crossorigin="anonymous"> ರಾಮಕೃಷ್ಣ ಹೆಗಡೆಯವರು ಪ್ರಾರಂಭಿಸಿದ ಸಂಪ್ರದಾಯಕ್ಕೆ ಮರು ಜೀವ ಕೊಟ್ಟ ಬಸವರಾಜ್ ಬೊಮ್ಮಾಯಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ರಾಮಕೃಷ್ಣ ಹೆಗಡೆಯವರು ಪ್ರಾರಂಭಿಸಿದ ಸಂಪ್ರದಾಯಕ್ಕೆ ಮರು ಜೀವ ಕೊಟ್ಟ ಬಸವರಾಜ್ ಬೊಮ್ಮಾಯಿ

Radhakrishna Anegundi by Radhakrishna Anegundi
10-08-21, 10 : 49 pm
in ಟಾಪ್ ನ್ಯೂಸ್
bommai hegde
Share on FacebookShare on TwitterWhatsAppTelegram

ಬೆಂಗಳೂರು : ಅದು 1983ನೇ ಇಸವಿ, ರಾಮಕೃಷ್ಣ ಹೆಗಡೆಯವರು ಮುಖ್ಯಮಂತ್ರಿಯಾಗಿದ್ದರು. ಹಿಂದಿನ ಮುಖ್ಯಮಂತ್ರಿ ಗುಂಡೂರಾವ್ ಅವರಿಗಿಂತ ಡಿಫರೆಂಟ್ ಆಗಿರುವ ಆಡಳಿತ ಕೊಡಬೇಕಾಗಿತ್ತು. ಈ ವೇಳೆ ಹೆಗಡೆಯವರು ಕೈಗೊಂಡ ನಿರ್ಧಾರ ಅಂದ್ರೆ ಅದು ಸರಳತೆ.

ಗುಂಡೂರಾವ್ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಹೋದ ಕಡೆ ಬಂದ ಕಡೆ ಸನ್ಮಾನ ಸ್ವೀಕರಿಸುತ್ತಿದ್ದರು. ಬೆಳ್ಳಿ ಕಿರೀಟ ಬೆಳ್ಳಿ ಗದೆ ಸ್ವೀಕರಿಸುತ್ತಿದ್ದರು. ಮರು ದಿನ ಪತ್ರಿಕೆಗಳಲ್ಲಿ ಇದೇ ಫೋಟೋ ದೊಡ್ಡದಾಗಿ ಬರುತ್ತಿತ್ತು. ಇದರಿಂದ ಜನರಲ್ಲಿ ಗುಂಡೂರಾವ್ ಸರ್ಕಾರದ ಬಗ್ಗೆ ನೆಗೆಟಿವ್ ಅಭಿಪ್ರಾಯ ಮೂಡಿತ್ತು. ಹೀಗಾಗಿ ಇದನ್ನೇ ಬಳಸಿಕೊಂಡ ರಾಮಕೃಷ್ಣ ಹೆಗಡೆ ಕಿರೀಟ – ಗದೆ – ಹಾರ – ತುರಾಯಿ ಸ್ವೀಕರಿಸಬಾರದೆಂಬ ಸಂಪ್ರದಾಯ ಪ್ರಾರಂಭಿಸಿದರು.

ನಂತರ ಸಿಎಂ ಆಗಿ ಬಂದ ಎಸ್.ಆರ್ ಬೊಮ್ಮಾಯಿ ಕೂಡಾ ಹೆಗಡೆ ಅವರ ಕಿರೀಟ – ಗದೆ – ಹಾರ ತುರಾಯಿ ಸ್ವೀಕರಿಸದಿರುವ ಸಂಪ್ರದಾಯ ಮುಂದುವರಿಸಿದ್ದರು. ಆದಾದ ಬಳಿಕ ಬಂದ ಸರ್ಕಾರಗಳು ಕೂಡಾ ಇಂತಹುದೇ ಆದೇಶವನ್ನು ಹೊರಡಿಸಿತ್ತು. ಆದರೆ ಅದು ಆದೇಶವಾಗಿ ಉಳಿದಿತ್ತು ಹೊರಕು ಕಾರ್ಯರೂಪಕ್ಕೆ ಬಂದಿರಲಿಲ್ಲ.

