crossorigin="anonymous"> ಪಿವಿಎನ್…ಮನಮೋಹನ್ ಸಿಂಗ್ ಅವರನ್ನೇ ಮರೆತ್ರಲ್ಲ….ಕಾಂಗ್ರೆಸ್ ಗೆ ತಿವಿದ ಮೋದಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಪಿವಿಎನ್…ಮನಮೋಹನ್ ಸಿಂಗ್ ಅವರನ್ನೇ ಮರೆತ್ರಲ್ಲ….ಕಾಂಗ್ರೆಸ್ ಗೆ ತಿವಿದ ಮೋದಿ

Radhakrishna Anegundi by Radhakrishna Anegundi
25-06-19, 8 : 09 pm
in ದೇಶ
Share on FacebookShare on TwitterWhatsAppTelegram

ಈ ಹಿಂದಿನ ಸರ್ಕಾರಗಳು ಯಾವ ಕೆಲಸವನ್ನೂ ಮಾಡಲಿಲ್ಲ ಅನ್ನುವುದನ್ನು ನಾವು ಒಪ್ಪುವುದಿಲ್ಲ, ಎಲ್ಲಾ ಸರ್ಕಾರದ ಅವಧಿಯಲ್ಲೂ ಕೆಲಸಗಳಾಗಿವೆ. ಹೀಗಾಗಿ ಇನ್ನು ಮುಂದೆ ಪದೇ ಪದೇ ಕಾಂಗ್ರೆಸ್‌ ಅವಧಿಯ ಸಾಧನೆಗಳನ್ನು ಸಂಸತ್‌ನಲ್ಲಿ ಹೇಳಬೇಡಿ ಎಂದು ಕಾಂಗ್ರೆಸ್ ಸಂಸದರಿಗೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.

q? encoding=UTF8&MarketPlace=IN&ASIN=B07LG59NPV&ServiceVersion=20070822&ID=AsinImage&WS=1&Format= SL250 &tag=torrentspree 21ir?t=torrentspree 21&l=ur2&o=31&camp=3638

ಸಂಸತ್ತಿನಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನೆ ಸಲ್ಲಿಸುವ ನಿರ್ಣಯದ ಮೇಲೆ ನಡೆದ ಚರ್ಚೆಯಲ್ಲಿ ಇಂದು ಲೋಕಸಭೆಯಲ್ಲಿ ಮಾತನಾಡಿದ ಪ್ರಧಾನಿ, ಅಟಲ್ ಬಿಹಾರಿ ವಾಜಪೇಯಿ ಅವರ ಹೆಸರನ್ನು ಯುಪಿಎ ಆಡಳಿತದ ಹತ್ತು ವರ್ಷದಲ್ಲಿ ಒಮ್ಮೆಯೂ ಹೇಳಿಲ್ಲ, ಪಿ.ನರಸಿಂಹರಾವ್ ಅವರ ಹೆಸರು ಹೇಳಿಲ್ಲ, ಕನಿಷ್ಟ ಮನಮೋಹನ್ ಸಿಂಗ್ ಅವರ ಹೆಸರನ್ನೂ ನೀವು ಹೇಳಿಲ್ಲ ಎಂದು ಕಾಂಗ್ರೆಸ್‌ಗೆ ತಿರುಗೇಟು ನೀಡಿದರು.

ನಿನ್ನೆ ಕಾಂಗ್ರೆಸ್‌ನ ಸಂಸದರು ಕಾಂಗ್ರೆಸ್‌ ಅವಧಿಯಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳನ್ನು ಉಲ್ಲೇಖಿಸಿ ಇಂದಿರಾ ಗಾಂಧಿ ಅವರ ಅವಧಿಯ ಸಾಧನೆಗಳನ್ನು ಪ್ರಸ್ತಾಪಿಸಿದ್ದರು. ಜವಾಹಾರ್ ಲಾಲ್, ಇಂದಿರಾ ಗಾಂಧಿ ಅವರುಗಳು ದೇಶಕ್ಕಾಗಿ ಜೀವನ ಸವೆಸಿದ್ದಾರೆ ಆದರೆ ಅವರ ಹೆಸರು ಸದನದಲ್ಲಿ ಕೇಳುವುದಿಲ್ಲ ಎಂದು ಟೀಕಿಸಿದ್ದರು. ಇದಕ್ಕೆ ಪ್ರಧಾನಿ ಈ ರೀತಿ ಟಾಂಗ್ ಕೊಟ್ಟಿದ್ದಾರೆ.

