crossorigin="anonymous"> ಇ ನಕ್ಷೆಗಾಗಿ ಆಟವಾಡಿಸಿದ ಗ್ರಾಮಕರಣಿಕನ ವಿರುದ್ಧ ಪ್ರಧಾನಮಂತ್ರಿ ಕಚೇರಿಯ ಬಾಗಿಲು ತಟ್ಟಿದ ಕರಾವಳಿ ರೈತ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಇ ನಕ್ಷೆಗಾಗಿ ಆಟವಾಡಿಸಿದ ಗ್ರಾಮಕರಣಿಕನ ವಿರುದ್ಧ ಪ್ರಧಾನಮಂತ್ರಿ ಕಚೇರಿಯ ಬಾಗಿಲು ತಟ್ಟಿದ ಕರಾವಳಿ ರೈತ

Radhakrishna Anegundi by Radhakrishna Anegundi
13-08-21, 6 : 03 am
in ರಾಜ್ಯ
kadaba
Share on FacebookShare on TwitterWhatsAppTelegram

ಮಂಗಳೂರು : ಈ ಸರ್ಕಾರಿ ಅಧಿಕಾರಿಗಳು ಅಂದ್ರೆ ಸಾಕು ಜನ ಸಾಮಾನ್ಯರು ಮೂಗು ಮುರಿಯುತ್ತಾರೆ. ಕಾರಣ ಸಿಂಪಲ್ ಸರ್ಕಾರಿ ಅಧಿಕಾರಿ ಅಂದ್ರೆ ಭ್ರಷ್ಟ ಅನ್ನುವ ಮನೋಭಾವನೆ ಜನರಲ್ಲಿದೆ. ಇದು ಹೌದು ಅನ್ನಿಸುವ ಹತ್ತು ಹಲವು ಘಟನೆಗಳು ನಡೆದಿದೆ. ಅದಕ್ಕೆ ಸಾಕ್ಷಿ ಎಸಿಬಿ ಮತ್ತು ಲೋಕಾಯುಕ್ತ ನಡೆಸಿದ ದಾಳಿ. ಈ ಭ್ರಷ್ಟರ ಕಾರಣದಿಂದಲೇ ಶುದ್ಧ ಹಸ್ತದ ಸರ್ಕಾರಿ ಸಿಬ್ಬಂದಿಯೂ ತಲೆ ತಗ್ಗಿಸುವಂತಾಗಿದೆ. ಇನ್ನು ಸರ್ಕಾರಿ ಕಚೇರಿಯಲ್ಲಿ ಕಾಸಿಲ್ಲದೆ ಅದ್ಯಾವ ಕೆಲಸವಾಗುತ್ತದೆ ಹೇಳಿ.

ಹೀಗೆ ಜಮೀನಿನ ಇ ನಕ್ಷೆ ಸಲುವಾಗಿ ಗ್ರಾಮಕರಣಿಕರ ಕಚೇರಿಗೆ ಅರ್ಜಿ ಸಲ್ಲಿಸಿ 16 ತಿಂಗಳು ಕಳೆದರೂ ಅರ್ಜಿ ವಿಲೇವಾರಿಗೊಳ್ಳದ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ಕಾರ್ಯಾಲಯಕ್ಕೆ ದೂರು ಸಲ್ಲಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ.

ಕಡಬ ತಾಲೂಕು ಕೋಡಿಂಬಾಳ ಗ್ರಾಮದ ಧರ್ಮಪಾಲ ಗೌಡ ಅನ್ನುವವರು ತಮ್ಮ ಜಾಗದ ಇ ನಕ್ಷೆ ತಯಾರಿಸಲು ಅರ್ಜಿ ಸಲ್ಲಿಸಿ ಹಣವನ್ನೂ ಪಾವತಿಸಿದ್ದರು. ಆದರೆ ಕಡಬ ಗ್ರಾಮಕರಣಿಕರ ಕಚೇರಿಯಂದ ಯಾವುದೇ ಸ್ಪಂದನೆ ಸಿಕ್ಕಿರಲಿಲ್ಲ. 2020ರ ಮಾರ್ಚ್ 17ರಂದು ಸಲ್ಲಿಸಿದ್ದ ಅರ್ಜಿಯನ್ನು ಅಧಿಕಾರಿಗಳು ಅದೆಲ್ಲಿ ಸಿಕ್ಕಿಸಿಕೊಂಡಿದ್ದರೊ ಗೊತ್ತಿಲ್ಲ.

ಅಧಿಕಾರಿಗಳ ವರ್ತನೆಯಿಂದ ಬೇಸತ್ತ ಧರ್ಮಪಾಲ ಗೌಡ ವಿಧಿಯಿಲ್ಲದೆ ಪ್ರಧಾನಮಂತ್ರಿ ಸಚಿವಾಲಯಕ್ಕೆ ಪತ್ರ ಬರೆದು ಪ್ರಧಾನ ಸೇವಕರಿಂದ ನ್ಯಾಯದ ನಿರೀಕ್ಷೆ ಪಟ್ಟರು. ನಿರೀಕ್ಷೆ ಸುಳ್ಳಾಗಲಿಲ್ಲ. ಪ್ರಧಾನಿ ಮಂತ್ರಿ ಕಾರ್ಯಾಲಯ ಇದೀಗ ರಾಜ್ಯ ಮುಖ್ಯ ಕಾರ್ಯದರ್ಶಿಗೆ ಪತ್ರ ಬರದು ಕ್ರಮ ಕೈಗೊಳ್ಳುವಂತೆ ಸೂಚಿಸಿದೆ. ಮುಖ್ಯಕಾರ್ಯದರ್ಶಿಗಳು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದು ವಿವರಣೆ ಬಯಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಕಡಬ ತಹಶೀಲ್ದಾರ್ ಅವರಿಗೆ ಪತ್ರ ಬರೆದಿದ್ದು ಅಗತ್ಯ ಕ್ರಮ ಕೈಗೊಂಡು ವರದಿ ನೀಡಿ ಎಂದು ಸೂಚಿಸಿದ್ದಾರೆ. ಈ ಬಗ್ಗೆ ಪ್ರಧಾನ ಮಂತ್ರಿ ಸಚಿವಾಲಯ ಧರ್ಮಪಾಲ ಗೌಡ ಅವರಿಗೆ ಮಾಹಿತಿ ನೀಡಿದೆ.

ಒಟ್ಟಿನಲ್ಲಿ ಗ್ರಾಮಕರಣಿಕನೊಬ್ಬ ಮಾಡದ ಕೆಲಸವನ್ನು ಪ್ರಧಾನಮಂತ್ರಿ ಕಡೆಯಿಂದ ಮಾಡಿಸಬೇಕಾಗಿ ಬಂದಿರುವುದು ದುರಂತವೇ ಸರಿ. ಒಂದು ವೇಳೆ ಅಧಿಕಾರಿ ತಪ್ಪು ಮಾಡಿದ್ರೆ ಮನೆಗೆ ಕಳುಹಿಸುವುದೇ ಉತ್ತಮ.

Tags: kadaba
Share1TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್