crossorigin="anonymous"> Fazil murder case : ಸುರತ್ಕಲ್ ಫಾಝಿಲ್ ಹತ್ಯೆಗೂ ಮುನ್ನ ಕಾರಿಂಜ ದೇವಸ್ಥಾನದಲ್ಲಿ ಪ್ರಾರ್ಥನೆ...? - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Fazil murder case : ಸುರತ್ಕಲ್ ಫಾಝಿಲ್ ಹತ್ಯೆಗೂ ಮುನ್ನ ಕಾರಿಂಜ ದೇವಸ್ಥಾನದಲ್ಲಿ ಪ್ರಾರ್ಥನೆ…?

ಸುರತ್ಕಲ್ ಫಾಝಿಲ್ ಹತ್ಯೆ : 6 ಕೊಲೆಗಾರರ ಪೈಕಿ ಮೂವರು ರೌಡಿ ಶೀಟರ್

Radhakrishna Anegundi by Radhakrishna Anegundi
03-08-22, 9 : 11 am
in ದಕ್ಷಿಣ ಕನ್ನಡ
fazil-murder-case-6 person arrest
Share on FacebookShare on TwitterWhatsAppTelegram

ದೇವಸ್ಥಾನದಲ್ಲಿ ಪ್ರಾರ್ಥನೆ, ಬಾರ್ ನಲ್ಲಿ ಚರ್ಚೆ ಶಾಲೆಯಲ್ಲಿ ಸ್ಕೆಚ್ : ಅಮಾಯಕನೊಬ್ಬನನ್ನು ಕೊಂದ ಪಾಪಿಗಳು (fazil murder case)

ಮಂಗಳೂರು : ಕರಾವಳಿಯಲ್ಲಿ ತಲ್ಲಣ ಮೂಡಿಸಿದ್ದ ಸುರತ್ಕಲ್ ನ ಮೊಹಮ್ಮದ್ ಪಾಝಿಲ್ (23) ಹತ್ಯೆ ಪ್ರಕರಣದ ಕಿರಾತಕರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. (Fazil murder case)ಮೂವರು ರೌಡಿ ಶೀಟರ್ ಸೇರಿದಂತೆ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮೃತ ಮೊಹಮ್ಮದ್ ಪಾಝಿಲ್ ಗೆ ಯಾವುದೇ ಸಂಘಟನೆಯಾಗಲಿ,ಯಾವುದೇ ಕೃತ್ಯಗಳಲ್ಲಿ ತೊಡಗಿಸಿಕೊಂಡಿರಲಿಲ್ಲ. (Fazil murder case) ತಾನಾಯ್ತು, ತನ್ನ ಕೆಲಸವಾಯ್ತು ಅಂದುಕೊಂಡಿದ್ದ. ಹೀಗಾಗಿ ಜುಲೈ 28 ರಂದು ನಡೆದ ಅಮಾಯಕನೊಬ್ಬನ ಹತ್ಯೆಗೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಜೊತೆಗೆ ಪ್ರವೀಣ್ ನೆಟ್ಟಾರು ಹತ್ಯೆಯ ಬೆನ್ನಲ್ಲೇ ಈ ಕೊಲೆ ನಡೆದ ಕಾರಣ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದರು.

ಇದನ್ನೂ ಓದಿ : lathi charge : ಹೊಡೆಯಿರಿ.. ಹೊಡೆಯಿರಿ… ಪೊಲೀಸರ ಲಾಠಿಗೆ ಎದೆಯೊಡ್ಡಿದ ಕಾಸರಗೋಡು ಬಿಜೆಪಿ ನೇತಾರ

ಇದೀಗ ಘಟನೆಗೆ ಸಂಬಂಧಿಸಿದಂತೆ ಬಜಪೆಯ ಸುಹಾಸ್ ಶೆಟ್ಟಿ (29) ಗಿರಿಧರ್ (23), ಅಭಿಷೇಕ್ (21), ಶ್ರೀನಿವಾಸ್ (23) ಮತ್ತು ದೀಕ್ಷಿತ್ (21) ಅನ್ನುವವರನ್ನು ಬಂಧಿಸಲಾಗಿದೆ. ಈ ಪೈಕಿ ಮೂವರು ರೌಡಿ ಶೀಟರ್ ಗಳಾಗಿದ್ದು, ಉಳಿದ 3 ಮಂದಿಯ ಮೇಲೆಯೂ ನಾನಾ ಘಟನೆಗಳಲ್ಲಿ ಪ್ರಕರಣ ದಾಖಲಾಗಿದೆ. ಈ ನಡುವೆ ಕೃತ್ಯಕ್ಕೆ ಸಾಥ್ ನೀಡಿದ್ದ ಮತ್ತೊಂದಿಷ್ಟು ಮಂದಿಯ ಬಂಧನವಾಗಬೇಕಾಗಿದೆ.

