crossorigin="anonymous"> ಪತ್ರಕರ್ತನಿಗೆ ಬೆದರಿಕೆ ಹಾಕಿದ ಕಾಂಗ್ರೆಸ್ ಕಾರ್ಪೋರೇಟರ್.. ಅಮಾನತು ಮಾಡಲ್ವ ದಿನೇಶ್ ಗುಂಡೂರಾವ್.? - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಪತ್ರಕರ್ತನಿಗೆ ಬೆದರಿಕೆ ಹಾಕಿದ ಕಾಂಗ್ರೆಸ್ ಕಾರ್ಪೋರೇಟರ್.. ಅಮಾನತು ಮಾಡಲ್ವ ದಿನೇಶ್ ಗುಂಡೂರಾವ್.?

Radhakrishna Anegundi by Radhakrishna Anegundi
08-03-19, 1 : 15 pm
in ಟಾಪ್ ನ್ಯೂಸ್
pushkar vijayaram
Share on FacebookShare on TwitterWhatsAppTelegram

ಜನಪ್ರತಿನಿಧಿಗಳು ಗೆಲ್ಲೋ ತನಕ ಮತದಾರರ ಕೈ ಕಾಲು ಹಿಡಿದುಕೊಂಡು ಒಡಾಡುತ್ತಿರುತ್ತಾರೆ. ಗೆದ್ದರೆ ಸಾಕು, ಮತ್ಯಾವುದೋ ಲೋಕದಿಂದ ಬಂದಂತೆ ಆಡಲು ಪ್ರಾರಂಭಿಸುತ್ತಾರೆ. ಅದರಲ್ಲೂ ಬಿಬಿಎಂಪಿ ಕಾರ್ಪೋರೇಟರ್ ಗಳು ಲೋಕಲ್ ಶಾಸಕರಂತೆ ಆಡುತ್ತಾರೆ.

ಇದಕ್ಕ ಅಧಿಕಾರದ ದರ್ಪ ಒಂದು ಕಾರಣವಾದರೆ, ಅವರ ಹಿನ್ನಲೆಯೂ ಅದೇ ರೀತಿ ಇರುತ್ತದೆ. ಮೈ ಮೇಲೆ ಕೇಸು ಜಡಿದುಕೊಳ್ಳದೆ, ಕ್ಲೀನ್ ಹ್ಯಾಂಡ್ ಅನ್ನುವ ಕಾರ್ಪೋರೇಟರ್ ಗಳನ್ನು ಹುಡುಕ ಹೊರಟರೆ ನಾಲ್ಕೈದು ಜನ ಸಿಗುವುದು ಕಷ್ಟ.

ಹೀಗೆ ಕಾಟನ್ ಪೇಟೆ ವಾರ್ಡ್ ನ ಕಾರ್ಪೊರೇಟರ್ ಡಿ ಪ್ರಮೋದ್, ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನ ಫೋಟೋಗ್ರಾಫರ್ ಪುಷ್ಕರ್ ವಿ ಗೆ ಬೆದರಿಕೆ ಹಾಕಿದ್ದು, ತನ್ನ ವಾರ್ಡ್ ನಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಗಳ ಫೋಟೋ ಹಾಗೂ ಆ ಕುರಿತು ಯಾವುದೇ ವರದಿ ಪ್ರಕಟಿಸದಂತೆ ಬೆದರಿಕೆ ಹಾಕಿದ್ದಾರೆ.

ಮಾರ್ಚ್ 6 ರಂದು ಮೆಜಸ್ಟಿಕ್ ಗೆ ತೆರಳುವ ಮಾರ್ಗದಲ್ಲಿರುವ, ಪೊಲೀಸ್ ಠಾಣೆಯ ಮುಂಭಾಗದಲ್ಲಿರುವ ಕಾಟನ್ ಪೇಟೆಯ ಮುಖ್ಯ ರಸ್ತೆಯನ್ನು ಸಂಪೂರ್ಣವಾಗಿ ಅಗೆಯಲಾಗಿತ್ತು. ಇದನ್ನು ಗಮನಿಸಿದ ಪತ್ರಕರ್ತ ತಕ್ಷಣವೇ ಕಾಮಗಾರಿಯ ಫೋಟೊಗಳನ್ನು ಕ್ಲಿಕ್ಕಿಸಿದ್ದಾರೆ. ಜೊತೆಗೆ ಕಾಮಗಾರಿಯಿಂದ ಸ್ಥಳೀಯ ವ್ಯಾಪಾರಿಗಳಿಗೆ ಹಾಗೂ ಪಾದಚಾರಿಗಳಿಗೆ ಸಮಸ್ಯೆ ಉಂಟಾಗುತ್ತಿದೆಯೇ ಎಂಬ ಬಗ್ಗೆ ಮಾಹಿತಿ ಪಡೆಯಲು ವ್ಯಾಪಾರಿಯೊಬ್ಬರ ಪ್ರತಿಕ್ರಿಯೆ ಕೇಳಿದ್ದಾರೆ.

