crossorigin="anonymous"> chandrashekhar guruji : ವನಜಾಕ್ಷಿ ಜೊತೆಗಿನ ಗುದ್ದಾಟವೇ ಚಂದ್ರಶೇಖರ ಗುರೂಜಿ ಕೊಲೆಗೆ ಕಾರಣವಾಯ್ತೇ..? - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

chandrashekhar guruji : ವನಜಾಕ್ಷಿ ಜೊತೆಗಿನ ಗುದ್ದಾಟವೇ ಚಂದ್ರಶೇಖರ ಗುರೂಜಿ ಕೊಲೆಗೆ ಕಾರಣವಾಯ್ತೇ..?

ಕೊಲೆಯ ಹಿಂದೆ ಮಹಿಳೆಯ ನೆರಳು

Radhakrishna Anegundi by Radhakrishna Anegundi
05-07-22, 8 : 29 pm
in ಕ್ರೈಮ್
chandrashekhar-guruji-murder-accused-mahantesh-wife-vanajakshi-arrest
Share on FacebookShare on TwitterWhatsAppTelegram

ಚಂದ್ರಶೇಖರ ಗುರೂಜಿಯ ( chandrashekhar guruji  ) ವ್ಯವಹಾರಗಳು ಸ್ವಚ್ಛವಾಗಿರಲಿಲ್ಲ ಅನ್ನುವ ಮಾತುಗಳು ಕೇಳಿ ಬರಲಾರಂಭಿಸಿದೆ. ಗುರೂಜಿ ಕೇವಲ ವಾಸ್ತು ತಜ್ಞರಾಗಿರಲಿಲ್ಲ, ಬದಲಾಗಿ ರಿಯಲ್ ಎಸ್ಟೇಟ್ ವ್ಯವಹಾರ ಕೂಡಾ ಜೋರಾಗಿತ್ತು ಅನ್ನಲಾಗಿದೆ

ಹುಬ್ಬಳ್ಳಿ : ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ( chandrashekhar guruji  ) ಕೊಲೆಯ ಬೆನ್ನಲ್ಲೇ ಆಲರ್ಟ್ ಆದ ಪೊಲೀಸರು 5 ತಂಡಗಳನ್ನು ರಚಿಸಿ ತನಿಖೆ ಪ್ರಾರಂಭಿಸಿದ್ದರು. ಗುರೂಜಿ ಶವವಾಗಿ ಬಿದ್ದ ಕೆಲವೇ ಗಂಟೆಗಳಲ್ಲಿ ಪೊಲೀಸರಿಗೆ ಕೊಲೆಗಾರರ ಸುಳಿವು ಸಿಕ್ಕಿತ್ತು. ಮಾತ್ರವಲ್ಲದೆ ಕೊಲೆಯ ಹಿಂದೆ ಮಹಿಳೆಯೊಬ್ಬಳು ಇದ್ದಾಳೆ ಅನ್ನುವ ಅನುಮಾನ ಸೃಷ್ಟಿಯಾಗಿತ್ತು.

ಇದರ ಬೆನ್ನಲ್ಲೇ ಗುರೂಜಿಯ ಮಾಜಿ ಆಪ್ತ, ಮಹಾಂತೇಶ ಶಿರೋಳ್ ಪತ್ನಿ ವನಜಾಕ್ಷಿಯನ್ನು ಗೋಕುಲ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ( chandrashekhar guruji  ) ಗುರೂಜಿಯನ್ನು ಮಹಾಂತೇಶ ಶಿರೋಳ್ ಮತ್ತು ಮಂಜುನಾಥ ದುಮ್ಮವಾಡ ಅನ್ನುವವರೇ ಕೊಲೆ ಮಾಡಿದ್ದು ಎಂದು ದೃಢಪಟ್ಟ ಬೆನ್ನಲ್ಲೇ ವನಜಾಕ್ಷಿಯನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ : ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ : ಶಾಸಕ ಜಮೀರ್ ಸಾಮ್ರಾಜ್ಯಕ್ಕೆ ಎಸಿಬಿ ದಾಳಿ

ಗುರೂಜಿಯ ಕೊಲೆ ಬೇನಾಮಿ ಆಸ್ತಿಗಾಗಿ ನಡೆದಿರಬಹುದು ಅನ್ನುವ ಶಂಕೆಯ ಹಿನ್ನಲೆಯಲ್ಲಿ ವನಜಾಕ್ಷಿಯನ್ನು ವಶಕ್ಕೆ ಪಡೆಯಲಾಗಿತ್ತು. ವನಜಾಕ್ಷಿ ಸರಳ ವಾಸ್ತು ಸಂಸ್ಥೆಯ ಮಾಜಿ ಉದ್ಯೋಗಿಯಾಗಿದ್ದು, 2019ರ ವರೆಗೆ ಸರಳ ವಾಸ್ತು ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಳು. ವನಜಾಕ್ಷಿ ಹೆಸರಿಗೆ ಗೋಕುಲ ರಸ್ತೆ ಬಳಿಯ ಅಪಾರ್ಟ್‌ಮೆಂಟ್‌ ಮತ್ತು ಹಲವು ಆಸ್ತಿಗಳನ್ನು ಗುರೂಜಿ ನೋಂದಣಿ ಮಾಡಿಸಿದ್ದರು ಅನ್ನಲಾಗಿದೆ. ಆದರೆ ಈ ಎಲ್ಲಾ ಆರೋಪಗಳನ್ನು ವನಜಾಕ್ಷಿ ನಿರಾಕರಿಸಿದ್ದು, ನಾನು ಸಾಲ ಮಾಡಿ ಈ ಮನೆ ಖರೀದಿಸಿದ್ದೇನೆ ಅಂದಿದ್ದಾರೆ.

