತ್ತಿಲ ವಿರುದ್ಧ ತೊಡೆ ತಟ್ಟಿದ ಸಂಜೀವ ಮಠಂದೂರು

ಪುತ್ತಿಲ ಬಿಜೆಪಿಗೆ ಬಂದ್ರೆ ಕರಾವಳಿಯಲ್ಲಿ ಕಾಂಗ್ರೆಸ್ ಗೆ ಸಂಕಷ್ಟ…?

ಹತ್ತೂರ ಒಡೆಯನ ಸನ್ನಿಧಿಯ ಅಭಿವೃದ್ಧಿಗೆ 2 ಕೋಟಿ ರೂ ಅನುದಾನ ತಂದ ಅಶೋಕ್ ರೈ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

Yakshagana : ಲೀಲಾವತಿಯವರಿಗೆ leelavathi baipadithaya ಪ್ರಶಸ್ತಿ ಒಲಿದಿದ್ದು ಹೇಗೆ…. ಮಗ ಬಿಚ್ಚಿಟ್ಟ ರಹಸ್ಯ

ಕೊರಗಜ್ಜ koragajja ಸಿನಿಮಾಗೆ ಸಂಕಷ್ಟ : ಕಳಸದಲ್ಲಿ ನಡೆದ ಕಿರಿಕ್ ನ ಅಸಲಿ ಕಥೆಯೇನು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್