crossorigin="anonymous"> bengaluru roads : ಸಿಎಂ ಮನೆ ಮುಂದೆ ರಸ್ತೆಗೆ 29 ಕೋಟಿ ವೆಚ್ಚದಲ್ಲಿ ವೈಟ್ ಟಾಪಿಂಗ್ :  ಇದು ಕಾಮನ್ ಮ್ಯಾನ್ ಸಿಎಂ ಕಾರ್ಯವೈಖರಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

bengaluru roads : ಸಿಎಂ ಮನೆ ಮುಂದೆ ರಸ್ತೆಗೆ 29 ಕೋಟಿ ವೆಚ್ಚದಲ್ಲಿ ವೈಟ್ ಟಾಪಿಂಗ್ :  ಇದು ಕಾಮನ್ ಮ್ಯಾನ್ ಸಿಎಂ ಕಾರ್ಯವೈಖರಿ

Radhakrishna Anegundi by Radhakrishna Anegundi
16-07-22, 5 : 36 pm
in ರಾಜ್ಯ
bengaluru-roads-basavaraj bommai house road rt nagara bbmp plan to white topping
Share on FacebookShare on TwitterWhatsAppTelegram

ಬೆಂಗಳೂರಿನ ರಸ್ತೆಗಳು ಗುಂಡಿ ( bengaluru roads ) ಬಿದ್ದು ಎಕ್ಕುಟ್ಟು ಹೋಗಿದೆ. ಅದೆಷ್ಟೋ ಜನರು ಇದೇ ಗುಂಡಿಯ ಕಾರಣದಿಂದ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆ ಗುಂಡಿ ಮುಚ್ಚುವ ಬದಲು ತಮ್ಮ ಮನೆ ಮುಂದೆ ರಸ್ತೆಗೆ ವೈಟ್ ಟಾಪಿಂಗ್ ಮಾಡಿಸಲು ಸಿಎಂ ಬಸವರಾಜ್ ಬೊಮ್ಮಾಯಿ ಮುಂದಾಗಿದ್ದಾರೆ

ಬೆಂಗಳೂರು : ರಾಜಧಾನಿಯ ರಸ್ತೆಗಳು ಎಲ್ಲಿಂದ ಎಂದು ಹುಡುಕಬೇಕಾಗಿದೆ. ( bengaluru roads ) ಬಿಬಿಎಂಪಿ ಮಾಡಿದ ಕಳಪೆ ಕಾಮಗಾರಿ ಕಾರಣದಿಂದ ಗುಂಡಿಗಳು ಬಿದ್ದು, ವಾಹನ ಸವಾರರು ಅದರಲ್ಲೂ ಬೈಕ್ ಸವಾರರು ಜೀವ ಕೈಯಲ್ಲಿ ಹಿಡಿದುಕೊಂಡೇ ಡ್ರೈವ್ ಮಾಡಬೇಕಾಗಿದೆ. ಗುಂಡಿ ಮುಚ್ಚುವ ವಿಚಾರದಲ್ಲಿ ಸರ್ಕಾರ ಕಥೆ ಹೇಳುತ್ತಿದೆ ಬಿಟ್ರೆ, ಅದಕ್ಕೊಂದು ಶಾಶ್ವತ ಪರಿಹಾರದ ಬಗ್ಗೆ ಈವರೆಗೆ ಬಂದ ಅದ್ಯಾವ ಸರ್ಕಾರಗಳು ತಲೆ ಕೆಡಿಸಿಕೊಂಡಿಲ್ಲ. ಇದಕ್ಕೆ ಬೊಮ್ಮಾಯಿ ಸರ್ಕಾರವೂ ಹೊರತಲ್ಲ.