ನಂತರ ಆಸ್ತಿ ವಾಪಸ್‌ ಕೇಳಿದಾಗ ಗಲಾಟೆ ಪ್ರಾರಂಭವಾಗಿದ್ದು, ಹಣಕಾಸಿನ ವಿಚಾರವಾಗಿಯೂ ಗಲಾಟೆ ಪ್ರಾರಂಭವಾಗಿದೆ. ಹೀಗಾಗಿ ವನಜಾಕ್ಷಿಯನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಆರೋಪಿ ಮಹಾಂತೇಶ್ ಶಿರೂರನಿಗೆ ವನಜಾಕ್ಷಿ ಜೊತೆ ಮದುವೆ ಮಾಡಿಸಿದ್ದೇ ಚಂದ್ರಶೇಖರ್ ಗುರೂಜಿ ಎಂದು ತಿಳಿದು ಬಂದಿದ್ದು, ಗುರೂಜಿ ಹಾಗೂ ವನಜಾಕ್ಷಿ ಒಂದೇ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದರು. 008 ರ ಫ್ಲಾಟ್‌ನಲ್ಲಿ ಗುರೂಜಿ ಇದ್ರೆ ಇದೇ ಅಪಾರ್ಟ್‌ಮೆಂಟ್‌ನ 308 ರಲ್ಲಿ ಮಹಾಂತೇಶ್ ಹಾಗೂ ವನಜಾಕ್ಷಿ ವಾಸವಾಗಿದ್ದರು ಅನ್ನಲಾಗುತ್ತಿದೆ. ಈ ಬಗ್ಗೆ ಪೊಲೀಸರಿಂದ ಇನ್ನೂ ಸ್ಪಷ್ಟನೆ ಸಿಕ್ಕಿಲ್ಲ.

ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣ : ಇಬ್ಬರು ಪೊಲೀಸರ ವಶಕ್ಕೆ

ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ( chandrashekhar guruji) ಕೊಲೆ ಪ್ರಕರಣದ ತನಿಖೆಯಲ್ಲಿ ಪೊಲೀಸರು ಕ್ಷಿಪ್ರ ಪ್ರಗತಿ ಸಾಧಿಸಿದ್ದಾರೆ. ಕೊಲೆ ನಡೆದ ಕೆಲವೇ ಕ್ಷಣಗಳಲ್ಲಿ ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಹುಬ್ಬಳ್ಳಿ :  ಸರಳ ವಾಸ್ತು ಖ್ಯಾತಿ. ಚಂದ್ರಶೇಖರ ಗುರೂಜಿ ( chandrashekhar guruji ) ಕೊಲೆ ಪ್ರಕರಣದ ಸಂಬಂಧ ಪ್ರಮುಖ ಆರೋಪಿಗಳು ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಕೊಲೆ ನಡೆದ ಕೆಲವೇ ಗಂಟೆಗಳಲ್ಲಿ ಹುಬ್ಬಳ್ಳಿ ಪೊಲೀಸರು ಆರೋಪಿಗಳ ಭೇಟೆಯಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಹುಬ್ಬಳ್ಳಿಯ ಉಣಕಲ್ ಕ್ರಾಸ್ ಬಳಿ ಇರುವ ಪ್ರೆಸಿಂಡೆಂಟ್ ಹೋಟೆಲ್ ನಲ್ಲಿ ಚಂದ್ರಶೇಖರ ಗುರೂಜಿ ಭೀಕರವಾಗಿ ಕೊಲೆಯಾಗಿದ್ದಾರೆ. ಮಧ್ಯಾಹ್ನ ಹೊತ್ತಿಗೆ ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಕಾಲಿಗೆ ನಮಸ್ಕರಿಸುವ ನೆಪದಲ್ಲಿ ಚೂರಿ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಏನಾಗುತ್ತಿದೆ ಎಂದು ತಿಳಿಯುವ ಹೊತ್ತಿಗೆ ಇಬ್ಬರೂ ಸೇರಿ ಗುರೂಜಿಯ ದೇಹಕ್ಕೆ ಎಷ್ಟಾಗುತ್ತದೋ ಅಷ್ಟು ಹೊತ್ತು ತಿವಿದಿದ್ದಾರೆ. ಕ್ರೈಂ ಆಫ್ ಸೀನ್ ಗಮನಿಸಿದರೆ ಗುರೂಜಿ ಮೃತಪಟ್ಟಿರುವುದು ಖಚಿತ ಪಟ್ಟ ಮೇಲೆಯೇ ಅಲ್ಲಿಂದ ತೆರಳಿದ್ದಾರೆ.

ಈ ನಡುವೆ ಚಂದ್ರಶೇಖರ ಗುರೂಜಿ ( chandrashekhar guruji ) ಕೊಲೆ ಪ್ರಕರಣ ಸಂಬಂಧ ಪೊಲೀಸರ 5 ವಿಶೇಷ ತಂಡಗಳನ್ನು ರಚಿಸಲಾಗಿತ್ತು. ಇದೀಗ ಇಬ್ಬರು ಪ್ರಮಪಖ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಕೊಲೆ ರಹಸ್ಯ ಬೇಧಿಸಲು ಮುಂದಾಗಿದ್ದಾರೆ. ಪೊಲೀಸರ ಕೈಗೆ ಸಿಕ್ಕವರನ್ನು ಮಹಾಂತೇಶ್ ಶಿರೂರು ಮತ್ತು ಮಂಜುನಾಥ್ ಎಂದು ಗುರುತಿಸಲಾಗಿದೆ.

Tags: MAIN
ShareTweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್