ಗಣಪತಿ ವಿಸರ್ಜನೆ ಸಂದರ್ಭದಲ್ಲಿ ನಡೆದ ದುರಂತದಲ್ಲಿ ಮೂವರು ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಹೊಸದುರ್ಗ ತಾಲೂಕಿನ ಕೊಂಡಾಪುರ ಗ್ರಾಮದಲ್ಲಿ ನಡೆದ ದುರ್ಘಟನೆಯಲ್ಲಿ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ಯುವಕನೊಬ್ಬ ಭದ್ರಾ ಮೇಲ್ದಂಡೆ ಯೋಜನೆ ಕಾಲುವೆಗೆ ಬಿದ್ದು ಮೃತಪಟ್ಟಿದ್ದಾನೆ. ಮೃತನನ್ನು ಚರಣ್ ರಾಜ್ (27) ಎಂದು ಗುರುತಿಸಲಾಗಿದೆ.
ಮತ್ತೊಂದು ದುರ್ಘಟನೆಯಲ್ಲಿ ಚಿಕ್ಕಬಳ್ಳಾಪುರ ಗೌರಿ ಬಿದನೂರು ತಾಲೂಕಿನ ಹಳೆವೂರು ಗ್ರಾಮದಲ್ಲಿ ಗಣಪತಿ ವಿಸರ್ಜನೆ ಹೋದ ವೇಳೆ ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಮೃತರನ್ನು ಹರಿಚರಣ್ (13) ಹಾಗೂ ಲಿಖಿತ್ (14) ಎಂದು ಗುರುತಿಸಲಾಗಿದೆ.
ಈ ಇಬ್ಬರೂ ಮಕ್ಕಳು ಜಯಣ್ಣ ಎಂಬವರಿಗೆ ಸೇರಿದ ತೋಟದಲ್ಲಿದ್ದ ಕೃಷಿ ಹೊಂಡದಲ್ಲಿ ಗಣೇಶನ ವಿಗ್ರಹ ವಿಸರ್ಜಿಸಲು ತೆರಳಿದ್ದರು. ಈ ಸಂಬಂಧ ಗೌರಿ ಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Discussion about this post