2,499 ರೂಪಾಯಿ ಮೊತ್ತದ ಮಿಕ್ಸಿಗೆ 1,139

q? encoding=UTF8&MarketPlace=IN&ASIN=B071Y7847J&ServiceVersion=20070822&ID=AsinImage&WS=1&Format= SL250 &tag=torrentspree 21ir?t=torrentspree 21&l=ur2&o=31&camp=3638

ಕಾಂಗ್ರೆಸ್‌ ಪಕ್ಷದ ನೆಹರೂ ಕುಟುಂಬದ ಹೊರಗಿನವರಿಗೆ ಭಾರತ ರತ್ನ ಸಿಗಲೇ ಇಲ್ಲ, ಆದರೆ ನಾವು ಹಾಗೆ ಮಾಡಲಿಲ್ಲ, ಪ್ರಣವ್ ಮುಖರ್ಜಿ ಅವರು ಜೀವನಪರ್ಯಂತ ಒಂದು ಪಕ್ಷವಾಗಿಯೇ ಇದ್ದರು, ಆದರೆ ನಾವು ಅವರ ಸೇವೆಯನ್ನು ಮಾತ್ರವೇ ಪರಿಗಣಿಸಿ ನಾವು ಅವರಿಗೆ ಭಾರತ ರತ್ನ ನೀಡಿದೆವು, ಇದು ನಮ್ಮ ಯೋಚನೆಯ ರೀತಿ ಎಂದ ಮೋದಿ, ನೆಹರೂ ಅವರನ್ನು ಹೊಗಳಿದರು. 1951 ರಲ್ಲಿ ನೆಹರು ಅವರು ಕಂಡಿದ್ದ ಕನಸನ್ನು ನಾವು ನನಸು ಮಾಡಬೇಕಿದೆ. ನೆಹರು ಅವರು ಬರೆದ ‘ಎಲ್ಲರೂ ಒಟ್ಟಾಗಿ ಭಾರತದ ನಿರ್ಮಾಣ ಮಾಡೋಣ’ ಎಂಬ ವಾಕ್ಯವನ್ನು ಓದಿ ಬನ್ನಿ ಎಲ್ಲರೂ ಸೇರಿ ದೇಶವನ್ನು ಬದಲಾಯಿಸೋಣ ಎಂದು ಕರೆ ಕೊಟ್ಟರು.

ಇದೇ ವೇಳೆ ಹಗರಣಗಳ ಆರೋಪ ಎದುರಿಸುತ್ತಿರುವವರನ್ನು ಇನ್ನೂ ಯಾಕೆ ಜೈಲಿಗೆ ಕಳಿಸಿಲ್ಲ ಎಂದು ಕೆಲವರು ನಮ್ಮನ್ನು ಟೀಕಿಸುತ್ತಿದ್ದಾರೆ, ಇದು ಯಾರನ್ನು ಬೇಕಾದರೂ ಏಕಾ ಏಕಿ ಜೈಲಿಗೆ ತಳ್ಳಲು ತುರ್ತು ಪರಿಸ್ಥಿತಿಯಲ್ಲ ಎಂದು ಮೋದಿ ಕಾಂಗ್ರೆಸ್ ನಾಯಕರ ವಿರುದ್ಧ ಸಂಸತ್ ನಲ್ಲಿ ತೀಕ್ಷ್ಣ ವಾಗ್ದಾಳಿ ನಡೆಸಿದ್ದರು.

q? encoding=UTF8&MarketPlace=IN&ASIN=B07CRBTCTF&ServiceVersion=20070822&ID=AsinImage&WS=1&Format= SL250 &tag=torrentspree 21ir?t=torrentspree 21&l=ur2&o=31&camp=3638

ನಾವು ಕಾನೂನಿನ ಪ್ರಕಾರ ಕಾರ್ಯನಿರ್ವಹಿಸುತ್ತೇವೆ, ಯಾರನ್ನು ಬೇಕಾದರೂ ಜೈಲಿಗೆ ತಳ್ಳುವುದಕ್ಕೆ ಇದು ತುರ್ತುಪರಿಸ್ಥಿತಿಯಲ್ಲ ಕಾನೂನು ತನ್ನ ಕ್ರಮ ತೆಗೆದುಕೊಳ್ಳಲಿದೆ, ಜಾಮೀನು ಪಡೆದವರು ಖುಷಿಯಾಗಿರಲಿ.
ಇದೇ ವೇಳೆ ತಮ್ಮ ಸರ್ಕಾರದ ‘ನವ ಭಾರತ’ ದೃಷ್ಟಿಕೋನವನ್ನು ಎತ್ತಿ ಹಿಡಿದಿರುವ ಪ್ರಧಾನಿ ನರೇಂದ್ರ ಮೋದಿ, ಜನ ಸುರಕ್ಷಿತ, ಸುಭದ್ರ ಮತ್ತು ಅಂತರ್ಗತ ಭಾರತವನ್ನು ಬಯಸಿದ್ದಾರೆ.

ಈ ನಡುವೆ ನೀರಾವರಿ ಕುರಿತಂತೆ ತಮ್ಮ ಕನಸುಗಳನ್ನು ಬಿಚ್ಚಿಟ್ಟಿರುವ ಪ್ರಧಾನಿ ಮುಂದಿನ ದಿನಗಳಲ್ಲಿ ರೈತರಿಗೆ ಉತ್ತಮ ಅವಕಾಶ ಸಿಗಲಿದೆ ಅನ್ನುವ ಮುನ್ಸೂಚನೆ ನೀಡಿದರು.

q? encoding=UTF8&MarketPlace=IN&ASIN=B07QPV3PYZ&ServiceVersion=20070822&ID=AsinImage&WS=1&Format= SL250 &tag=torrentspree 21ir?t=torrentspree 21&l=am2&o=31&a=B07QPV3PYZ

ರಾಷ್ಟ್ರಪತಿಗಳು ತಮ್ಮ ಭಾಷಣದಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸುವಲ್ಲಿ ನಾವು ಮುಂದಾಗಿದ್ದೇವೆ. ಭಾರತವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.

