crossorigin="anonymous"> ಮಾಸ್ಕ್ ಬಿಸಾಡಿ....ಆರಾಮವಾಗಿ ತಿರುಗಾಡಿ : ದೂರವಾಯ್ತೇ ಕೊರೋನಾ ಆತಂಕ...? - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಮಾಸ್ಕ್ ಬಿಸಾಡಿ….ಆರಾಮವಾಗಿ ತಿರುಗಾಡಿ : ದೂರವಾಯ್ತೇ ಕೊರೋನಾ ಆತಂಕ…?

Radhakrishna Anegundi by Radhakrishna Anegundi
29-04-21, 4 : 39 pm
in ದೇಶ
mask2
Share on FacebookShare on TwitterWhatsAppTelegram

ಭಾರತ ದೇಶ ಕೊರೋನಾ ಸೋಂಕಿನ ಎರಡನೆ ಅಲೆಯಿಂದ ತತ್ತರಿಸಿ ಹೋಗಿದೆ. ಅದರಲ್ಲೂ ಕೊರೋನಾ ವೈರಸ್ ಗಳು ರೂಪಾಂತರಿ ಹೊಂದಿರುವುದು ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಜನರ ದಿವ್ಯ ನಿರ್ಲಕ್ಷ್ಯದ ಕಾರಣದಿಂದ ಸರ್ಕಾರ ಏನೂ ಮಾಡಲಾಗದ ಪರಿಸ್ಥಿತಿಯಲ್ಲಿದೆ. ಕನಿಷ್ಟ ಪಕ್ಷ ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಜನ ಕಾಪಾಡಿಕೊಂಡಿದ್ರೆ ಸಮಸ್ಯೆ ಈ ಮಟ್ಟಿಗೆ ಬೆಳೆಯುತ್ತಿರಲಿಲ್ಲ. ಕನಿಷ್ಟ ಪಕ್ಷ ರಾಜಕಾರಣಿಗಳ ಸಮಾವೇಶಗಳನ್ನು ಜನರೇ ಬಹಿಷ್ಕರಿಸುತ್ತಿದ್ರೆ, ಅವರಿಗೆ ಬುದ್ದಿ ಬರುತ್ತಿತ್ತು. ಸಿನಿಮಾ ಸ್ಟಾರ್ ಗಳನ್ನು ಸೈಡಿಗಿಡುತ್ತಿದ್ರೆ ಕೊರೋನಾ ಸೋಂಕು ಈ ಮಟ್ಟಿಗೆ ಅಬ್ಬರಿಸುತ್ತಿರಲಿಲ್ಲ.

ಈ ನಡುವೆ ಕೊರೋನಾ ಸೋಲಿಸುವ ನಿಟ್ಟಿನಲ್ಲಿ ಲಸಿಕೆ ನೀಡುವ ಕಾರ್ಯಕ್ರಮ ಕೂಡಾ ಭರದಿಂದ ಸಾಗಿದೆ. ಆದರೆ ಜನರ ನಿರ್ಲಕ್ಷ್ಯದ ಕಾರಣದಿಂದ ನಿರೀಕ್ಷಿತ ಗುರಿ ಮುಟ್ಟಲು ಅಲ್ಲೂ ಸಾಧ್ಯವಾಗಿಲ್ಲ. ಇದೀಗ ಕೊರೋನಾ ಸೋಂಕಿನ ಅಲೆ ಸಾವಿನ ಸಂಖ್ಯೆಯನ್ನು ಹೆಚ್ಚಿಸುತ್ತಿರುವಂತೆ ಲಸಿಕಾ ಹಾಕಿಸಿಕೊಳ್ಳಲು ಜನ ಮುಗಿ ಬೀಳ ತೊಡಗಿದ್ದಾರೆ. ಲಸಿಕೆಯನ್ನು ಟೀಕಿಸಿದ ಬುದ್ದಿಜೀವಿಗಳು ಕೂಡಾ ಇದೀಗ ಲಸಿಕಾ ಕೇಂದ್ರಕ್ಕೆ ಕಾಲಿಟ್ಟಿದ್ದಾರೆ. ಆದರೆ ಈ ನೂಕು ನುಗ್ಗಲು ನಿಭಾಯಿಸುವ ಸಾಮರ್ಥ್ಯ ನಮ್ಮ ಆರೋಗ್ಯ ವ್ಯವಸ್ಥೆಗಿಲ್ಲ. ಒಂದು ವೇಳೆ ಸರ್ಕಾರ ಹೇಳಿದ ಸಂದರ್ಭದಲ್ಲೇ 45 ರಿಂದ ಮೇಲ್ಪಟ್ಟವರು ಲಸಿಕಾ ಹಾಕಿಸಿಕೊಂಡಿದ್ರೆ ಈ ಸಮಸ್ಯೆ ಬರುತ್ತಿರಲಿಲ್ಲ.

ಒಂದು ವೇಳೆ ಸರ್ಕಾರ ಹೇಳಿದಂತೆ ಲಸಿಕೆ ಹಾಕಿಸಿಕೊಳ್ಳುತ್ತಿದ್ರೆ ಇವತ್ತು ಗರಿಷ್ಟ ಮಂದಿ ಎರಡನೇ ಡೋಸ್ ಲಸಿಕೆ ಪಡೆದಿರುತ್ತಿದ್ರು, ಮಾತ್ರವಲ್ಲದೆ ಮಾಸ್ಕ್ ಬಿಸಾಡಿ ಆರಾಮವಾಗಿ ತಿರುಗಾಡಬಹುದಿತ್ತು.