bommai meeting

ಇದೀಗ ಬಸವರಾಜ್ ಬೊಮ್ಮಾಯಿಯವರ ಸರ್ಕಾರದಲ್ಲೂ, “ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ ಮತ್ತು ಸಮಾರಂಭಗಳಲ್ಲಿ ಹೂಗುಚ್ಛ, ಹಾರ – ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ಕಾಣಿಕೆ ನೀಡಬಾರದೆಂದು ಈ ಮೂಲಕ ನಿರ್ದೇಶಿಸಲಾಗಿದೆ. ಬದಲಾಗಿ ಕನ್ನಡ ಪುಸ್ತಕಗಳನ್ನು ನೀಡಬಹುದು. ಈ ನಿರ್ದೇಶನವನ್ನು ಚಾಚೂ ತಪ್ಪದೇ ಅನುಷ್ಠಾನಗೊಳಿಸಲು ಸಂಬಂಧಪಟ್ಟ ಸರ್ಕಾರದ ಎಲ್ಲ ಇಲಾಖೆಗಳು ಮತ್ತು ರಾಜ್ಯ ಸರ್ಕಾರದ ಎಲ್ಲ ಸಂಸ್ಥೆಗಳು ತಮ್ಮ ಆಧೀನದಲ್ಲಿ ಬರುವ ಎಲ್ಲ ಅಧಿಕಾರಿಗಳಿಗೆ ಸೂಚಿಸುವಂತೆ ತಿಳಿಸಲಾಗಿದೆ” ಎಂದು ಮುಖ್ಯ ಕಾರ್ಯದರ್ಶಿ ರವಿಕುಮಾರ್ ಆದೇಶ ಹೊರಡಿಸಿದ್ದಾರೆ.

governmentrules

ಮೇಲ್ನೋಟಕ್ಕೆ ತಂದೆ ಎಸ್.ಆರ್. ಬೊಮ್ಮಾಯಿ ಹಾದಿಯಲ್ಲೇ ಪುತ್ರ  ಬಸವರಾಜ್ ಬೊಮ್ಮಾಯಿ ನಡೆಯುತ್ತಿದ್ದಾರೆ ಅನ್ನಿಸುತ್ತಿದೆ. ಆದರೆ ಈ ಆದೇಶ ಕೇವಲ ಅಧಿಕಾರಿಗಳಿಗೆ ಮಾತ್ರ ಸೀಮಿತವಾಗಲಿದೆ ಹೊರತು, ಸಚಿವರು, ಶಾಸಕರು ಬಿಡಿ, ಮುಖ್ಯಮಂತ್ರಿಗಳಿಗೂ ಅನ್ವಯವಾಗುವುದು ಅನುಮಾನ. ಈಗಾಗಲೇ ಬೊಮ್ಮಾಯಿಯವರೇ ದೇವೇಗೌಡರು, ಎಸ್ ಎಂ ಕೃಷ್ಣ ಅವರಿಗೆ ಶಾಲು ಹೊದಿಸಿ, ಹಾರ ಹಾಕಿ ಬಂದಿದ್ದಾರೆ. ಇನ್ನು ಮಂತ್ರಿಗಳು ಕೊರೋನಾ ನಿಯಮಗಳನ್ನು ಉಲ್ಲಂಘಿಸಿ ವಿಜಯೋತ್ಸವ ಆಚರಿಸುತ್ತಿದ್ದಾರೆ. ಈ ವೇಳೆ ಹಾರ ತುರಾಯಿ ಹಣ್ಣು ಹಂಪಲು ಗಳನ್ನು ಸ್ವೀಕರಿಸುತ್ತಿದ್ದಾರೆ. ಇವೆಲ್ಲಾ ಖಾಸಗಿ ಕಾರ್ಯಕ್ರಮ ಎಂದು ಸಮಜಾಯಿಷಿ ಕೊಡಬೇಡಿ, ಸರಳತೆ ಅನ್ನುವುದು ಸರ್ಕಾರದ ಕಾರ್ಯಕ್ರಮಕ್ಕೆ ಸೀಮಿತವಾದರೆ ಅದು ಹಾಸ್ಯಾಸ್ಪದ.

Tags: Basavaraj Bommai
Share6TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್