ಬೆಂಗಳೂರು: ಪೆಟ್ರೋಲ್, ಡಿಸೇಲ್ ದರ ಏರಿಕೆಯನ್ನು ಖಂಡಿಸಿ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಯಿತು. ನಗರದ ಶಿವಾನಂದ ಸರ್ಕಲ್ ಬಳಿಯಿರುವ ಪೆಟ್ರೋಲ್ ಬಂಕ್ ಸಮೀಪ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕರು ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಗೋಷಣೆಗಳನ್ನು ಕೂಗಿದರು.
ಈ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಇಂದಿನಿಂದ ಹಂತ ಹಂತವಾಗಿ 5 ದಿನಗಳ ರಾಜ್ಯಾದ್ಯಂತ ಪ್ರತಿಭಟನೆ ನಡೆಯಲಿದೆ ಅಂದರು.
ಈ ವೇಳೆ ಮಾಜಿ ಸಚಿವರಾದ ಆರ್ ವಿ ದೇಶಪಾಂಡೆ, ದಿನೇಶ್ ಗುಂಡೂರಾವ್, ಸೇರಿ ಅನೇಕ ನಾಯಕರು ಪಾಲ್ಗೊಂಡಿದ್ದರು.

ಇದೇ ವೇಳೆ ಸೆಕ್ಷನ್ 144 ಜಾರಿ ಇದ್ದರೂ ಪ್ರತಿಭಟನೆ ನಡೆಸಿದ ಹಿನ್ನಲೆ ಹಾಗೂ ಕೊರೋನಾ ನಿಯಮಗಳನ್ನು ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಹಿನ್ನಲೆಯಲ್ಲಿ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು ಬಳಿಕ ಬಿಡುಗಡೆ ಮಾಡಿದರು.
ಇದೇ ವೇಳೆ ವಸಂತಪುರದ ಪೆಟ್ರೋಲ್ ಬಂಕ್ ಬಳಿ ತಟ್ಟೆ ಪ್ಲೇಟ್ ಹಿಡಿದು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಇಂಧನ ದರ ಇಳಿಕೆಗೆ ಆಗ್ರಹಿಸಿದರು.

ಇನ್ನು ದೆಹಲಿಯಲ್ಲಿ ಕೆಸಿ ವೇಣುಗೋಪಾಲ್, ಹರೀಶ್ ರಾವತ್, ಅಜಯ್ ಮಕೇನ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಈ ವೇಳೆ ಮಾತನಾಡಿದ ವೇಣುಗೋಪಾಲ್, ಯುಪಿಎ ಸರ್ಕಾರದ ಅವಧಿಗೆ ಹೋಲಿಸಿದರೆ ಬಿಜೆಪಿ ಸರ್ಕಾರ ಅಬಕಾರಿ ಸುಂಕವನ್ನು ಪೆಟ್ರೋಲ್ ಗೆ 23.87 ಹಾಗೂ ಡೀಸೆಲ್ ಅಬಕಾರಿ ಸುಂಕವನ್ನು 28.37ಕ್ಕೆ ಏರಿಸಿದೆ. ಹೀಗಾಗಿಯೇ ಪೆಟ್ರೋಲ್ ದರ ಶತಕ ಬಾರಿಸಿದೆ ಎಂದು ಆರೋಪಿಸಿದರು.
Discussion about this post