ಆಗ ಅಡ್ಡಿ ಮಾಡಿದ ಕಾರ್ಪೊರೇಟರ್ ಗಳ ಬೆಂಬಲಿಗರು, ಅಲ್ಲೇ ಹತ್ತಿರದ ದೇವಾಲಯದಲ್ಲಿ ಕಾರ್ಪೊರೇಟರ್ ಪ್ರಮೋದ್ ನಿಮ್ಮನ್ನು ಭೇಟಿ ಮಾಡಲು ಸೂಚಿಸಿದ್ದಾರೆ ಎಂದರು.

ಕಾರ್ಪೊರೇಟರ್ ನ್ನು ಭೇಟಿ ಮಾಡಿದ ಪುಷ್ಕರ್ ತಾವು ತಮ್ಮ ಕೆಲಸವನ್ನಷ್ಟೇ ಮಾಡುತ್ತಿದ್ದಾಗಿ ವಿವರಿಸಿದ್ದಾರೆ. ಆದರೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ಕಾರ್ಪೊರೇಟರ್ ಹಾಗೂ ಆತನ ಬೆಂಬಲಿಗರು ವರದಿ ಪ್ರಕಟಿಸಿದರೆ ಪರಿಣಾಮ ಎದುರಿಸಬೇಕಾಗುತ್ತದೆ, ಜೈಲಿಗೆ ಹೋಗಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ.

ಬಳಿಕ ಪುಷ್ಕರ್ ನನ್ನು ತೆರಳಲು ಬಿಟ್ಟಿದ್ದಾರೆ. ಮತ್ತೆ ಪುಷ್ಕರ್ ನನ್ನು ವಾಪಸ್ ಕರೆದ ಕಾರ್ಪೋರೇಟರ್, ಕಾಮಗಾರಿ ಕುರಿತಂತೆ ಸುದ್ದಿಯನ್ನು ಪ್ರಕಟಿಸಬೇಡಿ ಎಂದು ಕಾರ್ಪೊರೇಟರ್ ವಾರ್ನಿಂಗ್ ಬೇರೆ ಕೊಟ್ಟಿದ್ದಾರೆ.

ಬೆದರಿಕೆ ವಿಷಯ ಬೀದಿಗೆ ಬರುತ್ತಿದ್ದಂತೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಸೇರಿರುವ ವಿರೋಧಿಗಳ ಕೃತ್ಯ ಎಂದು ನಾಟಕವಾಡಿ, ಪತ್ರಕರ್ತನ ವಿರುದ್ಧ ಪ್ರಕರಣ ದಾಖಲಿಸುವುದಾಗಿಯೂ ಹೇಳಿದ್ದಾರೆ.

Corporator threatens Express photographer

ನಂತರ ಗಾಂಧಿನಗರದ ಶಾಸಕ ದಿನೇಶ್ ಗುಂಡೂರಾವ್ ಅವರ ಆಪ್ತ ಸಹಾಯಕ ಪತ್ರಕರ್ತನಿಗೆ ಕರೆ ಮಾಡಿ ಪ್ರಮೋದ್ ಅವರು ಮಾಡಿದ್ದು ತಪ್ಪಾಗಿದೆ. ಗುಂಡೂರಾವ್ ಅವರನ್ನು ಭೇಟಿ ಮಾಡಿ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ಸಲಹೆ ಕೊಟ್ಟಿದ್ದಾರೆ.

ಕೆಟ್ಟ ಕಾಮಗಾರಿ ಫೋಟೋ ತೆಗೆಯುವ ಪತ್ರಕರ್ತನ ಫೋಟೋ ತೆಗೆಯಲು ಕಾರ್ಪೋರೇಟರ್ ಅಡ್ಡಿ ಪಡಿಸುತ್ತಾನೆ ಅಂದ ಮೇಲೆ ಈತ ಕಾರ್ಪೋರೇಟರ್ ಆಗಲು ಆಯೋಗ್ಯ ಅನ್ನುವುದರಲ್ಲಿ ಸಂಶಯವಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ನೈತಿಕ ಅನ್ನುವುದು ಇದ್ದರೆ ಮೊದಲು ಈ ಕಾರ್ಪೋರೇಟರ್ ನನ್ನು ಪಕ್ಷದಿಂದ ವಜಾಗೊಳಿಸಲಿ. ಇಲ್ಲವಾದರೆ ಕಾಂಗ್ರೆಸ್ ಗೆ ಜನರೇ ತಕ್ಕ ಪಾಠ ಕಲಿಸುವುದು ಖಂಡಿತಾ.

ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್