crossorigin="anonymous"> Xerox ನೋಟು ಕೊಟ್ಟು 25 ಲಕ್ಷ ರೂಪಾಯಿ ವಂಚನೆ : ಖದೀಮರ ಆಟಕ್ಕೆ ಚಿಕ್ಕಪೇಟೆ ವ್ಯಾಪಾರಿ ಕಂಗಾಲು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Xerox ನೋಟು ಕೊಟ್ಟು 25 ಲಕ್ಷ ರೂಪಾಯಿ ವಂಚನೆ : ಖದೀಮರ ಆಟಕ್ಕೆ ಚಿಕ್ಕಪೇಟೆ ವ್ಯಾಪಾರಿ ಕಂಗಾಲು

Radhakrishna Anegundi by Radhakrishna Anegundi
02-08-24, 1 : 50 pm
in ಟಾಪ್ ನ್ಯೂಸ್, ಕ್ರೈಮ್
prostitution-in-bengaluru-ccb-bust-prostitution-rackets-in-bengaluru-salons
Share on FacebookShare on TwitterWhatsAppTelegram

Xerox ನೋಟು ವಂಚಿಸುತ್ತಿರುವ ಎರಡನೇ ಪ್ರಕರಣ ಇದಾಗಿದೆ

ಕಣ್ಣಿಗೆ ಕಾಣುವಂತೆ ಅಸಲಿ ನೋಟುಗಳನ್ನು ಇಟ್ಟು ಕೆಳಗೆ Xerox ಜೆರಾಕ್ಸ್ ನೋಟುಗಳನ್ನು ಇಟ್ಟು ವಂಚಿಸಿರುವ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಚಿಕ್ಕಪೇಟೆಯ ಸಗಟು ಉಡುಪುಗಳ ವ್ಯಾಪಾರಿ  ಪ್ರೇಮ್ ಕುಮಾರ್ ಜೈನ್ ವಂಚನೆಗೆ ಒಳಗಾಗಿದ್ದು, ಈ ಸಂಬಂಧ ಕೇಂದ್ರ ಅಪರಾಧ ವಿಭಾಗ ಸಿಸಿಬಿಯಲ್ಲಿ ಜಯೇಶ್ ಮತ್ತು ಅಪರಿಚಿತ ವ್ಯಕ್ತಿಯ ವಿರುದ್ಧ ದೂರು ನೀಡಲಾಗಿದ್ದು, ಪೊಲೀಸರು FIR ದಾಖಲಿಸಿದ್ದಾರೆ.

ಚಿಕ್ಕಪೇಟೆಯ ಸಗಟು ಸಿದ್ದ ಉಡುಪುಗಳ ವ್ಯಾಪಾರಿ ಪ್ರೇಮ್ ಕುಮಾರ್ ಜೈನ್ ಹೊಸ ಬಟ್ಟೆ ಸ್ಟಾಕ್ ಖರೀದಿಸಲು 25 ಲಕ್ಷ ರೂಪಾಯಿ ಅಗತ್ಯವಿದೆ ಎಂದು ಸ್ನೇಹಿತ ಬಿಪಿನ್ ಅವರಲ್ಲಿ ಸಾಲ ಕೇಳಿದ್ದರು. ಈ ವೇಳೆ ದೆಹಲಿಯಲ್ಲಿ ಮಹಿ ಅನ್ನುವ ಸ್ನೇಹಿತನ ಬಳಿ ಹಣವಿದೆ. ದೆಹಲಿಯಲ್ಲಿ ಯಾರಾದ್ರೂ ಪರಿಚಯವಿದ್ರೆ ಅವರಿಂದ ಹಣ ತರಿಸಿಕೋ ಅಂದಿದ್ದಾರೆ.

ಇದನ್ನೂ ಓದಿ : ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಈ ವೇಳೆ ಪ್ರೇಮ್ ಕುಮಾರ್ ಗೆ ನೆನಪಾಗಿದ್ದು, ಕೆಲ ತಿಂಗಳ ಹಿಂದೆ ಪರಿಚಯವಾಗಿದ್ದ ಜಯೇಶ್ ಹೆಸರಿನ ವ್ಯಕ್ತಿ. ಹಿಂದೊಮ್ಮೆ ಕರೆ ಮಾಡಿದ್ದ ಈತ, ದೇಶದ ಯಾವುದೇ ಮೂಲೆಯಿಂದ ನಗದು ರೂಪದಲ್ಲಿ ಹಣ ತರಿಸುವುದಾದ್ರೆ ನನಗೆ ತಿಳಿಸಿ ಅಂದಿದ್ದ. ಅದರಂತೆ ಜಯೇಶ್ ಗೆ ಕರೆ ಮಾಡಿದ ಪ್ರೇಮ್ ಕುಮಾರ್ ಜೈನ್, ದೆಹಲಿಯಲ್ಲಿ ಮಹಿ ಅನ್ನುವವರಿಂದ 25 ಲಕ್ಷ ರೂಪಾಯಿ ಕಲೆಕ್ಟ್ ಮಾಡಿ ಬೆಂಗಳೂರಿಗೆ ತಲುಪಿಸಬೇಕು ಅಂದಿದ್ದಾರೆ,. ಜೊತೆಗೆ ಮಹಿ ಎಂಬವರ ಹೆಸರು ವಿಳಾಸ ಮತ್ತು ಮೊಬೈಲ್ ಸಂಖ್ಯೆಯನ್ನು ಜಯೇಶ್ ಗೆ ನೀಡಿದ್ದಾರೆ.

