crossorigin="anonymous"> ಡಾಕ್ಟರೇಟ್ ಗೌರವ ಪಡೆಯಲು ಹೋಗಿ 90 ಲಕ್ಷ ಕಳೆದುಕೊಂಡ ಬೆಂಗಳೂರಿನ ಟೆಕ್ಕಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಡಾಕ್ಟರೇಟ್ ಗೌರವ ಪಡೆಯಲು ಹೋಗಿ 90 ಲಕ್ಷ ಕಳೆದುಕೊಂಡ ಬೆಂಗಳೂರಿನ ಟೆಕ್ಕಿ

Radhakrishna Anegundi by Radhakrishna Anegundi
19-04-21, 6 : 03 pm
in ಕ್ರೈಮ್
phd1
Share on FacebookShare on TwitterWhatsAppTelegram

ಬೆಂಗಳೂರು : ತಾನು ಪಡೆದಿದ್ದ Phd ಪದವಿಯನ್ನು ಕಾನೂನು ಬದ್ಧಗೊಳಿಸಲು ಹೋದ ಟೆಕ್ಕಿಯೊಬ್ಬ 90 ಲಕ್ಷ ರೂಪಾಯಿ ಕಳೆದುಕೊಂಡ ಘಟನೆ ಬೆಂಗಳೂರಿನ ಟಿ ದಾಸರಹಳ್ಳಿಯಲ್ಲಿ ನಡೆದಿದೆ. ಈ ಸಂಬಂಧ ನಾರ್ತ್ ಸಿಇಎನ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಎಪ್ರಿಲ್ 8 ರಂದು ಪ್ರಕರಣ ಕೂಡಾ ದಾಖಲಾಗಿದೆ.

ಏರೋಸ್ಪೇಸ್ ಡಿಸೈನ್ ವಿಷಯದಲ್ಲಿ ಬಿಇ ಪದವಿ ಪಡೆದಿದ್ದ ಯುವಕನೊಬ್ಬ 2014ರಲ್ಲಿ ಉದ್ಯೋಗ ಸಲುವಾಗಿ ಸಂಸ್ಥೆಯೊಂದನ್ನು ಸೇರಿಕೊಂಡಿದ್ದರು. ಈ ವೇಳೆ ಅಂದೇ ಸಂಸ್ಥೆ ಅವರನ್ನು ಜರ್ಮನಿಗೆ ವರ್ಗಾವಣೆ ಮಾಡಿತ್ತು.

ಹೀಗೆ ಜರ್ಮನಿಗೆ ಹೋದ ಅವರು ತನ್ನ ಫ್ರೀ ಟೈಮ್ ನಲ್ಲಿ ವಿದ್ಯಾಭ್ಯಾಸ ಮುಂದುವರಿಸಲು ಬಯಸಿದರು. ಈ ಸಲುವಾಗಿ ದೂರ ಶಿಕ್ಷಣದ ಅವಕಾಶಗಳನ್ನು ಹುಡುಕಾಡುತ್ತಿದ್ದರು. ಈ ವೇಳೆ ಮಸ್ಟ್ ಹೆಸರಿನ ವಿವಿ ದೂರ ಶಿಕ್ಷಣ ವ್ಯವಸ್ಥೆ ಮೂಲಕ Phd ಅಧ್ಯಯನಕ್ಕೆ ಅವಕಾಶ ನೀಡುವುದಾಗಿ ಹೇಳಿತು. ಅದರಂತೆ ತರಗತಿಗೆ ಸೇರಿದ್ದ ಅವರು 2015ರಲ್ಲಿ ಕೋರ್ಸ್ ಮುಗಿಸಿದ್ದರು. ಇದಾದ ಎರಡು ವರ್ಷದ ಬಳಿಕ ಮತ್ತೆ ಬೆಂಗಳೂರಿಗೆ ಮರಳಿದ್ದಾರೆ.

ಬೆಂಗಳೂರಿಗೆ ಬಂದ ಬಳಿಕ 2018ರಲ್ಲಿ ಕರೆ ಮಾಡಿದ್ದ ಅಪರಿಚಿತನೊಬ್ಬ, ನಿಮ್ಮ Phd ಮಾನ್ಯತೆ ಪಡೆದಿಲ್ಲ, ಅದೊಂದು ಅಮಾನ್ಯ ವಿವಿಯಿಂದ ಪಡೆದ Phd ಯಾಗಿದೆ ಅಂದಿದ್ದಾರೆ. ಆದರೆ ಈ ಬಗ್ಗೆ ಅವರು ತಲೆ ಕೆಡಿಸಿಕೊಂಡಿರಲಿಲ್ಲ.

