crossorigin="anonymous"> Zomato ದ ಫುಡ್ ಆರ್ಡರ್ ಕ್ಯಾನ್ಸಲ್ ಮಾಡಿದ್ರೆ ಡೆಲಿವರಿ ಬಾಯ್ ಹೊಡೆದೇ ಬಿಟ್ನಲ್ಲ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Zomato ದ ಫುಡ್ ಆರ್ಡರ್ ಕ್ಯಾನ್ಸಲ್ ಮಾಡಿದ್ರೆ ಡೆಲಿವರಿ ಬಾಯ್ ಹೊಡೆದೇ ಬಿಟ್ನಲ್ಲ

Radhakrishna Anegundi by Radhakrishna Anegundi
10-03-21, 9 : 26 pm
in ಕ್ರೈಮ್
zomato
Share on FacebookShare on TwitterWhatsAppTelegram

ಬೆಂಗಳೂರು : ಆನ್ ಲೈನ್ ನಲ್ಲಿ ಆಹಾರ ವ್ಯವಸ್ಥೆ ಅನ್ನುವುದು ಅವ್ಯವಸ್ಥೆಯ ಆಗರವಾಗಿದೆ.

ಕಾಸಿನಾಸೆಗೆ ಬಿದ್ದಿರುವ ಆನ್ ಲೈನ್ ಫುಡ್ ಡೆಲಿವರಿ ಸಂಸ್ಥೆಗಳು ಸರಿಯಾಗಿ ವ್ಯವಸ್ಥೆ ಮಾಡಿಕೊಳ್ಳದೆ, ಅವೈಜ್ಞಾನಿಕ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ  ಅನೇಕರಿಗೆ ಸಮಸ್ಯೆಗಳನ್ನು ತಂದೊಡ್ಡುತ್ತಿದೆ.

ಹೀಗೆ ಬೆಂಗಳೂರಿನಲ್ಲಿ Zomato ಸಂಸ್ಥೆಯಲ್ಲಿ ಊಟ ಆರ್ಡರ್ ಮಾಡಿದ ಕರ್ಮಕ್ಕೆ ಮಹಿಳೆಯೊಬ್ಬರು ಇದೀಗ ಆಸ್ಪತ್ರೆ ಸೇರುವಂತಾಗಿದೆ.

ಘಟನೆಯ ವಿವರ

ಎಲೆಕ್ಟ್ರಾನಿಕ್ ಸಿಟಿಯಲ್ಲಿ ವಾಸವಿರುವ ಹಿತೇಶ್ ಚಂದ್ರಾಣಿ ಅನ್ನುವವರು Zomato ಮೂಲಕ ಮಧ್ಯಾಹ್ನದ ಊಟ ಆರ್ಡರ್ ಮಾಡಿದ್ದಾರೆ.

3.30ಕ್ಕೆ ಊಟ ಆರ್ಡರ್ ಮಾಡಿದ್ರೆ, ಅರ್ಧ ಗಂಟೆಯಲ್ಲಿ ಫುಡ್ ನಿಮ್ಮ ಮನೆ ಬಾಗಿಲಿಗೆ ಎಂದು ಸಂಸ್ಥೆ ಭರವಸೆ ಕೊಟ್ಟಿತ್ತು. ಆದರೆ ಸಂಸ್ಥೆ ಕೊಟ್ಟ ಭರವಸೆಗೆ ಬದ್ಧವಾಗಿರಲಿಲ್ಲ.

ಹೀಗಾಗಿ ಬೇಸರಗೊಂಡ ಹಿತೇಶ್ ಚಂದ್ರಾಣಿ ಫುಡ್ ಆರ್ಡರ್ ಕ್ಯಾನ್ಸಲ್ ಮಾಡಿದ್ದಾರೆ.

ಆದರೆ 4.30ರ ಹೊತ್ತಿಗೆ ಮನೆಗೆ ಬಂದ Zomato ಡೆಲಿವರಿ ಬಾಯ್ ಕಾಮರಾಜ್, ಫುಡ್ ತೆಗೆದುಕೊಳ್ಳುವಂತೆ ಹೇಳಿದ್ದಾನೆ.

ನಾನು ಆರ್ಡರ್ ಕ್ಯಾನ್ಸಲ್ ಮಾಡಿದ್ದೇನೆ ಅಂದ್ರೆ ಕೇಳಲಿಲ್ಲ, ಬದಲಿಗೆ ರೊಚ್ಚಿಗೆದ್ದು ಮನೆಗೆ ನುಗ್ಗಿ ಟೇಬಲ್ ಮೇಲೆ ಪಾರ್ಸೆಲ್ ಇಟ್ಟು, ನಾನು ನಿಮ್ಮ ಮನೆಗೆ ಗುಲಾಮನಲ್ಲ ಅಂದಿದ್ದಾನೆ.

ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿಯೂ ನಡೆದಿದೆ. ಬಳಿಕ ಚಂದ್ರಾಣಿ ಮುಖಕ್ಕೆ ಬಲವಾಗಿ ಹೊಡೆದ  ಕಾಮ್ ರಾಜ್ ಅಲ್ಲಿಂದ ಪರಾರಿಯಾಗಿದ್ದಾನೆ.

ಹಲ್ಲೆಗೊಳಗಾದ ಮಹಿಳೆ ಸಾಮಾಜಿಕ ಜಾಲತಾಣ ಖಾತೆಯಲ್ಲಿ ತಮಗಾದ ಅನ್ಯಾಯ ಕುರಿತಂತೆ ಬರೆದುಕೊಂಡಿದ್ದಾರೆ. ಜೊತೆಗೆ ರಕ್ತ ಸೋರುತ್ತಿರುವ ವಿಡಿಯೋ ಕೂಡಾ ಪೋಸ್ಟ್ ಮಾಡಿದ್ದಾರೆ.

zomato 01

ವಿಷಯ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸರು ಡೆಲಿವರಿ ಬಾಯ್ ನನ್ನು ಬಂಧಿಸಿದ್ದಾರೆ,

ಇನ್ನು ಘಟನೆ ಕುರಿತಂತೆ ಕ್ಷಮೆ ಕೇಳಿರುವ Zomato ಸಂಸ್ಥೆ ಮಹಿಳೆಯ ವೈದ್ಯಕೀಯ ವೆಚ್ಚ ಭರಿಸುವುದಾಗಿ ಹೇಳಿದೆ.

ಮತ್ತೊಂದು ಕಡೆ ಫುಡ್ ಆರ್ಡರ್ ಮಾಡಿದ ಕಾರಣದಿಂದ ಡೆಲಿವರಿ ಹುಡುಗರಿಗೆ ಸಮಸ್ಯೆಯಾಗುತ್ತದೆ. ಹೀಗಾಗಿ ಕೋಪದಿಂದ ಹೊಡೆದೆ ಎಂದು ಆರೋಪಿ ಒಪ್ಪಿಕೊಂಡಿದ್ದಾನೆ.

ಈ ಸುದ್ದಿಯನ್ನು ಗಮನಿಸಬೇಕಾದ ಅಂಶ ಅಂದ್ರೆ, ಡೆಲಿವರಿ ಹುಡುಗರು ಅನುಭವಿಸುವ ಒತ್ತಡ. ಫುಡ್ ಆರ್ಡರ್ ಬಂದ ತಕ್ಷಣ ಸಂಬಂಧಪಟ್ಟ ಹೊಟೇಲ್ ಗೆ ಹೋದ್ರೆ, ಅಲ್ಲಿ ಕಾಯಬೇಕಾದ ಅನಿವಾರ್ಯತೆ. ಜೊತೆಗೆ ಕೆಲ ಹೊಟೇಲ್ ಸಿಬ್ಬಂದಿಯೂ ಡೆಲಿವರಿ ಹುಡುಗನ್ನು ತುಂಬಾ ಕೀಳಾಗಿ ನೋಡುತ್ತಾರೆ ಕೂಡಾ.

APP ಗಳಲ್ಲಿ ಈ ಸಮಸ್ಯೆ ಅರಿವಿಲ್ಲದೆ ಫುಡ್ ಡೆಲಿವರಿಗೆ ಡೆಡ್ ಲೈನ್ ವಿಧಿಸಿರುತ್ತದೆ. ಫುಡ್ ತೆಗೆದುಕೊಂಡು ಹೊರಟ್ರೆ ಟ್ರಾಫಿಕ್ ಕಾಟ. ಅಷ್ಟು ಹೊತ್ತಿಗೆ ಡೆಡ್ ಲೈನ್ ಮುಗಿದಿರುತ್ತದೆ.

ಫುಡ್ ಆರ್ಡರ್ ಕ್ಯಾನ್ಸಲ್ ಆದ್ರೆ, ಕೈಯಿಂದ ಕಾಸು ಕೊಡಬೇಕಾದ ದುಸ್ಥಿತಿ ಡೆಲಿವರಿ ಹುಡುಗರದ್ದು.

View this post on Instagram

A post shared by HITESHA | Beauty Influencer (@hiteshachandranee)

ShareTweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್