ಇದಕ್ಕೆ ಬೆಸ್ಟ್ ಉದಾಹರಣೆ ಅಂದ್ರೆ ಅಮೆರಿಕಾ, ಒಂದು ಕಾಲದಲ್ಲಿ ಕೊರೋನಾ ಸೋಂಕಿನಿಂದ ತತ್ತರಿಸಿ ಹೋಗಿದ್ದ ಅಮೆರಿಕಾ ಟ್ರಂಪ್ ಮನೆಗೆ ಹೋಗುತ್ತಿದ್ದಂತೆ ಸೋಂಕು ಸೋಲಿಸುವತ್ತ ಹೆಜ್ಜೆ ಹಾಕಿದೆ. ಅಷ್ಟು ಮಾತ್ರವಲ್ಲದೆ ಹೊಸದಾಗಿ ಬಂದಿರುವ ಬೈಡೆನ್ ಸರ್ಕಾರ ಮಾಸ್ಕ್ ಬಿಸಾಡಿ….ಆರಾಮವಾಗಿ ತಿರುಗಾಡಿ ಎಂದು ತನ್ನ ಜನರಿಗೆ ಹೇಳಿದೆ. ಜೊತೆಗೆ ಪಬ್ ಬಾರ್ ಗಳಲ್ಲಿ ಮಾಸ್ಕ್ ಬಿಸಾಡಿ ತೂರಾಡಿ ಅಂದಿದೆ.

biden

ಅರೇ ಬೈಡನ್ ಗೆ ತಲೆ ಕೆಟ್ಟಿದೆಯೇ ಅಂದುಕೊಳ್ಳಬೇಡಿ. ಟ್ರಂಪ್ ರೀತಿಯಲ್ಲೇ ಬೈಡನ್ ಗೆ ಹುಚ್ಚು ಹಿಡಿದಿಲ್ಲ ತಾನೇ ಎಂದು ಪ್ರಶ್ನಿಸಬೇಡಿ. ಖಂಡಿತಾ ಇಲ್ಲ. ಮಾಸ್ಕ್ ಕಡ್ಡಾಯವಲ್ಲ ಅನ್ನುವ ಆದೇಶದಲ್ಲಿ ಒಂದು ಷರತ್ತು ವಿಧಿಸಲಾಗಿದೆ. ಯಾರೆಲ್ಲಾ ಎರಡು ಡೋಸ್ ಕೊರೋನಾ ಲಸಿಕೆ ಹಾಕಿಸಿಕೊಂಡಿದ್ದಾರೋ ಅವರು ಮಾತ್ರ ಯಾರ ಹಂಗು ಇಲ್ಲದೆ ತಿರುಗಾಡಬಹುದಾಗಿದೆ. ಹಾಗಂತ ದೊಡ್ಡ ಸಂಖ್ಯೆಯಲ್ಲಿ ಜನ ಸೇರುವ ಸ್ಥಳವಾಗಿದ್ರೆ ಎರಡು ಡೋಸ್ ಲಸಿಕೆ ಪಡೆದವರು ಮಾಸ್ಕ್ ಹಾಕಿಸಿಕೊಳ್ಳುವುದು ಉತ್ತಮ ಅಂದಿದೆ.

ಇಂತಹುದೊಂದು ಆದೇಶ ಹೊರ ಬೀಳಲು ಕಾರಣವಾಗಿರುವುದು ಅಮೆರಿಕಾದಲ್ಲಿ ನಡೆದ ಲಸಿಕಾ ಕಾರ್ಯಕ್ರಮ. ಭಾರತದ ರೀತಿಯಲ್ಲೇ ಮೊದಲ ಹಂತದಲ್ಲಿ ಕೊರೋನಾ ವಾರಿಯರ್ಸ್ ಗಳಿಗೆ ಲಸಿಕೆ ನೀಡಲಾಗಿತ್ತು. ಬಳಿಕ 60 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಹಾಕಿಸಲಾಗಿತ್ತು. ಇದಾದ ಬಳಿಕ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಘೋಷಿಸಲಾಗಿತ್ತು.

ಯಾವಾಗ ಲಸಿಕೆಯ ಕಾರ್ಯಕ್ರಮವೇ ವೇಗ ಸಿಕ್ಕಿತೋ ಅಮೆರಿಕಾದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯೂ ತೀವ್ರವಾಗಿ ಇಳಿಯತೊಡಗಿತು. ಈ ಕಾರಣದಿಂದಲೇ ಅಮೆರಿಕಾ ಎರಡು ಡೋಸ್ ಪಡೆದವರು ಮಾಸ್ಕ್ ಇಲ್ಲದೆ ಆರಾಮವಾಗಿ ತಿರುಗಾಡಬಹುದು ಎಂದು ಹೇಳಿದೆ.

ಒಂದು ವೇಳೆ ಭಾರತೀಯರು ಕೂಡಾ ಸರ್ಕಾರ ಕೈಗೊಂಡಿರುವ ಲಸಿಕಾ ಯಜ್ಞ ಕಾರ್ಯಕ್ರಮದಲ್ಲಿ ಪಾಲ್ಗೊಂಡರೆ, ಕೊರೋನಾ ವಿರುದ್ಧ ದಿಗ್ವಿಜಯ ಸಾಧಿಸಬಹುದಾಗಿದೆ.

Tags: Coronamaskಕೊರೋನಾ
Share3TweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್