crossorigin="anonymous"> ಕೊರೋನಾ ಬಗ್ಗೆ ತಪ್ಪು ಸಂದೇಶ : ಡಾ.ರಾಜು ಕ್ಲಿನಿಕ್ ಮುಚ್ಚಲು ಆದೇಶ : ಇದು ಮೆಡಿಕಲ್ ಮಾಫಿಯಾನ...? - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕೊರೋನಾ ಬಗ್ಗೆ ತಪ್ಪು ಸಂದೇಶ : ಡಾ.ರಾಜು ಕ್ಲಿನಿಕ್ ಮುಚ್ಚಲು ಆದೇಶ : ಇದು ಮೆಡಿಕಲ್ ಮಾಫಿಯಾನ…?

Radhakrishna Anegundi by Radhakrishna Anegundi
17-05-21, 4 : 50 pm
in ಟಾಪ್ ನ್ಯೂಸ್
dr raju
Share on FacebookShare on TwitterWhatsAppTelegram

ಬೆಂಗಳೂರು : ಮೆಡಿಕಲ್ ಮಾಫಿಯಾ, ಆಸ್ಪತ್ರೆಗಳ ದಂಧೆ ಕುರಿತಂತೆ ದನಿ ಎತ್ತಿದ ವೈದ್ಯರೊಬ್ಬರ ಕ್ಲಿನಿಕ್ ಲೈಸೆನ್ಸ್ ರದ್ದುಗೊಳಿಸಲು ಕರ್ನಾಟಕ ಮೆಡಿಕಲ್ ಕೌನ್ಸಿಲ್ ಆದೇಶ ನೀಡಿದೆ.

ವಿಜಯನಗರದ ಮೂಡಲಪಾಳ್ಯದಲ್ಲಿರುವ ಸಾಗರ್ ಕ್ಲಿನಿಕ್ ನಲ್ಲಿ ಚಿಕಿತ್ಸೆ ನೀಡುತ್ತಿದ್ದ ಡಾ. ರಾಜು ಮಾಸ್ಕ್, ಸ್ಯಾನಿಟೈಸರ್ ಬಳಕೆ ಮಾಡದೆ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದರು. ಈ ಮೂಲಕ ಜನರಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸವನ್ನು ಕೂಡಾ ಮಾಡುತ್ತಿದ್ದರು. ಇದರೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಖಾಸಗಿ ಆಸ್ಪತ್ರೆಗಳ ಹಣದ ದಾಹವನ್ನು ವಿವರಿಸುತ್ತಿದ್ದ ಡಾ. ರಾಜು, ಕೊರೋನಾಗೆ ಹೆದರುವ ಅಗತ್ಯವಿಲ್ಲ, ಅದೊಂದು ಸಾಧಾರಣ ಜ್ವರ, ಮಾಸ್ಕ್, ಸ್ಯಾನಿಟೈಸರ್, ಸಾಮಾಜಿಕ ಅಂತರದ ಅಗತ್ಯವೇ ಇಲ್ಲ ಎಂದು ಹೇಳುತ್ತಿದ್ದರು.

ಡಾ. ರಾಜು ಅವರ ಸಲಹೆಗಳು ಕೊರೋನಾ ಬಗ್ಗೆ ಆತಂಕ ಹೊಂದಿದವರಿಗೆ ಸಾಕಷ್ಟು ಪ್ರಯೋಜನವಾಗಿತ್ತು. ಅದೆಷ್ಟೋ ಮಂದಿ ಡಾ. ರಾಜು ಅವರ ಬಳಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು ಕೂಡಾ. ಆದರೆ ಕೆಲ ದಿನಗಳ ಹಿಂದೆ ಡಾ.ರಾಜು ಅವರ ವಿರುದ್ಧ ವಿರೋಧದ ದನಿ ಕೇಳಿ ಬಂದಿತ್ತು. ಅದರಲ್ಲೂ ದೊಡ್ಡ ದೊಡ್ಡ ಆಸ್ಪತ್ರೆಗಳ ಮಂದಿಯೇ ದನಿ ಎತ್ತಿದ್ದರು. ಪತ್ರಿಕೆಗಳಲ್ಲಿ ಅವರ ವಿರುದ್ಧ ಲೇಖನ ಬರೆಸುವ ಕೆಲಸ ಕೂಡಾ ನಡೆದಿತ್ತು.

