crossorigin="anonymous"> ತುಂಗಭದ್ರಾ ಜಲಾಶಯ : ಮುರಿದ 19ನೇ ಗೇಟ್‌ : ಆತಂಕದಲ್ಲಿ ಜನತೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ತುಂಗಭದ್ರಾ ಜಲಾಶಯ : ಮುರಿದ 19ನೇ ಗೇಟ್‌ : ಆತಂಕದಲ್ಲಿ ಜನತೆ

ರಿಪೇರಿಗೆ ಬೆಂಗಳೂರಿನಿಂದ ಬರಲಿದೆ ತಜ್ಞರ ತಂಡ

Radhakrishna Anegundi by Radhakrishna Anegundi
11-08-24, 8 : 52 am
in ಟಾಪ್ ನ್ಯೂಸ್, ರಾಜ್ಯ
koppal tungabhadra dam gate chain cut
Share on FacebookShare on TwitterWhatsAppTelegram

70 ವರ್ಷಗಳಲ್ಲಿ ಇದೇ ಮೊದಲ ಸಲ ತುಂಗಭದ್ರಾ ಜಲಾಶಯಕ್ಕೆ ಆತಂಕ

ಕರ್ನಾಟಕ, ಆಂಧ್ರ, ತೆಲಂಗಾಣ ರಾಜ್ಯದ ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್‌ನ ಚೈನ್ ತುಂಡಾಗಿ ಗೇಟ್ ಮೂಲಕ ಅಪಾರ ಪ್ರಮಾಣದ ನೀರು, ನದಿ ಪಾತ್ರಕ್ಕೆ ಹರಿಯುತ್ತದೆ.

ರಾತ್ರಿ 12 ಗಂಟೆ ವೇಳೆಗೆ ಈ ಘಟನೆ ನಡೆದಿದ್ದು ನದಿ ಪಾತ್ರದ ಜನರಲ್ಲಿ ಭಾರೀ ಆತಂಕ ಮೂಡಿಸಿದೆ. ಕಳೆದ ಕೆಲವು ದಿನಗಳಿಂದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಅಪಾರ ಪ್ರಮಾಣದ ನೀರು ತುಂಗಭದ್ರಾ ಜಲಾಶಯಕ್ಕೆ ಹರಿದು ಬಂದಿತ್ತು.

ಜಲಾಶಯದ 19ನೇ ಕ್ರಸ್ಟ್ ಗೇಟ್‌ನ ಚೈನ್ ತುಂಡಾಗಿರು ಕಾರಣ ಅದನ್ನು ಸರಿಪಡಿಸಲು ಭಾನುವಾರ ಬೆಳಗ್ಗೆ ಬೆಂಗಲೂರಿನಿಂದ ತಜ್ಞರ ತಂಡ ತೆರಳಲಿದೆ. ಈ ಬಗ್ಗೆ ಕರ್ನಾಟಕ ನೀರಾವರಿ ನಿಗಮದ ತುಂಬಭದ್ರಾ ಯೋಜನಾ ವೃತ್ತದ ಎಂಜಿನಿಯರ್ ಎಲ್. ಬಸವರಾಜ್ ತಿಳಿಸಿದ್ದಾರೆ.

ಇದನ್ನೂ ಓದಿ : ಬೆಂಗ್ಳೂರಿಗೆ ಶರಾವತಿ ನೀರು : ಕೈ ಬಿಟ್ಟ ಯೋಜನೆಗೆ ಮತ್ತೊಮ್ಮೆ ಸಮೀಕ್ಷೆ

ಪ್ರತೀ ವರ್ಷ ಜಲಾಶಯದ ಗೇಟ್ ಗಳ ನಿರ್ವಹಣೆ ನಡೆಯುತ್ತದೆ. ಜಲಾಶಯದ ಸುರಕ್ಷತೆಗೆ ಯಾವುದೇ ಆತಂಕವಿಲ್ಲ. ಆದರೆ ಜಲಾಶಯದಲ್ಲಿ ಸಾಕಷ್ಟು ಪ್ರಮಾಣದಲ್ಲಿರುವ ಈಗಿನ ನೀರಿನ ಮಟ್ಟದಲ್ಲಿ ಸಮಸ್ಯೆ ಪರಿಹಸಲು ಸಾಧ್ಯವೇ ಅನ್ನೋ ಪ್ರಶ್ನೆ ಎಂದು ಅವರು ತಿಳಿಸಿದ್ದಾರೆ.

ತುಂಗಭದ್ರಾ ಡ್ಯಾಂ ಒಟ್ಟು 133 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯವಿದ್ದು, ಡ್ಯಾಂನಲ್ಲಿ 33 ಟಿಎಂಸಿ ಹೂಳು ತುಂಬಿದ ಹಿನ್ನಲೆಯಲ್ಲಿ ಡ್ಯಾಂ ಸಂಗ್ರಹ ಸಾಮರ್ಥ್ಯ 100 ಟಿಎಂಸಿಯಷ್ಟಿದೆ. ಪ್ರಸ್ತುತ ತುಂಗಭದ್ರಾ ಜಲಾಶಯದಲ್ಲಿ 100 ಟಿಎಂಸಿ ಅಷ್ಟು ನೀರಿದೆ.

