ಇತ್ತೀಚೆಗಷ್ಟೇ ರಾಜೀನಾಮೆ ನೀಡಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಮನಸ್ಥಿತಿಯುಳ್ಳವರು ಮುಂದೆ ಆತ್ಮಹತ್ಯೆ ಮಾಡಿಕೊಳ್ಳಬೇಕಾದೀತು ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ಹೇಳಿದ್ದಾರೆ.
ಮನೆ ಬಾಗಿಲಿಗೆ ಐಸ್ ಕ್ರೀಂ ತರುವುದು ಹೇಗೆ ಗೊತ್ತಾ…? ಅದು 50% ಡಿಸ್ಕೌಂಟ್ ನಲ್ಲಿ
ಉಡುಪಿಯ ಕಿದಿಯೂರಿನ ಶೇಷಶಯನ ಸಭಾಂಗಣದಲ್ಲಿ ರಾಜ್ಯ ಬಿಜೆಪಿ ನೂತನ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಸುನಿಲ್ ಕುಮಾರ್ ಪ್ರಧಾನಿ ಮೋದಿ ನಿಲುವನ್ನು ವಿರೋಧಿಸಿ ರಾಜೀನಾಮೆ ಕೊಟ್ಟಿದ್ದೀರಿ. ಮುಂದೆ ನಿಮ್ಮಂತವರು ಆತ್ಮಹತ್ಯೆಯನ್ನೂ ಕೂಡ ಮಾಡಿಕೊಳ್ಳಬೇಕಾಗುತ್ತದೆ. ಕಾಶ್ಮೀರ, ರಾಮಮಂದಿರ ವಿಚಾರದಲ್ಲಿ ಸೆಂಥಿಲ್ ಅವರಿಗೆ ಅಸಮಾಧಾನವಂತೆ. ಕೇವಲ 370ನೇ ವಿಧಿ ಅಲ್ಲ, ಪಿಒಕೆ ಒಳಗೆ ಪ್ರವೇಶ ಮಾಡುತ್ತೇವೆ. ರಾಮ ಮಂದಿರವನ್ನೂ ಕಟ್ಟುತ್ತೇವೆ ಎಂದು ಸವಾಲು ಹಾಕಿದರು.
ಈ ಕೆಳಗಿನ ಇಮೇಜ್ ಕ್ಲಿಕ್ ಮಾಡಿ ದೊಡ್ಡ ಮೊತ್ತದ ಡಿಸ್ಕೌಂಟ್ ಪಡೆಯಿರಿ

ಜಿಲ್ಲಾಧಿಕಾರಿ ರಾಜೀನಾಮೆ ಕೊಟ್ಟರೆ ನಮ್ಮ ನಿಲುವು ಬದಲಾಗುವುದಿಲ್ಲ. ತಮಿಳುನಾಡಿನಲ್ಲಿ ಯಾವುದೋ ರಾಜಕೀಯ ಪಕ್ಷದಿಂದ ಚುನಾವಣೆಗೆ ನಿಲ್ಲುವುದಕ್ಕಾಗಿ ದೇಶದ ವ್ಯವಸ್ಥೆಯನ್ನು ಪ್ರಶ್ನೆ ಮಾಡಬೇಡಿ. ಕಾಶ್ಮೀರದ ಕುರಿತಂತೆ, ರಾಮ ಮಂದಿರದ ಕುರಿತಂತೆ ನಮ್ಮ ಪಕ್ಷದ ನಿಲುವು ಬದಲಾಗುವುದಿಲ್ಲ. ಜಗತ್ತು ಭಾರತದ ಆಡಳಿತವನ್ನು ಒಪ್ಪಿಕೊಳ್ಳುತ್ತಿದೆ. ಭಾರತದ ನಾಗರಿಕರು ಪ್ರಧಾನಿ ನರೇಂದ್ರ ಮೋದಿ ಅವರ ಕೆಲಸವನ್ನು ಮೆಚ್ಚಿದ್ದಾರೆ ಎಂದು ಸುನೀಲ್ ಕುಮಾರ್ ಹೇಳಿದ್ದಾರೆ.
ನಿನ್ನೆಯಷ್ಟೇ ಸಂಸದ ಅನಂತ ಕುಮಾರ್ ಹೆಗಡೆ ಸಸಿಕಾಂತ್ ಸೆಂಥಿಲ್ ವಿರುದ್ಧ ಟ್ವೀಟರ್ ನಲ್ಲಿ ಗುಡುಗಿದ್ದರು.
Discussion about this post