crossorigin="anonymous"> ಬಿಜೆಪಿಯಲ್ಲಿ ಅರುಣೋದಯ  : ಇಂದು ಪುತ್ತೂರು ಪುತ್ತಿಲ ಪರಿವಾರ ಸಮಾಲೋಚನಾ ಸಭೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಬಿಜೆಪಿಯಲ್ಲಿ ಅರುಣೋದಯ  : ಇಂದು ಪುತ್ತೂರು ಪುತ್ತಿಲ ಪರಿವಾರ ಸಮಾಲೋಚನಾ ಸಭೆ

Radhakrishna Anegundi by Radhakrishna Anegundi
05-02-24, 9 : 56 am
in ಟಾಪ್ ನ್ಯೂಸ್, ರಾಜ್ಯ
arun-kumar-puthila-puthila-parivara-meeting-in-puttur kotecha hall
Share on FacebookShare on TwitterWhatsAppTelegram

ಪುತ್ತಿಲ ಪರಿವಾರದ ಸದಸ್ಯರ ಅಭಿಪ್ರಾಯ ಸಂಗ್ರಹ ಮುಂದಾದ ಅರುಣ್ ಪುತ್ತಿಲ

ಕರಾವಳಿಯ ಬಿಜೆಪಿಗೆ ಬಿಸಿ ತುಪ್ಪವಾಗಿರುವ ಅರುಣ್ ಕುಮಾರ್ ಪುತ್ತಿಲ ಅವರನ್ನು ಮತ್ತೆ ಪಕ್ಷಕ್ಕೆ ಬರ ಮಾಡಿಕೊಳ್ಳಲು ಸಿದ್ದತೆಗಳಾಗಿದೆ. ರಾಷ್ಟ್ರ ಮತ್ತು ರಾಜ್ಯ ನಾಯಕರು ಅರುಣ್ ಪುತ್ತಿಲ ಬಿಜೆಪಿ ಸೇರ್ಪಡೆಗೆ ಹಸಿರು ನಿಶಾನೆ ತೋರಿದ್ದಾರೆ. ಆದರೆ ಮಾಜಿ ಶಾಸಕ ಸಂಜೀವ ಮಠಂದೂರು ಸೇರಿದಂತೆ ಕೆಲ ನಾಯಕರು ಅರುಣ್ ಪುತ್ತಿಲ ( ಪುತ್ತಿಲ ಪರಿವಾರ ) ಎಂಟ್ರಿಗೆ ತಡೆಯಾಗಿ ಕೂತಿದ್ದಾರೆ.

ಕೆಲ ತಿಂಗಳ ಹಿಂದೆ ಮಠಂದೂರು ಪುತ್ತಿಲ ಅವರನ್ನು ಅಣಬೆ ಎಂದು ಪರೋಕ್ಷವಾಗಿ ತಿವಿಯುವ ಮೂಲಕ ಬಂಡಾಯದ ಬೆಂಕಿಗೆ ತುಪ್ಪ ಸುರಿದಿದ್ದರು, ಇದೀಗ ಮತ್ತೆ ಪುತ್ತಿಲ ವಿರುದ್ಧ ಮಾತನಾಡಿದ್ದು, ಘರ್ ವಾಪ್ಸಿ ಪ್ರಕ್ರಿಯೆಗೆ ತಡೆಯಾಗಿ ಪರಿಣಮಿಸಿದೆ. ಅರುಣ್ ಪುತ್ತಿಲ ಬಿಜೆಪಿಗೆ ಬಂದ್ರೆ ಸಂಜೀವ ಮಠಂದೂರು ಅವರ ರಾಜಕೀಯ ಭವಿಷ್ಯ ಮಂಕಾಗಲಿದೆ ಅನ್ನೋ ಮಾತುಗಳು ಕೂಡಾ ಕೇಳಿ ಬಂದಿದೆ.