ಶನಿವಾರ ರಾತ್ರಿ ತುಂಗಭದ್ರಾ ಡ್ಯಾಮಿನ 19ನೇ ಕ್ರಸ್ಟ್ ಗೇಟ್‌ನ ಚೈನ್ ತುಂಡಾಗಿರುವ ಕಾರಣ ದುರಸ್ಥಿಗೆ ಬಂದಿರುವ ಗೇಟ್ ನ ಒತ್ತಡ ತಪ್ಪಿಸುವ ನಿಟ್ಟಿನಲ್ಲಿ ಉಳಿದ ಗೇಟ್ ಗಳ ಮೂಲಕ 35,000ಕ್ಕೂ ಹೆಚ್ಚು ಕ್ಯೂಸೆಕ್ ನೀರು ನದಿ ಪಾತ್ರಕ್ಕೆ ಹರಿಯುತ್ತಿದೆ.

koppal tungabhadra dam gate chain cut 01

ಇದು ನದಿ ಪಾತ್ರದ ಹಳ್ಳಿಗಳಲ್ಲಿ ಭಾರಿ ಆತಂಕಕ್ಕೂ ಕಾರಣವಾಗಿದೆ. ತುಂಗಭದ್ರಾ ನೀರಾವರಿ ಇಲಾಖೆಯು ಸಹ ನದಿಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ. ಸ್ಥಳಕ್ಕೆ ಕೊಪ್ಪಳ ಶಾಸಕ ರಾಘವೇಂದ್ರ ಸೇರಿದಂತೆ ನೀರಾವರಿ ಇಲಾಖೆಯ ತಜ್ಞರ ತಂಡವು ಆಗಮಿಸಿ ಪರಿಸ್ಥಿತಿಯ ಅವಲೋಕನ ನಡೆಸಿದ್ದಾರೆ.

ಕೊಪ್ಪಳ, ವಿಜಯನಗರ, ಬಳ್ಳಾರಿ, ರಾಯಚೂರು ಜಿಲ್ಲಾಡಳಿತಗಳು ನದಿ ಪಾತ್ರದಲ್ಲಿ ಜನರಿಗೆ ಅಲರ್ಟ್ ಇರುವಂತೆ ರಾತ್ರೋರಾತ್ರಿ ಡಂಗುರ ಸಾರಿಸಿದ್ದು, ಆಂಧ್ರ, ತೆಲಂಗಾಣ ರಾಜ್ಯಕ್ಕೂ ಎಚ್ಚರಿಕೆ ನೀಡಲಾಗಿದೆ.

19 ನೇ ಕ್ರಸ್ಟ್ ಗೇಟ್ ಚೈನ್ ಲಿಂಕ್ ಕಟ್ ಹಿನ್ನೆಲೆಯಲ್ಲಿ ನೀರಿನ ಮಟ್ಟವನ್ನು 55 ರಿಂದ 65 ಟಿಎಂಸಿ ವರೆಗೂ ಇಳಿಸೋದು ಅನಿವಾರ್ಯವಾಗಿದೆ. ಅಂದ್ರೆ ಅಣೆಕಟ್ಟಿನ ಅರ್ಧದಷ್ಟು ನೀರನ್ನು ಪೋಲು ಮಾಡಬೇಕಾಗುತ್ತದೆ. 1633 ಅಡಿಯಲ್ಲಿ 20 ರಿಂದ 21 ಅಡಿಯಷ್ಟು ನೀರು ಖಾಲಿಯಾದ್ರೆ ಮಾತ್ರ ಗೇಟ್ ದುರಸ್ತಿ ಕಾರ್ಯ ಸಾಧ್ಯವಾಗಲಿದೆ ಅನ್ನಲಾಗಿದ್ದು,ನೀರು ಖಾಲಿ ಮಾಡುವುದಕ್ಕೆ ನಾಲ್ಕೈದು ದಿನ ಬೇಕಾಗಲಿದೆ. ನೀರು ಖಾಲಿ ಮಾಡಿದ ನಂತರ ದುರಸ್ತಿ ಮಾಡಲು 7-8 ದಿನ ಬೇಕಾಗಬಹುದು.

ಈ ದುರಸ್ಥಿ ಕಾರ್ಯಕ್ಕೆ ಬೆಂಗಳೂರು, ಹೈದರಾಬಾದ್, ಚೆನ್ನೈ ನಿಂದ ತಜ್ಞರ ತಂಡ ಬರಲಿದ್ದು ಆ ನಂತರವೇ ದುರಸ್ತಿ ಬಗ್ಗೆ ನಿರ್ಧಾರ ಮಾಡಲಾಗುತ್ತದೆ.

Tags: FEATURED
ShareTweetSendShare

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್