ಗಣೇಶ ಚತುರ್ಥಿಯ ಒಳಗಾಗಿ ಸಾರಿಗೆ ಸಂಸ್ಥೆಗಳ ಪ್ರಯಾಣಿಕ ದರ ಏರಿಕೆಯ ಅನಿವಾರ್ಯತೆಗೆ ಸರ್ಕಾರ ಸಿಲುಕಿದೆ. ಪ್ರಯಾಣಿಕರ ದರ ಏರಿಸದಿದ್ದರೆ ಕೋಟಿ ಕೋಟಿ ನಷ್ಟ ಗ್ಯಾರಂಟಿ.
ಆದರೆ ಜನತೆಯ ಆಕ್ರೋಶಕ್ಕೆ ತುತ್ತಾಗಬೇಕಾಗುತ್ತದೋ ಅನ್ನುವ ಆತಂಕವೂ ಕಾಡುತ್ತಿದೆ.
ಈ ನಡುವೆ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಮಾಜಿ ಪ್ರಧಾನಿ ದೇವೇಗೌಡರು ಸಾರಿಗೆ ಸಂಸ್ಥೆಯ ಬಸ್ ದರ ಏರಿಕೆ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.
ಇಂಧನ ದರ ಹೀಗೆ ಏರಿಕೆಯಾಗುತ್ತಿದ್ದರೆ ಬಸ್ ಅನ್ನು ನೀರು ಹಾಕಿ ಓಡಿಸಲು ಆಗುತ್ತಾ..? ಎಂದು ಪ್ರಶ್ನಿಸಿದ್ದಾರೆ.
ಬಸ್ ಪ್ರಯಾಣವನ್ನು ಸುಮ್ಮನೆ ಏರಿಕೆ ಮಾಡುತ್ತಿಲ್ಲ. ಕಾರಣ ಕೊಟ್ಟು ದರ ಏರಿಕೆ ಮಾಡುತ್ತಿದ್ದಾರೆ. ಪರಿಸ್ಥಿತಿ ನೋಡಿದರೆ ಇಂಧನ ದರ ಇಳಿಯುವ ಲಕ್ಷಣ ಕಾಣಿಸುತ್ತಿಲ್ಲ. ಹೀಗಾಗಿ ಪ್ರಯಾಣ ದರ ಏರಿಕೆ ಮಾಡುವುದರಲ್ಲಿ ತಪ್ಪಿಲ್ಲ ಎಂದು ಎಂದು ಅವರು ಸರ್ಕಾರದ ಪರ ಬ್ಯಾಟಿಂಗ್ ಮಾಡಿದ್ದಾರೆ.
Discussion about this post