ಇದನ್ನು ಓದಿ : ಅರುಣ್ ಪುತ್ತಿಲ ವಿರುದ್ಧ ತೊಡೆ ತಟ್ಟಿದ ಸಂಜೀವ ಮಠಂದೂರು

ಈ ನಡುವೆ ಬಿಜೆಪಿ ಸೇರ್ಪಡೆ ಕುರಿತಂತೆ ಅಂತಿಮ ತೀರ್ಮಾನಕೊಳ್ಳುವ ನಿಟ್ಟಿನಲ್ಲಿ ಇಂದು (ಸೋಮವಾರ) ಅರುಣ್ ಪುತ್ತಿಲ ಸಮಾಲೋಚನಾ ಸಭೆ ಕರೆದಿದ್ದಾರೆ. ವಿಧಾನಸಭೆ ಚುನಾವಣೆಯ ನಂತರ ಅವರು ಹುಟ್ಟುಹಾಕಿರುವ ಪುತ್ತಿಲ ಪರಿವಾರದ ಸಭೆ  ಇದಾಗಿದ್ದು ಪ್ರತೀ ಬೂತ್ ನಿಂದ 5 ಕಾರ್ಯಕರ್ತರು ಭಾಗವಹಿಸುವಂತೆ ಸೂಚಿಸಲಾಗಿದೆ. ಆದರೆ ಈ ಸಭೆಗೆ ಕರೆಗೆ ಬಿಜೆಪಿ ನಾಯಕರೇ ಪ್ರಚಾರ ಕೊಟ್ಟ ಕಾರಣ ಸಮಾಲೋಚನಾ ಸಭೆಯಲ್ಲಿ ವಿಪರೀತ ಜನ ಸೇರುವ ಸಾಧ್ಯತೆಗಳಿದೆ.

ಅರುಣ್ ಕುಮಾರ್ ಪುತ್ತಿಲ (Arun Kumar Puthila) ಅವರ ಸೇರ್ಪಡೆಗೆ ಸ್ಥಳೀಯ ಬಿಜೆಪಿ (BJP) ಗಡುವು ವಿಧಿಸಿದ್ದು, ರಾಜ್ಯ ನಾಯಕರು ಆದಷ್ಟು ಬೇಗ ನಿರ್ಧಾರ ತಿಳಿಸುವಂತೆ ಹೇಳಿದ್ದಾರೆ.

ಇದನ್ನು ಓದಿ : ನಳಿನ್ ಹಠಾವೋ ಕೂಗಿಗೆ ಮತ್ತಷ್ಟು ಬಲ – ಯಶವಂತಪುರ ಮಂಗಳೂರು ರೈಲು ಕೋಯಿಕ್ಕೋಡ್ ಗೆ ವಿಸ್ತರಣೆ

ಫೆ.5ರಂದು ಪುತ್ತೂರಲ್ಲಿ ನಡೆಯುವ ಪುತ್ತಿಲ ಪರಿವಾರದ ಸಭೆ ಪುತ್ತಿಲ ಪರಿವಾರಕ್ಕೆ ಮಾತ್ರವಲ್ಲ ಬಿಜೆಪಿಗೂ ನಿರ್ಣಾಯಕ. ಕಳೆದ ವಿಧಾನಸಭಾ ಚುನಾವಣೆ ಬಳಿಕ ಈವರೆಗೂ ಪುತ್ತೂರು ಮಾತ್ರವಲ್ಲದೆ ಕರಾವಳಿ ಭಾಗದಲ್ಲಿ ಪುತ್ತಿಲ ಪರಿವಾರ, ಬಿಜೆಪಿ ಹಾಗೂ ಸಂಘಪರಿವಾರದ ನಿದ್ದೆಗೆಡಿಸಿದೆ.

