ಜಮ್ಮು ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಮಾಡಿದ ಕೇಂದ್ರ ಸರ್ಕಾರದ ಕ್ರಮವನ್ನು ದೇಶವೇ ಕೊಂಡಾಡುತ್ತಿದೆ. ಭಾರತದ ನೆಲೆದೊಳಗಿದ್ದ ರಾಜ್ಯಕ್ಕೆ ಇದ್ದ ವಿಶೇಷ ಸ್ಥಾನ ಮಾನ ಹಲವು ದಶಕಗಳಿಂದ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿತತು. ಆದರೆ ರಾಜಕೀಯ ಕಾರಣಗಳಿಗಾಗಿ ಇದನ್ನು ತೆಗೆಯುವ ಗೋಜಿಗೆ ಈ ಹಿಂದಿನ ಕೇಂದ್ರ ಸರ್ಕಾರಗಳು ಮನಸ್ಸು ಮಾಡಿರಲಿಲ್ಲ.
ಆದರೆ ಅಖಂಡ ಭಾರತದ ಕಲ್ಪನೆಯೊಂದಿಗೆ ಮೋದಿ ಸರ್ಕಾರ ಜಮ್ಮು ಕಾಶ್ಮೀರಕ್ಕೆ ಮರು ಹುಟ್ಟು ನೀಡಿದೆ. ಆದರೆ ಈ ನಿರ್ಧಾರಕ್ಕೆ ಕಾಂಗ್ರೆಸ್ ಸೇರಿದಂತೆ ಜೆಡಿಯು, ಸಿಪಿಐ, ಟಿಎಂಸಿ, ಆರ್ಜೆಡಿ, ಎಂಡಿಎಂಕೆ ವಿರೋಧ ವ್ಯಕ್ತಪಡಿಸಿದೆ. ದುರಂತ ಅಂದರೆ ಪ್ರತಿಪಕ್ಷಗಳ ವಿರೋಧಕ್ಕೆ ಪಾಕಿಸ್ತಾನವೂ ದನಿಗೂಡಿಸಿದೆ.
ಭಾರತ ಸರಕಾರದ ಕಾನೂನು ಬಾಹಿರ ಮತ್ತು ಏಕಪಕ್ಷೀಯ ಹೆಜ್ಜೆಯನ್ನು ಎದುರಿಸಲು ವಿಶ್ವಸಂಸ್ಥೆ ಬಳಿ ಮನವಿ ಮತ್ತು ಇರುವ ಎಲ್ಲಾ ಆಯ್ಕೆಗಳನ್ನು ಬಳಸಿಕೊಳ್ಳುವುದಾಗಿ ಪಾಕ್ ಪ್ರತಿಜ್ಞೆ ಮಾಡಿದೆ.
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯದಲ್ಲಿ ಪ್ರತಿಪಾದಿಸಿರುವಂತೆ, ಭಾರತ ಸರಕಾರದ ಏಕಪಕ್ಷೀಯ ನಡೆ ವಿವಾದಿತ ಕಾಶ್ಮೀರದ ಸ್ಥಿತಿಯನ್ನು ಬದಲಾಯಿಸಲು ಸಾಧ್ಯವಿಲ್ಲ. 370 ನೇ ವಿಧಿ ರದ್ದತಿಯನ್ನು ಜಮ್ಮು ಕಾಶ್ಮೀರ ಮತ್ತು ಪಾಕಿಸ್ತಾನದ ಜನತೆ ಎಂದಿಗೂ ಸ್ವಾಗತಿಸಲ್ಲ’ ಎಂದು ಪಾಕ್ ವಿದೇಶಾಂಗ ಸಚಿವಾಲಯ ಹೇಳಿದೆ.
Discussion about this post