ಬೆಂಗಳೂರು : ಈ ಸಾಲಿನ ಪದ್ಮ ಪ್ರಶಸ್ತಿಗಳನ್ನು ಕೇಂದ್ರ ಸರ್ಕಾರ ಪ್ರಕಟಿಸಿದ್ದು, ಒಟ್ಟು 119 ಮಂದಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ವೈದ್ಯಕೀಯ ಕ್ಷೇತ್ರದ ಸಾಧನೆಗಾಗಿ ಡಾ. ಬಿಎಂ ಹೆಗ್ಡೆಯವರಿಗೆ ಪದ್ಮ ವಿಭೂಷಣ ಹಾಗೂ, ಸಾಹಿತ್ಯ ಸೇವೆಗಾಗಿ ಚಂದ್ರಶೇಖರ್ ಕಂಬಾರ ಅವರಿಗೆ ಪದ್ಮಭೂಷಣ ಪ್ರಶಸ್ತಿ ಲಭಿಸಿದೆ.

ಇನ್ನು ರಾಜ್ಯದ ಮೂವರು ಪದ್ಮಶ್ರೀ ಪ್ರಶಸ್ತಿ ಗೌರವಕ್ಕೆ ಪಾತ್ರರಾಗಿದ್ದು, ಕಲಾ ಕ್ಷೇತ್ರದ ಸಾಧನೆಗಾಗಿ ಮಂಜಮ್ಮ ಜೋಗತಿ ಕ್ರೀಡಾ ಕ್ಷೇತ್ರದ ಸಾಧನೆಗಾಗಿ ಕೆ ವೈ ವೆಂಕಟೇಶ್ ಮತ್ತು ಶಿಕ್ಷಣ ಕ್ಷೇತ್ರದ ಸಾಧನೆಗಾಗಿ ರಂಗಸ್ವಾಮಿ ಲಕ್ಷ್ಮಿನಾರಾಯಣ ಪ್ರಶಸ್ತಿ ಪಡೆದಿದ್ದಾರೆ.

ಇನ್ನುಳಿದಂತೆ ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆಯವರಿಗೆ ಪದ್ಮ ವಿಭೂಷಣ, ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ಮರಣೋತ್ತರ ಪದ್ಮ ವಿಭೂಷಣ ಗೌರವ ಸಿಕ್ಕಿದೆ.


ಈ ಬಾರಿ 7 ಮಂದಿಗೆ ಪದ್ಮ ವಿಭೂಷಣ, 10 ಮಂದಿಗೆ ಪದ್ಮ ವಿಭೂಷಣ ಮತ್ತು 102 ಮಂದಿಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಗುತ್ತಿದೆ.
Discussion about this post