ಈ ಕಾರಣದಿಂದ ಸೋಮವಾರ ನಡೆಯುವ ಪುತ್ತಿಲ ಪರಿವಾರದ ಸಮಾಲೋಚನಾ ಸಭೆ ಸೂಕ್ತ ನಿರ್ಧಾರ ಕೈಗೊಂಡರೆ ಬಿಜೆಪಿ ನಿಟ್ಟುಸಿರುವ ಬಿಡಲಿದೆ. ಒಂದು ವೇಳೆ ಷರತ್ತಿಗೆ ಬಿಜೆಪಿ ಅಂಟಿ ಕೂತರೆ ಪುತ್ತಿಲ ಪರಿವಾರ ಲೋಕಸಭಾ ಚುನಾವಣೆಗೂ ಬಿಜೆಪಿಗೆ ಕಾಡುವುದರಲ್ಲಿ ಅನುಮಾನವಿಲ್ಲ, ಕೇವಲ ಮಂಗಳೂರು ಲೋಕಸಭಾ ಕ್ಷೇತ್ರ  ಮಾತ್ರವಲ್ಲದೆ ಬೇರೆ ಕ್ಷೇತ್ರಗಳ ಮೇಲೂ ಇದು ಪರಿಣಾಮ ಬೀರಲಿದೆ.

kotecha 2 scaled

ಈಗಾಗಲೇ ಬಿಜೆಪಿ ನಾಯಕರಿಂದ ಅರುಣ್ ಪುತ್ತಿಲ ಅವರಿಗೆ ಅನ್ಯಾಯವಾಗಿದೆ ಅನ್ನುವ ಆಕ್ರೋಶ ಹಿಂದೂ ಸಂಘಟನೆಗಳ ಯುವ ಕಾರ್ಯಕರ್ತರಲ್ಲಿದೆ. ಪುತ್ತೂರಿನ ಬ್ಯಾನರ್ ಗಲಾಟೆಯಲ್ಲಿ ಪೊಲೀಸ್ ಇಲಾಖೆ ಬಿ ರಿಪೋರ್ಟ್ ಸಲ್ಲಿಸಿರುವ ಬಗ್ಗೆ ಬಿಜೆಪಿ ಮೌನಕ್ಕೆ ಶರಣಾಗಿರುವುದು ಬೂದಿ ಮುಚ್ಚಿದ ಕೆಂಡದಂತಿದೆ.

ಈ ನಡುವೆ ಪುತ್ತಿಲ ಪರಿವಾರವನ್ನು ಒಡೆಯಲು ಪ್ರಯತ್ನಿಸಲಾಗುತ್ತಿದೆ ಅನ್ನೋ ಆರೋಪಗಳು ಕೇಳಿ ಬಂದಿದ್ದು, ಇದಕ್ಕೆ ಸವಾಲೊಡ್ಡುವ ನಿಟ್ಟಿನಲ್ಲಿ ಹುದ್ದೆ ಕೊಟ್ಟರೆ ಪಕ್ಷಕ್ಕೆ ಬರುತ್ತೇವೆ, ಹುದ್ದೆ ಸಿಕ್ಕ ಮೇಲೆ ಪುತ್ತಿಲ ಪರಿವಾರವನ್ನು ವಿಸರ್ಜಿಸುತ್ತೇವೆ ಅನ್ನುವ ಸಂದೇಶವನ್ನು ಬಿಜೆಪಿ ರವಾನಿಸುವ ಸಾಧ್ಯತೆಗಳಿದೆ.

kotecha 1 1 scaled

ಒಟ್ಟಿನಲ್ಲಿ ಕರಾವಳಿ ಹಿಂದೂ ಸಂಘಟನೆ ವಲಯದಲ್ಲಿ ಇದೀಗ ಪುತ್ತಿಲ ಪರಿವಾರಗ ಸಮಾಲೋಚನ ಸಭೆಯ ಬಗ್ಗೆ ಸಾಕಷ್ಟು ಕುತೂಹಲವಿದೆ.

Tags: FEATURED
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್