ಈ ವೇಳೆ ಪ್ರತಿಕ್ರಿಯಿಸಿದ್ದ ಡಾ.ರಾಜು ಮಾಸ್ಕ್ ಹಾಕಿಕೊಳ್ಳದೆ, ಸ್ಯಾನಿಟೈಸರ್ ಬಳಸದೆ ರೋಗಿಗಳಿಗೆ ಚಿಕಿತ್ಸೆ ನೀಡುವುದು ನನ್ನ ವೈಯುಕ್ತಿಕ ಆಯ್ಕೆ, ಒಂದು ವೇಳೆ ಮಾಸ್ಕ್ ಹಾಕದೇ ಅಪಾಯವಾಗುವುದಿದ್ದರೆ ನನ್ನ ಮೇಲೆಯೇ ಆಗುತ್ತದೆ. ಇಂತಹ ಸಂದರ್ಭದಲ್ಲಿ ಮುಖ್ಯವಾಗಿ ಬೇಕಾಗಿರುವುದು ರೋಗಿಗಳಿಗೆ ಧೈರ್ಯ ತುಂಬುವ ಕೆಲಸ. ರೋಗಿಗಳು ಮನೆಯಲ್ಲಿ ಇರುವಾದ ಮಾಸ್ಕ್ ಹಾಕಿಕೊಳ್ಳುವುದು ಬೇಡ, ಹೊರಗಡೆ ಬಂದಾಗ ಮಾತ್ರ ಹಾಕಿಕೊಳ್ಳಬೇಕು ಎಂದು ಹೇಳುತ್ತಿದ್ದೇನೆ. ನನ್ನ ಕ್ಲಿನಿಕ್ ನಲ್ಲಿ ವೈದ್ಯರು ಸೇರಿ 5 ಮಂದಿ ಕೆಲಸ ಮಾಡುತ್ತಿದ್ದೇವೆ. ಯಾರೂ ಕೂಡಾ ಕೊರೋನಾ ಪರೀಕ್ಷೆಗೆ ಒಳಗಾಗಿಲ್ಲ. ಅವರಿಗೆಲ್ಲಾ ಕೊರೋನಾ ಬಂದು ಹೋಗಿರಬಹುದು. ಜನ ಕೂಡಾ ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಸಾರಿದ್ದರು.

ಯಾವಾಗ ಇವರ ವಿರುದ್ಧ ಅಸಮಾಧಾನದ ಅಲೆ ಶುರುವಾಯ್ತೋ, ಎಚ್ಚೆತ್ತುಕೊಂಡಿರುವ ಕರ್ನಾಟಕ ಮೆಡಿಕಲ್ ಕೌನ್ಸಿಲ್ ಡಾ. ರಾಜು ಅವರ ರಿಜಿಸ್ಟ್ರೇಷನ್ ರದ್ದುಗೊಳಿಸಲು ಆದೇಶಿಸಿದೆ. ಇದರ ಬೆನ್ನಲ್ಲೇ ಆರೋಗ್ಯಾಧಿಕಾರಿಗಳು ಸಾಗರ್ ಕ್ಲಿನಿಕ್ ಗೆ ಬೀಗ ಹಾಕಲು ಮುಂದಾಗಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಅನೇಕರು ಇದು ಮೆಡಿಕಲ್ ಮಾಫಿಯಾದ ಕೆಲಸ ಎಂದು ದೂರಿದ್ದಾರೆ.

Tags: Corona
Share1TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್