ಈ ವಿಷಯದಲ್ಲಿ ಒಂದು ಹೆಜ್ಜೆ ಮುಂದೆ ಹೋಗಿರುವ ಸಿಎಂ ಬಸವರಾಜ್ ಬೊಮ್ಮಾಯಿ,  ಬೆಂಗಳೂರಿನ ರಸ್ತೆಗಳ ಗುಂಡಿ ಮುಚ್ಚಿಸುವ ಬದಲು ತಮ್ಮ ಮನೆ ಮುಂದಿನ ರಸ್ತೆಗೆ 29 ಕೋಟಿ ರೂಪಾಯಿ ವೆಚ್ಚದಲ್ಲಿ ವೈಟ್ ಟಾಪಿಂಗ್ ಮಾಡಿಸಲು ಮುಂದಾಗಿದ್ದಾರೆ. ಈ ಸಂಬಂಧ ಬಿಬಿಎಂಪಿ  ಟೆಂಡರ್ ಕೂಡಾ ಕರೆದಿದ್ದು, ಮುಂದಿನ ದಿನಗಳಲ್ಲಿ ಯಾವುದೇ ಸಮಸ್ಯೆ ಬಾರದಂತೆ ಶಾಶ್ವತವಾಗಿ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಅಧಿಕಾರಿಗಳು ಖಾಸಗಿ ಟಿವಿ ವಾಹಿನಿಯೊಂದಕ್ಕೆ ಸಮರ್ಥನೆ ಬೇರೆ ಕೊಟ್ಟಿದ್ದಾರೆ.

ಇನ್ನು ಸಿಎಂ ಮನೆ ಇರುವ 4.6 ಕಿಮೀ ಉದ್ಧದ ಈ ತರಳಬಾಳು ರಸ್ತೆಗೆ ಬೊಮ್ಮಾಯಿಯವರು ಅಧಿಕಾರ ಸ್ವೀಕರಿಸಿದ ಬಳಿ ಎರಡೆರಡು ಬಾರಿ ಕಾಮಗಾರಿ ಕೈಗಳ್ಳಲಾಗಿದೆ. ಗೃಹ ಸಚಿವರಾಗಿದ್ದ ಸಂದರ್ಭದಲ್ಲಿ ಇದೆಷ್ಟು ಸಲ ಬಿಬಿಎಂಪಿ ಡಾಂಬರು ಸುರಿದಿದೆಯೋ ಗೊತ್ತಿಲ್ಲ.

ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿ ಆಯ್ಕೆಯಾಗುತ್ತಿದ್ದಂತೆ ರಾತ್ರೋರಾತ್ರಿ ಈ ರಸ್ತೆಯನ್ನು ಅಭಿವೃದ್ಧಿಗೊಳಿಸಲಾಗಿತ್ತು. ಟ್ರಾಫಿಕ್ ಮಾರ್ಕಿಂಗ್, ಫುಟ್ ಪಾತ್ ಅಭಿವೃದ್ಧಿ ನಡೆಸಲಾಗಿತ್ತು. ಮೂರು ತಿಂಗಳ ಹಿಂದೆ ಮತ್ತೆ ಡಾಂಬರೀಕರಣ ನಡೆದಿತ್ತು.  ಹಾಗೇ ನೋಡಿದರೆ ಈ ತರಳಬಾಳು ರಸ್ತೆ ಚೆನ್ನಾಗಿದೆ. ಒಂದೇ ಒಂದು ಗುಂಡಿಯೂ ಇಲ್ಲ ಹಾಗಿದ್ದ ಮೇಲೆ 29 ಕೋಟಿ ರೂಪಾಯಿ ಸುರಿಯುವ ಅಗತ್ಯವೇನಿದೆ, ಮುಖ್ಯಮಂತ್ರಿಗಳೇ ಉತ್ತರಿಸಬೇಕು.

ಗಂಡ ಬೇಕು ಗಂಡ : ಒಬ್ಬ ಗಂಡನಿಗಾಗಿ ಇಬ್ಬರು ಹೆಣ್ಮಕ್ಕಳ ಕಿತ್ತಾಟ

ವಂಚಕನೊಬ್ಬನ ಮಾತು ನಂಬಿ ಗಂಡನಿಗೆ ಡಿವೋರ್ಸ್ ಕೊಟ್ಟ ಮಹಿಳೆಯೊಬ್ಬಳು ಇದೀಗ ಮೋಸವಾಯ್ತು ಎಂದು ಪ್ರತಿಭಟನೆ ನಡೆಸಿದ್ದಾಳೆ. ( marriage fraud ) ಈ ಘಟನೆ ನಡೆದಿರುವುದು ಚಿಕ್ಕಬಳ್ಳಾಪುರದ ಗೌರಿ ಬಿದನೂರಿನಲ್ಲಿ.

ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪವಿತ್ರ ತಾಳಿ ಕಟ್ಟಿದ ಗಂಡನೊಂದಿಗೆ ಚೆನ್ನಾಗಿಯೇ ಸಂಸಾರ ನಡೆಸುತ್ತಿದ್ದರು. ಈ ವೇಳೆ ಆಸ್ಪತ್ರೆಯಲ್ಲೇ ಕೆಲಸ ನಿರ್ವಹಿಸುತ್ತಿರುವ ಸಾದೇನಹಳ್ಳಿಯ ಮಂಜುನಾಥ್ ಅನ್ನುವವನ ಪರಿಚಯವಾಗಿದೆ. ಗಂಡನಿಗಿಂತ ಚೆನ್ನಾಗಿ ನೋಡಿಕೊಳ್ಳುತ್ತೇನೆ ( marriage fraud ) ಎಂದು ಪವಿತ್ರಾಳ ತಲೆ ಕೆಡಿಸಿದ ಮಂಜುನಾಥ ಡಿವೋರ್ಸ್ ಕೊಡಿಸಿದ್ದ.

ಬಳಿಕ ಲಿವ್ ಇನ್ ರಿಲೇಷನ್ ಶಿಪ್ ನಲ್ಲಿದ್ದ ಪವಿತ್ರಾ ಹಾಗೂ ಮಂಜುನಾಥ 2021ರ ಜೂನ್ ತಿಂಗಳಿನಲ್ಲಿ ಮದುವೆಯಾಗಿದ್ದರು. ಒಂದಿಷ್ಟು ಸಂಸಾರ ಚೆನ್ನಾಗಿಯೇ ನಡೆದಿತ್ತು. ಆಗ ಗೊತ್ತಾಗಿದ್ದು ಮಂಜುನಾಥ ಸ್ವಜಾತಿಯ ಹುಡುಗಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಈ ವಿಷಯ ಗೊತ್ತಾದ ಪವಿತ್ರಾ ಗಲಾಟೆ ಮಾಡಿದ್ದಾಳೆ. ಈ ವೇಳೆ ಇಬ್ಬರನ್ನೂ ಚೆನ್ನಾಗಿ ನೋಡಿಕೊಳ್ಳುತ್ತೇನೆ ಎಂದು ಭರವಸೆ ಕೊಟ್ಟ ಮಂಜುನಾಥ ಆಕೆಯನ್ನೂ ಮದುವೆಯಾಗಿದ್ದಾನೆ.

ಸ್ವಲ್ಪ ದಿನ ಎಲ್ಲವೂ ಚೆನ್ನಾಗಿತ್ತು. ಬಳಿಕ ಆತ ಮನೆಗೆ ಬರುವುದನ್ನೇ ನಿಲ್ಲಿಸಿದ್ದಾನೆ. ಹೀಗಾಗಿ ಮೋಸ ಹೋದ ಪವಿತ್ರಾ ಮಂಜುನಾಥನ ಮನೆ ಮುಂದೆ ಧರಣಿ ಕೂತಿದ್ದಾರೆ. ಆದರೆ ಈ ಗಲಾಟೆಯ ನಡುವೆ ಮಂಜುನಾಥ ಎರಡನೇ ಹೆಂಡತಿ, ನನಗೂ ನನ್ನ ಗಂಡ ಬೇಕು, ನಾನು ಬಿಟ್ಟುಕೊಡಲಾರೆ ಅಂದಿದ್ದಾಳೆ.

ಆದರೆ ಮಂಜುನಾಥನದ್ದು ಬೇರೆಯದ್ಧೇ ಕಥೆ. ನಾನು ಮತ್ತು ಪ್ರೀತಿಸಿದ್ದು ನಿಜ, ಆದರೆ ನನಗೆ ಬ್ಲ್ಯಾಕ್ ಮೇಲ್ ಮಾಡಿ ಬಲವಂತವಾಗಿ ಪವಿತ್ರಾ ಕಡೆಯವರು ರಿಜಿಸ್ಟರ್ ಮದುವೆ ಮಾಡಿಸಿದ್ದಾರೆ. ಈ ವಿಷಯದಲ್ಲಿ ನನ್ನದೇನೂ ತಪ್ಪಿಲ್ಲ. ಹೀಗಾಗಿ ಕಾನೂನು ಪ್ರಕಾರ ಏನಾಗಬೇಕೋ ಅದು ಅಗಲಿ ಅಂದಿದ್ದಾನೆ.

Tags: FEATURED
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್