ಜೂನ್ 14 ರಂದು ಸಂಜೆ ಪ್ರೇಮ್ ಕುಮಾರ್ ಗೆ ಕರೆ ಮಾಡಿದ ಜಯೇಶ್, ನಗರ್ತಪೇಟೆಯ ಜೈನ್ ಟೆಂಪಲ್ ಬಳಿ ಬರುವಂತೆ ಹೇಳಿದ್ದಾನೆ. ಅಲ್ಲಿದ್ದ ವ್ಯಕ್ತಿಯೊಬ್ಬ ನಾನೇ ಜಯೇಶ್ ಎಂದು ಪರಿಚಯಿಸಿ ತನ್ನಲ್ಲಿದ್ದ ಬ್ಯಾಗ್ ತೆರೆದು ತೋರಿಸಿ 500 ಮುಖ ಬೆಲೆಯ ನೋಟುಗಳ 10 ಬಂಡಲ್ ತೋರಿಸಿ 25 ಲಕ್ಷವಿದೆ ಅಂದಿದ್ದಾನೆ. ಸಾರ್ವಜನಿಕ ಸ್ಥಳವಾಗಿದ್ದ ಕಾರಣ ಪ್ರೇಮ್ ಕುಮಾರ್ ಬ್ಯಾಗ್ ಅನ್ನು ಸಂಪೂರ್ಣವಾಗಿ ಪರಿಶೀಲನೆ ಮಾಡಿರಲಿಲ್ಲ,

ಇದೇ ವೇಳೆ ದೆಹಲಿಯ ಮಹಿ ಅವರಿಗೆ ಕರೆ ಮಾಡಿ 25 ಲಕ್ಷ ರೂಪಾಯಿ ತಲುಪಿದೆ ಎಂದು ತಿಳಿಸುವಂತೆ ಜಯೇಶ್  ಪ್ರೇಮ್ ಕುಮಾರ್ ಗೆ ಹೇಳಿದ್ದಾನೆ. ಅದರಂತೆ ಕರೆ ಮಾಡಿ ಹೇಳಿದ ಕೆಲವೇ ಕ್ಷಣದಲ್ಲಿ ಮಹಿ ಮನೆ ಬಾಗಿಲು ತಟ್ಟಿದ ವ್ಯಕ್ತಿ 25 ಲಕ್ಷ ರೂಪಾಯಿ ಸಂಗ್ರಹಿಸಿದ್ದಾನೆ.

Read this : ಪಂಕ್ಚರ್ ಅಂಗಡಿಯವರ ಪಾಪದ ಕೃತ್ಯ : ರಸ್ತೆಯಲ್ಲಿ ಮೊಳೆ ಹೆಕ್ಕಿದ ಟ್ರಾಫಿಕ್ ಪೊಲೀಸ್

ಆದರೆ ಮನೆಗೆ ಹೋಗಿ ಪ್ರೇಮ್ ಕುಮಾರ್ ಜೈನ್ ಬ್ಯಾಗ್ ತೆರೆದು ಪರಿಶೀಲನೆ ಮಾಡಿದ್ರೆ  ಒಂದೇ ಒಂದು 500 ರೂಪಾಯಿ ಮುಖ ಬೆಲೆಯ ಅಸಲಿ ನೋಟು ಇತ್ತು, ಉಳಿದ ಎಲ್ಲಾ ನೋಟುಗಳು ಝೆರಾಕ್ಸ್ ನೋಟುಗಳಾಗಿತ್ತು. ಮೋಸ ಹೋಗಿರುವುದು ಅರಿವಾಗುತ್ತಿದ್ದಂತೆ ಸಿಸಿಬಿಯಲ್ಲಿ ದೂರು ದಾಖಲಾಗಿದೆ.

ಆದರೆ ಈ ಪ್ರಕರಣವನ್ನು ಸೂಕ್ಷ್ಮವಾಗಿ ಗಮನಿಸಿದ್ರೆ ತೆರಿಗೆ ಕದ್ದು ಕಳ್ಳ ಮಾರ್ಗದಲ್ಲಿ ಹಣ ಸಾಗಿಸುವ ದಂಧೆ ಬೆಂಗಳೂರಿನಲ್ಲಿ ಸಕ್ರಿಯವಾಗಿರೋದು ಪಕ್ಕಾ. ದೆಹಲಿಯ ಸ್ನೇಹಿತನಿಂದ ಬ್ಯಾಂಕ್ ಹಣವನ್ನು ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡುತ್ತಿದ್ರೆ ಈ ಸಮಸ್ಯೆಯೇ ಹುಟ್ಟುತ್ತಿರಲಿಲ್ಲ. ಕಾಸು ಬ್ಯಾಂಕ್ ಖಾತೆಗೆ ಬಂದ್ರೆ ತೆರಿಗೆ ಕಟ್ಟಬೇಕಲ್ವ, ಹೀಗಾಗಿಯೇ ಈ ವ್ಯಾಪಾರಿ ಅಡ್ಡ ದಾರಿ ಹಿಡಿದ್ದ ಅನ್ಸುತ್ತೆ. ಅಡ್ಡ ದಾರಿಯಲ್ಲಿ ಹೋದ ಇದೀಗ ಕೈ ಸುಟ್ಟು ಕೊಂಡಿದ್ದಾನೆ.

Police station
Police station
Tags: FEATURED
ShareTweetSendShare

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್