ಅಂಗನವಾಡಿ ಕಾರ್ಯಕರ್ತೆಯರಿಗೆ ಆದೇಶ ಪತ್ರ ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ನೂತನವಾಗಿ ನೇಮಕಗೊಂಡಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಆದೇಶ ಪತ್ರವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬಾಳ್ಕರ್ ಬೆಳಗಾವಿಯಲ್ಲಿಂದು ವಿತರಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರೀಕರ ಹಾಗೂ ವಿಶೇಷ ಚೇತನರ ಇಲಾಖೆ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ನೇಮಕಾತಿ ಆದೇಶ ಪತ್ರ ವಿತರಿಸಿ ಮಾತನಾಡಿದ ಸಚಿವರು ಸರ್ಕಾರದಿಂದ ರಾಜ್ಯದಲ್ಲಿ ಆಂಗ್ಲ ಮತ್ತು ಕನ್ನಡ ಭಾಷೆಯಲ್ಲಿ ಸುಮಾರು ೧೮ ಸಾವಿರ ನರ್ಸರಿಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ ಎಂದರು.

ಇಡೀ ರಾಜ್ಯದಲ್ಲಿ 18 ಸಾವಿರ, ಬೆಳಗಾವಿ ಜಿಲ್ಲೆಯಲ್ಲಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು, ಅದರಲ್ಲೂ ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ 300ಕ್ಕೂ ಅಧಿಕ ಎಲ್ಕೆಜಿ, ಯುಕೆಜಿ ಯನ್ನು ಆರಂಭಿಸಲಾಗುವುದು. ಇಂಗ್ಲೀಷ್ ಮತ್ತು ಕನ್ನಡ ಮಾಧ್ಯಮದಲ್ಲಿ ಮಾಂಟೆಸ್ಸರಿಗಳನ್ನು ತೆರೆಯಲಾಗುತ್ತಿದೆ.
ಇಲಾಖೆ ವತಿಯಿಂದ ಮಕ್ಕಳಿಗೆ ಯುನಿಫಾರಂ, ಸ್ಕೂಲ್ ಬ್ಯಾಗ್, ನೋಟ್ ಪುಸ್ತಕ, ಕಲಿಕಾ ಪುಸ್ತಕಗಳನ್ನು ವಿತರಿಸಲಾಗುವುದು. ಮುಂದಿನ ತರಗತಿಗಳಿಗೆ ಹೋಗಲು ಟಿಸಿ ಕೊಡುವ ವ್ಯವಸ್ಥೆ ಮಾಡಲಾಗುವುದು ಎಂದು ಸಚಿವರು ಹೇಳಿದರು..