ಅವನೇ ಶ್ರೀಮನ್ನಾರಾಯಣ’ ಸಿನಿಮಾ ಡಿಸೆಂಬರ್ 27ಕ್ಕೆ ವಿಶ್ವದಾದ್ಯಂತ ತೆರೆಗೆ ಬರುತ್ತಿದೆ. ಈ ನಡುವೆ ಟ್ರೇಲರ್ ಅದ್ದೂರಿಯಾಗಿ ಬಿಡುಗಡೆಯಾಗಿದೆ. ಟ್ರೇಲರ್ ನಲ್ಲಿ ಸಾಕಷ್ಟು ಸೃಜನಶೀಲತೆ ಎದ್ದು ಕಾಣಿಸಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿಯಲ್ಲೂ ‘ಅವನೇ ಶ್ರೀಮನ್ನಾರಾಯಣ’ ಸಿನಿಮಾ ಬಿಡುಗಡೆಯಾಗುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಭಾರತದ ಸ್ಟಾರ್ ನಟರು ಈ ಚಿತ್ರಕ್ಕೆ ಬೆಂಬಲ ನೀಡಿದ್ದಾರೆ.
ಟ್ರೈಲರ್ ನಲ್ಲಿ ರಕ್ಷಿತ್ ಪೊಲೀಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಒಂದಾನೊಂದು ಕಾಲದಲ್ಲಿ ಎಂದು ನಿರ್ಜನ ಪ್ರದೇಶವೊಂದರಲ್ಲಿ ಕಟ್ಟಿಗೆಯ ಮನೆಯೊಂದು ಕಾಣಿಸುವುದರಿಂದ ದೃಶ್ಯ ಪ್ರಾರಂಭವಾಗುತ್ತದೆ.
ಈ ಡಕಾಯಿತರ ಗುಂಪನ್ನು ಎದುರಿಸಲು ರಕ್ಷಿತ್ ಪೊಲೀಸ್ ಆಗಿ ಬರುತ್ತಾರೆ. ನಂತರ ಕಳ್ಳರ ಗುಂಪನ್ನು ಅವರ ಶೈಲಿಯಲ್ಲಿ ಎದುರಿಸುವ ರೀತಿ ದೃಶ್ಯ ತೋರಿಸುತ್ತದೆ. ನಾಯಕಿ ಶಾನ್ವಿ ಶ್ರೀವಾಸ್ತವ್ ಕೂಡ ಎರಡು ದೃಶ್ಯಗಳಲ್ಲಿ ಬಂದು ಹೋಗುತ್ತಾರೆ.
ಚಂಬಲ್ ಕಣಿವೆಯ ಡಕಾಯಿತರ ಗುಂಪಿನಂತೆ ಕಾಣುವ ಕಳ್ಳರ ಜೊತೆ ರಕ್ಷಿತ್ ಸೆಣಸಾಡುವ ದೃಶ್ಯಗಳನ್ನು ಕಾಣಬಹುದು. ರಕ್ಷಿತ್ ರ ಕಚಗುಳಿ ಇಡುವ ಮಾತುಗಳಿಂದ ಟ್ರೈಲರ್ ಗಮನ ಸೆಳೆದಿದೆ.
ಬಿಡುಗಡೆಯಾದ ಒಂದೇ ದಿನದಲ್ಲಿ ಶುಕ್ರವಾರ, ನ.29 ರ ಹೊತ್ತಿಗೆ ಟ್ರೈಲರ್ 40 ಲಕ್ಷ ವೀಕ್ಷಣೆಯನ್ನು ದಾಟಿದೆ. 4.14 ನಿಮಿಷದ ಈ ಟ್ರೈಲರ್ ಪ್ರೇಕ್ಷಕನಿಗೆ ಮೆಚ್ಚುಗೆಯಾಗಿದ್ದು ಚಿತ್ರದ ಬಗ್ಗೆ ಭರವಸೆ ಹೆಚ್ಚಿಸಿದೆ.
ಪ್ರೇಕ್ಷಕರು ಸೇರಿದಂತೆ ಅನೇಕ ಸಿನಿ ತಾರೆಯರು ಚಿತ್ರದ ಟ್ರೈಲರ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಶ್ರೀಮನ್ನಾರಾಯಣ ಚಿತ್ರವು ಕನ್ನಡ, ತಮಿಳು, ತೆಲುಗು, ಹಿಂದಿ ಮತ್ತು ಮಲಯಾಳಂ ಸೇರಿ 5 ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಅವನೇ ಶ್ರೀಮನ್ನಾರಾಯಣ ಟ್ರೈಲರ್ ಈ 5 ಭಾಷೆಗಳಲ್ಲಿ ಬಿಡುಗಡೆಯಾಗಿದ್ದು ಎಲ್ಲ ವರ್ಗದ ಪ್ರೇಕ್ಷಕರನ್ನು ಸೆಳೆಯುತ್ತಿದೆ.
80 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಶ್ರೀಮನ್ನಾರಾಯಣ ಚಿತ್ರವನ್ನು ಸಚಿನ್ ರವಿ ನಿರ್ದೇಶನ ಮಾಡಿದ್ದಾರೆ. ಪುಷ್ಕರ ಮಲ್ಲಿಖಾರ್ಜುನಯ್ಯ ಮತ್ತು ಎ ಕೆ ಪ್ರಕಾಶ್ ಬಂಡವಾಳ ಹೂಡಿದ್ದಾರೆ. ಬಿ ಅಜನೀಶ್ ಲೋಕನಾಥ್ ಮತ್ತು ಚರಣ್ ರಾಜ್ ಸಂಗೀತ ನೀಡಿದ್ದಾರೆ.
ಅವನೇ ಶ್ರೀಮನ್ನಾರಾಯಣ ನವಿರು ಪ್ರೇಮ ಮತ್ತು ಹಾಸ್ಯ ಮಿಶ್ರಿ ಕಥೆಯಾಗಿದೆ. ಕರ್ಮ್ ಚಾವ್ಲಾ ಅವರ ಛಾಯಾಗ್ರಹಣವಿದೆ.
ಚಿತ್ರದಲ್ಲಿ ರಕ್ಷಿತ್ ಶೆಟ್ಟಿ ಮತ್ತು ಶಾನ್ವಿ ಶ್ರೀವಾಸ್ತವ್ ಒಳಗೊಂಡಂತೆ ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ, ಬಾಲಾಜಿ ಮನೋಹರ್ ತಾರಾಗಣದಲ್ಲಿದ್ದಾರೆ.
Discussion about this post