ಇದೊಂದು ಕಾರ್ಯಕ್ಕಾಗಿ ಮಂಗಳೂರು ಪೊಲೀಸರು ಹಾಗೂ ನಗರ ಪೊಲೀಸ್ ಆಯುಕ್ತರನ್ನು ಅಭಿನಂದಿಸಲೇಬೇಕು. ಕಾನೂನು ಸುವ್ಯವಸ್ಥೆ ಅದರಲ್ಲೂ ಮಹಿಳೆಯರ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿ ಪ್ರಶ್ನೆಯೇ ಇಲ್ಲ ಅನ್ನುವ ಸಂದೇಶ ರವಾನಿಸಿದ್ದಾರೆ.
ಈ ಮೂಲಕ ಕಾನೂನು ಕೈಗೆತ್ತಿಕೊಂಡರೆ ಮುಂದೈತೆ ಮಾರಿ ಹಬ್ಬ ಅನ್ನುವ ಸಂದೇಶವನ್ನು ಕೂಡಾ ಕೊಟ್ಟಿದ್ದಾರೆ.
ಮಂಗಳೂರಿನ ಮಾಲ್ ಒಂದರಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿಗಳಾದ ಅಬ್ದುಲ್ ರಹೀಂ, ಸಫ್ವಾನ್ ಹಾಗೂ ಮತ್ತೋರ್ವ ಬಾಲಾಪರಾಧಿಯನ್ನು ವಶಕ್ಕೆ ಪಡೆದಿದ್ದಾರೆ.
ಇನ್ನು ಹಲವಾರು ಮಂದಿಯ ಬಂಧನ ಕಾರ್ಯ ನಡೆಯಬೇಕಾಗಿದ್ದು, ಅವರ ಬಂಧನಕ್ಕೂ ಬಲೆ ಬೀಸಲಾಗಿದೆ. ತಲೆಮರೆಸಿಕೊಂಡಿರುವವರ ಬಗ್ಗೆ ಮಾಹಿತಿ ಕಲೆ ಹಾಕಿರುವ ಪೊಲೀಸರು ಅವರಿಗೂ ಕಾನೂನು ಪಾಠ ಹೇಳಲು ನಿರ್ಧರಿಸಿದ್ದಾರೆ.
ಬಂಧಿತರ ಮೇಲೆ ಕಾನೂನು ಸುವ್ಯವಸ್ಥೆಗೆ ಧಕ್ಕೆ, ಕೋಮು ಸೌಹಾರ್ದತೆ ಹಾಳುಗೆಡವಲು ಯತ್ನ ಸೇರಿ ಹಲವು ಪ್ರಕರಣಗಳು ದಾಖಲಾಗುವ ಸಾಧ್ಯತೆಗಳಿದೆ.
ಒಟ್ಟಿನಲ್ಲಿ ಕೋಮು ಸೂಕ್ಷ್ಮ ಪ್ರದೇಶವಾಗಿರುವ ಕರಾವಳಿಯಲ್ಲಿ ಬೇರೆ ಸ್ವರೂಪ ಪಡೆಯಬಹುದಾಗಿದ್ದ ಪ್ರಕರಣವನ್ನು ಡಾ.ಹರ್ಷ ಅವರ ತಂಡ ಯಶಸ್ವಿಯಾಗಿ ನಿಭಾಯಿಸಿದೆ. ಈ ಮೂಲಕ ಮುಂದಾಗಬಹುದಾಗಿದ್ದ ಅನಾಹುತವನ್ನು ಕುಡ್ಲ ಪೊಲೀಸರು ತಪ್ಪಿಸಿದ್ದಾರೆ.
Discussion about this post