crossorigin="anonymous"> boycott zee kannada : ಯಕ್ಷಗಾನಕ್ಕೆ ಅವಮಾನ : ಝೀ ಕನ್ನಡ ವಿರುದ್ಧ ದಾಖಲಾಯ್ತು ಪ್ರಕರಣ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

boycott zee kannada : ಯಕ್ಷಗಾನಕ್ಕೆ ಅವಮಾನ : ಝೀ ಕನ್ನಡ ವಿರುದ್ಧ ದಾಖಲಾಯ್ತು ಪ್ರಕರಣ

ಕಡಲತಡಿ ಭಾರ್ಗವ ಶಿವರಾಮ ಕಾರಂತ ಹುಟ್ಟೂರಿನಲ್ಲೇ ದಾಖಲಾಗಿದೆ

Radhakrishna Anegundi by Radhakrishna Anegundi
26-07-22, 7 : 30 am
in ರಾಜ್ಯ
insulting yakshagana zee-kannada-dkd6- police case in kota police station
Share on FacebookShare on TwitterWhatsAppTelegram

ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪಕ್ಕೆ ವಾಹಿನಿ ಗುರಿಯಾಗಿದ್ದು, ಈ ಬಾರಿ ಬಿಡುವ ಪ್ರಶ್ನೇಯೇ ಇಲ್ಲ ಅಂದಿದ್ದಾರೆ ಯಕ್ಷಗಾನದ ಅಭಿಮಾನಿಗಳು – boycott zee kannada

ಬೆಂಗಳೂರು :  ಈ ಬಾರಿ ಯಕ್ಷಗಾನಕ್ಕೆ ಝೀ ಕನ್ನಡದಿಂದ ಆಗಿರುವ ಅವಮಾನಕ್ಕೆ ತಕ್ಕ ಉತ್ತರ ನೀಡಲು ಯಕ್ಷಗಾನ ಅಭಿಮಾನಿಗಳು ನಿರ್ಧರಿಸಿದ್ದಾರೆ. ( boycott zee kannada) ಈ ಸಂಬಂಧ ಕಾನೂನು ಹೋರಾಟಕ್ಕೆ ನಿರ್ಧರಿಸಲಾಗಿದ್ದು, ರಾಜ್ಯದ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಿಸಲು ಯಕ್ಷಗಾನ ಪ್ರೇಮಿಗಳು ನಿರ್ಧರಿಸಿದ್ದಾರೆ.

ಈ ನಡುವೆ ಮೊದಲ ದೂರು ಕಡಲತಡಿ ಭಾರ್ಗವ ಶಿವರಾಮ ಕಾರಂತ ಹುಟ್ಟೂರಿನಲ್ಲೇ ದಾಖಲಾಗಿದೆ.( ಕಾರಂತರು ಯಕ್ಷಗಾನ ಕ್ಷೇತ್ರಕ್ಕೂ ಸಾಕಷ್ಟು ಕೊಡುಗೆ ನೀಡಿದ್ದಾರೆ ಅನ್ನುವುದು ಗಮನಾರ್ಹ ಅಂಶ.) ಉಡುಪಿ ಬ್ರಹ್ಮಾವರ ಕೋಟ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ, ಜೀ ಕನ್ನಡ ದೃಶ್ಯ ಮಾದ್ಯಮ ಸಂಸ್ಥೆಯು ಡಾನ್ಸ್ ಕರ್ನಾಟಕ ಡಾನ್ಸ್ ಕಾರ್ಯಕ್ರಮದಲ್ಲಿ ಕರಾವಳಿಯ ಶ್ರೀಮಂತ ಕಲಾ ಪ್ರಾಕಾರವಾದ ಯಕ್ಷಗಾನವನ್ನ ಸಿನಿಮಾದ ಸಂಗೀತದ ಜೊತೆಗೆ ಅತ್ಯಂತ ಅಶ್ಲೀಲವಾದ ಹಾವ-ಭಾವದಲ್ಲಿ ಪ್ರದರ್ಶಿಸಿ ನಮ್ಮ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿದ್ದಾರೆ.