ಮತ್ತೆ 2019ರ ನವೆಂಬರ್ 19ರಂದು ದೆಹಲಿಯಲ್ಲಿರುವ ಅಮೆರಿಕಾದ ರಾಯಭಾರಿ ಕಚೇರಿಯಿಂದ ಕರೆ ಮಾಡುತ್ತಿರುವುದಾಗಿ ಹೇಳಿದ್ದ ವ್ಯಕ್ತಿಯೊಬ್ಬ ನಿಮ್ಮ Phd ಅಮಾನ್ಯವಾಗಿರುವ ಕಾರಣ ಅದನ್ನು ರದ್ದುಗೊಳಿಸಬೇಕು, ಇಲ್ಲವಾದರೆ ಲೀಗಲೈಸ್ ಮಾಡಿಕೊಳ್ಳಬೇಕು. ಎರಡರಲ್ಲಿ ಒಂದನ್ನು ಮಾಡಿಸದಿದ್ರೆ ಜೈಲು ಸೇರಬೇಕಾಗುತ್ತದೆ ಎಂದು ಬೆದರಿಸಿದ್ದಾನೆ. ಹೀಗಾಗಿ ಹೀಗಾಗಿ ಸುಮ್ನೆ ಅಪಾಯಬೇಡ ಎಂದು Phd ರದ್ದುಗೊಳಿಸುವ ಸಲುವಾಗಿ 2 ಸಾವಿರ ಡಾಲರ್ ಮೊತ್ತವನ್ನು ಅಪರಿಚಿತನಿಗೆ ಪಾವತಿಸಿದ್ದಾರೆ.

ಇದಾದ ಕೆಲ ದಿನಗಳ ಕರೆ ಮಾಡಿದ್ದ ಮತ್ತೊಬ್ಬ ವ್ಯಕ್ತಿ ನಿಮ್ಮ Phd ಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ. ಆದರೆ Phd ಯನ್ನು ಮತ್ತೊಂದು ವಿವಿಗೆ ವರ್ಗಾಯಿಸಿ ಮಾನ್ಯಗೊಳಿಸಲು ಸಾಧ್ಯವಿದೆ. ಇದಕ್ಕಾಗಿ ನಾನು ನಿಮಗೆ ಸಹಕರಿಸುತ್ತೇನೆ ಅಂದಿದ್ದಾನೆ. ಇದಕ್ಕೆ ಒಪ್ಪಿದ ಬಳಿಕ ಕ್ಯಾಲಿಫೋರ್ನಿಯಾ ಸ್ಟೇಟ್ ಯೂನಿವರ್ಸಿಟಿಯಿಂದ Phd ಮಾನ್ಯಗೊಳಿಸುವ ಪತ್ರವೂ ಬಂದಿದೆ. ( ಬಳಿಕ ಗೊತ್ತಾಗಿದ್ದು ಅದೊಂದು ಫೇಕ್ ಸಂಸ್ಥೆ ಎಂದು)
ಇದಾದ ಬಳಿಕ ವಿದೇಶದಿಂದ ಕರೆ ಮಾಡುತ್ತಿದ್ದ ಮಂದಿ ಈ ಟೆಕ್ಕಿ ಕಡೆಯಿಂದ ಹಂತ ಹಂತವಾಗಿ ಕಾಸು ವಸೂಲಿ ಮಾಡಿದ್ದಾರೆ. ಏನಿಲ್ಲ ಅಂದರೂ ಅವರು ಪಡೆದುಕೊಂಡಿದ್ದು 1,20,000 ಡಾಲರ್ ಅಂದ್ರೆ ಭಾರತದ ರೂಪಾಯಿ ಲೆಕ್ಕಕ್ಕೆ ಸರಿ ಸುಮಾರು 90 ಲಕ್ಷ ರೂಪಾಯಿ.

ಇನ್ನೇನು ಕಳೆದುಕೊಂಡ ಮೊತ್ತ ಕೋಟಿಯನ್ನು ತಲುಪಬೇಕು ಅನ್ನುವ ಹೊತ್ತಿಗೆ ಏನೋ ಮೋಸ ನಡೆಯುತ್ತಿದೆ ಅನ್ನುವ ಅನುಮಾನ ಬಂದಿದೆ. ಹೀಗಾಗಿ ಗೆಳೆಯನೊಬ್ಬನ ಸಹಾಯದಿಂದ ಮೋಸ ಹೋದವರು ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದ್ದಾರೆ.

Tags: ಕ್ರೈಮ್
Share1TweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್