ಕಳೆದ ಏಳು ದಶಕಗಳಲ್ಲಿ ಆಗಿರುವ ಸಮಸ್ಯೆಗಳನ್ನು ಕೇವಲ ಐದು ವರ್ಷದಲ್ಲಿ ಪರಿಹಾರ ಕಂಡುಹಿಡಿಯಲು ಸಾಧ್ಯವಿಲ್ಲ. ಆದರೆ ಈ ನಿಟ್ಟಿನಲ್ಲಿ ನಮ್ಮ ದಿಟ್ಟ ಹೆಜ್ಜೆ ಸರಿಯಾಗಿ ಇಟ್ಟಿದ್ದೇವೆ. ಇದೇ ಕಾರಣಕ್ಕಾಗಿ ಜನರು ನಮಗೆ ಸಾಥ್‌ ನೀಡಿದ್ದಾರೆ. ಅತಿ ಹೆಚ್ಚು ಬೆಂಬಲ ನೀಡಿದ್ದಾರೆ ಎಂದರು.

Get upto 50% off on Fitness and Sports Accessories 

2014ರಲ್ಲಿ ಮೊದಲ ಬಾರಿಗೆ ಸಂಸತ್ ಪ್ರವೇಶಿಸಿದಾಗ ನೀಡಿದ ವಾಗ್ದಾನದಂತೆ ಬಡವರ ಪರವಾಗಿಯೇ ನಾನು ಹಾಗೂ ನಮ್ಮ ಸರಕಾರ ಕೆಲಸ ಮಾಡಿದ್ದೇವೆ. ಯಂಗ್ ಇಂಡಿಯಾ ನಿರ್ಮಾಣವೇ ನಮ್ಮ ಗುರಿಯಾಗಿದೆ.

ಕೇಂದ್ರ ಮತ್ತು ರಾಜ್ಯ ಸರಕಾರ ಕೈ ಜೋಡಿಸಿದರೆ ಮಾತ್ರ ದೇಶವನ್ನು ಪ್ರಗತಿಯತ್ತ ಮುನ್ನಡೆಸಲು ಸಾಧ್ಯ. ಇದನ್ನು ಹೊಸದಿಲ್ಲಿಯ ಕೆಂಪುಕೋಟೆಯ ಮೇಲೆ ಎರಡು ಬಾರಿ, ಸದನದಲ್ಲಿಯೇ ಹಲವು ಬಾರಿ ತಿಳಿಸಿದ್ದೇನೆ.

ಜೂನ್‌ 25ರ ಮಧ್ಯರಾತ್ರಿ ನಮ್ಮ ಸಂವಿಧಾನದ ಆತ್ಮವನ್ನು ಹಿಡಿದಿಟ್ಟುಕೊಳ್ಳಲಾಗಿತ್ತು. ಮಾಧ್ಯಮದ ಕತ್ತು ಹಿಸುಕಲಾಗಿತ್ತು. ಇಡೀ ದೇಶವೇ ಜೈಲು ಎಂಬಂತಾಗಿತ್ತು. ಅದೊಂದು ಕರಾಳ ಅಧ್ಯಾಯ. ಇದಕ್ಕೆ ಕಾರಣರಾದವರ ಹೆಸರು ಇಂದಿಗೂ ಅಳಿಸಲು ಸಾಧ್ಯವಾಗಲಿಲ್ಲ ಎಂದರು.

Replying to 'Motion Of Thanks On the President's Address' in Lok Sabha https://t.co/oXpl0TMDOg

— Narendra Modi (@narendramodi) June 25, 2019

ತುರ್ತು ಪರಿಸ್ಥಿತಿ ನಂತರ ಜನರು ಜಾತಿ, ಧರ್ಮವನ್ನು ಮೀರಿ ಪ್ರಜಾಪ್ರಭುತ್ವ ಎತ್ತಿ ಹಿಡಿಯಲು ಮತ ಚಲಾಯಿಸಿದರು ಎಂದು ಮೋದಿ ಸ್ಮರಿಸಿದರು.

ಕಾಂಗ್ರೆಸ್‌ ಕೇವಲ ಗಾಂಧಿ ಕುಟುಂಬದ ಗುಣಗಾನ ಮಾಡಿತು. ಇತರೆ ಪ್ರಬುದ್ಧ ನಾಯಕರನ್ನು ಮರೆಯಿತು. ಇದು ನಿಜಕ್ಕೂ ದುರದೃಷ್ಟಕರ ಎಂದು ಮೋದಿ ತಿಳಿಸಿದರು.

ShareTweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್