ಯಕ್ಷಗಾನವನ್ನ ನಾವೆಲ್ಲರೂ ಧಾರ್ಮಿಕ ಭಾವನೆಯಲ್ಲಿ ಬೆಳಕಿನ ಸೇವೆ ಎಂದೇ ಪೂಜ್ಯ ಭಾವದಲ್ಲಿ ಗೌರವಿಸುತ್ತೇವೆ. ಆದರೆ ಝೀ ದೃಶ್ಯವಾಹಿನಿ ಪ್ರತೀ ಸಾರಿಯೂ ಯಕ್ಷಗಾನವನ್ನು ವಿರೂಪಗೊಳಿಸಿ ಪ್ರದರ್ಶಿಸುತ್ತಾ ಹಿಂದೂ ಧಾರ್ಮಿಕ ಭಾವನೆಗೆ ನೋವನ್ನು ಉಂಟು ಮಾಡುತ್ತಿರುವ ಹಿನ್ನೆಲೆಯಲ್ಲಿ ಆ ವಾಹಿನಿಯ ಮುಖ್ಯಸ್ಥ ರಾಘವೇಂದ್ರ ಹುಣಸೂರು, ಮತ್ತು ನೃತ್ಯ ಸಂಯೋಜಕ ಮಂಜು ಮಾಸ್ಟರ್ ಮತ್ತು ಸಂಬಂಧಪಟ್ಟವರ ಮೇಲೆ ಪ್ರಕರಣವನ್ನು ದಾಖಲಿಸಿಕೊಂಡು ನಮಗೆ ನ್ಯಾಯ ದೊರಕಿಸಿಕೊಡುವಂತೆ ಈ ಮೂಲಕ ವಿನಂತಿಸಿಕೊಳ್ಳುತ್ತಿದ್ದೇವೆ ಎಂದು ಮನವಿ ಮಾಡಲಾಗಿದೆ. boycott zee kannada

yakshagana zee kannada police

Zee Kannada : ವೇದಿಕೆಯಲ್ಲಿ ಅಪಮಾನ : ಸೋಷಿಯಲ್ ಮೀಡಿಯಾದಲ್ಲಿ ಕ್ಷಮೆಯಾಚನೆ

Zee Kannada ವಾಹಿನಿ ವೀಕ್ಷಕರ ಆಕ್ರೋಶಕ್ಕೆ ತುತ್ತಾಗುತ್ತಿರುವುದು ಇದು ಮೊದಲೇನಲ್ಲ. ಈ ಹಿಂದೆಯೂ ಕರಾವಳಿಯನ್ನು ಕೆಣಕಿದ ಆರೋಪಕ್ಕೆ ಗುರಿಯಾಗಿತ್ತು.

ಬೆಂಗಳೂರು :  Zee Kannada ವಾಹಿನಿ ವಿರುದ್ಧ ಈ ಬಾರಿ ಕರಾವಳಿಯಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ರಿಯಾಲಿಟಿ ಶೋ ಒಂದರಲ್ಲಿ ಯಕ್ಷಗಾನವನ್ನು ಅವಮಾನಿಸಿರುವುದು ಕರಾವಳಿಗರಿಗೆ ನೋವು ತಂದಿದೆ. ಆರಾಧಾನ ಕಲೆಯಾಗಿರುವ ಯಕ್ಷಗಾನದ ಕಿರೀಟ, ಯಕ್ಷಗಾನದ ಗೆಜ್ಜೆ ಹೀಗೆ ಪ್ರತಿಯೊಂದು ವಸ್ತುವನ್ನೂ ಗೌರವದಿಂದ ಕಾಣಲಾಗುತ್ತದೆ. ಹಾಗಿರುವಾಗ ಯಕ್ಷಗಾನದ ವೇಷಭೂಷಣ ಧರಿಸಿ, ಅದೇ ಪ್ರಕಾರದಲ್ಲಿ ಸಿನಿಮಾ ಹಾಡಿಗೆ ನೃತ್ಯ ಮಾಡಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ :Zameer Ahmed Khan : ಬಹಿರಂಗವಾಗಿ ಮಾತನಾಡುವಾಗ ಎಚ್ಚರವಿರಲಿ : ಜಮೀರ್ ಗೆ AICC ಕಡೆಯಿಂದಲೇ ಬಂತು ಎಚ್ಚರಿಕೆ

ಇನ್ನು ಯಕ್ಷಗಾನ ಕಲಿಯೋದು ಅಂದ್ರೆ ಅದೊಂದು ತಪ್ಪಸ್ಸು.ಹಾಗಿರುವ ಕಾರಣದಿಂದ ಸಹಜವಾಗಿಯೇ Zee Kannada ವಿರುದ್ಧ ಕರಾವಳಿ ಕೆಂಡವಾಗಿದೆ. ಈ ಹಿಂದೆಯೂ ಇದೇ ರೀತಿಯಲ್ಲಿ ಯಕ್ಷಗಾನಕ್ಕೆ ಅವಮಾನವಾಗಿತ್ತು. ಆಗ್ಲೂ ಕ್ಷಮೆ ಕೇಳಲಾಗಿತ್ತು. ಮತ್ತೆ ಅದೇ ತಪ್ಪು ಮಾಡಲಾಗಿತ್ತು. ಪದೇ ಪದೇ ತಪ್ಪು ಮಾಡುತ್ತಿರುವುದನ್ನು ಇದು ಉದ್ದೇಶಪೂರ್ವಕ ಅನ್ನುವುದು ಯಕ್ಷಗಾನ ಪ್ರೇಮಿಗಳ ಆಕ್ರೋಶ.

ಇದನ್ನೂ ಓದಿ : Suspected terrorist : ಸ್ವಿಗ್ಗಿ ಡೆಲಿವರಿ ಬಾಯ್ ಆಗಿದ್ದ ಶಂಕಿತ ಉಗ್ರನ ಸೆರೆ ಹಿಡಿದ ಸಿಸಿಬಿ

ಇನ್ನು ಸಾಮಾಜಿಕ ಜಾಲತಾಣಗಳಲ್ಲಿ boycott zee kannada ಟ್ರೆಂಡ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ವಾಹಿನಿ, ತನ್ನ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಕೆಲವರಿಗೆ ನೋವಾಗಿದೆ, ನೋವಾಗಿದ್ರೆ ಕ್ಷಮೆ ಇರಲಿ ಎಂದು ಕ್ಷಮೆಯನ್ನು ಕೇಳಿದೆ. ಆದರೆ ಯಕ್ಷಗಾನ ಪ್ರೇಮಿಗಳು ಈ ಕ್ಷಮೆಯನ್ನು ಒಪ್ಪಿಕೊಳ್ಳಲು ಸಿದ್ದರಿಲ್ಲ. ವೇದಿಕೆಯಲ್ಲಿ ಅವಮಾನಿಸುವ ನೀವು ಸಾಮಾಜಿಕ ಜಾಲತಾಣದಲ್ಲಿ ಕ್ಷಮೆ ಕೇಳುವುದು ಹೊಸದೇನಲ್ಲ. ಎಲ್ಲಿ ಅವಮಾನ ಮಾಡಿದ್ದೀರೋ ಅಲ್ಲೇ ಕ್ಷಮೆ ಕೇಳಿ. ಹೀಗಾಗಿ ವೇದಿಕೆಯಲ್ಲಿ ಕ್ಷಮೆ ಕೇಳದ ಹೊರತು ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ :zameer ahmed : ಡಿಕೆಶಿಯೂ ಅಲ್ಲ ಸಿದ್ದುಗೂ ಇಲ್ಲ : ಮುಂದಿನ ಸಿಎಂ ಜಮೀರ್ ಅಹಮ್ಮದ್

ಈ ಬಾರಿ ಝೀ ಕನ್ನಡದ ವಿರುದ್ಧ ಕಾನೂನು ಹೋರಾಟಕ್ಕೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಸೇರಿದಂತೆ ಹಲವಾರು ಯಕ್ಷಗಾನ ಸಂಘಟನೆಗಳು ನಿರ್ಧರಿಸಿದೆ. ಜೊತೆಗೆ ಹಲವಾರು ಸೆಲೆಬ್ರೆಟಿ ಯಕ್ಷಗಾನ ಕಲಾವಿದರು ಹೋರಾಟಕ್ಕೆ ಕೈ ಜೋಡಿಸಿದ್ದಾರೆ.

Tags: MAIN
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್