ಜುಲೈ 26 ರ ರಾತ್ರಿ ಸುಹಾಸ್ ಶೆಟ್ಟಿ ಕೊಲೆಯ ಯೋಚನೆ ಬಂದಿತ್ತು. ಮರು ದಿನ ಮಧ್ಯಾಹ್ನ ಸ್ನೇಹಿತನಿಗೆ ಕರೆ ಮಾಡಿದ್ದ ತಿಳಿಸಿದ್ದ, ಜೊತೆಗೆ ಇದಕ್ಕಾಗಿ ಬೇಕಾದ ಸಿದ್ಧತೆಗಳನ್ನು ಕೂಡಾ ಮಾಡಿಕೊಂಡಿದ್ದ. ಜುಲೈ 27 ರಂದು ಮತ್ತೊಬ್ಬ ಸ್ನೇಹಿತ ಗಿರಿಧರನನ್ನು ಕರೆಸಿಕೊಂಡು ಸುಹಾಸ್ ಹತ್ಯೆಗೆ ಬೇಕಾಗಿರುವ ಆಯುಧ ನನ್ನ ಬಳಿ ಇದೆ. ಸುರತ್ಕಲ್ ನಲ್ಲೇ ಹೆಣ ಬೀಳಬೇಕು ಅಂದಿದ್ದ. ಇದಾದ ಬಳಿಕ ಮೋಹನ್, ಅಭಿಷೇಕ, ಶ್ರೀನಿವಾಸ, ದೀಕ್ಷಿತ್ ಜೊತೆಯಾಗಿದ್ದರು.

fazil murder1

ಈ ನಡುವೆ ಅಜಿತ್ ಕ್ರಾಸ್ತಾ ಅನ್ನುವವನಿಂದ ಕಾರು ಪಡೆದು ಜುಲೈ 27 ರಂದು ಕಾರಿಂಜ ದೇವಸ್ಥಾನಕ್ಕೆ ತೆರಳಿದ್ದರು. ಬಳಿಕ ಮಂಗಳೂರು ವಾಪಾಸ್ ಬಂದು ಪ್ರಕರಣವೊಂದರ ಸಂಬಂಧ ಕೋರ್ಟ್ ಗೆ ಹಾಜರಾಗಿದ್ದರು. ಇದಾದ ನಂತ್ರ ಖಾಸಗಿ ಪ್ರಾಥಮಿಕ ಶಾಲೆಯೊಂದರ ಬಳಿ ಚರ್ಚೆ ನಡೆಸಿ ಕೊಲೆಗೆ ಅಂತಿಮ ಸ್ಕೆಚ್ ಹಾಕಿದ್ದರು.

ಇದಕ್ಕಾಗಿ 6 ಮಂದಿಯನ್ನು ಗುರುತಿಸಿಕೊಂಡ ದುಷ್ಕರ್ಮಿಗಳು ಕೊನೆಗೆ ಪಾಝಿಲ್ ಹೆಸರನ್ನು ಫೈನಲ್ ಮಾಡಿದ್ದಾರೆ. ಮಧ್ಯಾಹ್ನ ಕಿನ್ನಿಗೋಳಿಯ ಬಾರ್ ಗೆ ತೆರಳಿ ಊಟ ಮುಗಿಸಿ ಅಲ್ಲಿಂದ ಸುರತ್ಕಲ್ ಗೆ ಬಂದು ಮರು ದಿನ ಈ ಕೃತ್ಯ ಎಸಗಿದ್ದರು.

ಇನ್ನು ಪಾಝಿಲ್ ಹತ್ಯೆಯ ಬೆನ್ನಲ್ಲೇ ಇದೊಂದು ಪ್ರೇಮ ಪ್ರಕರಣ, ಕೌಟಿಂಬಿಕ ಮನಸ್ತಾಪ ಅನ್ನುವ ಸುದ್ದಿಗಳು ಹರಿದಾಡಿತ್ತು. ಆದರೆ ಈ ಎಲ್ಲಾ ವಿಚಾರಗಳನ್ನು ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ನಿರಾಕರಿಸಿದ್ದು, ಕೊಲ್ಲಬೇಕು ಅನ್ನುವ ಉದ್ದೇಶದಿಂದ ಕೊಲೆ ಮಾಡಲಾಗಿದೆ. ಕೊಲೆಯ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಾಗಿತ್ತು. ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ಮುಂದುವರಿಸಲು ಪೊಲೀಸರು ನಿರ್ಧರಿಸಿದ್ದಾರೆ.

mng cop

ಇನ್ನು ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿ ಈ ಹಿಂದೆ ಭಜರಂಗದಳದ ಗೋರಕ್ಷಾ ವಿಭಾಗದ ಸದಸ್ಯನಾಗಿದ್ದ 2020ರ ಕೊಲೆ ಪ್ರಕರಣದಲ್ಲಿ ಈತನ ಹೆಸರು ಕೇಳಿ ಬಂದ ಕಾರಣ ಸಂಘಟನೆಯಿಂದ ಈತನನ್ನು ಉಚ್ಛಾಟಿಸಲಾಗಿತ್ತು. ಇನ್ನು ಉಳಿದವರು ಯಾವ ಸಂಘಟನೆ ಜೊತೆಗೆ ನಂಟು ಹೊಂದಿದ್ದರು ಅನ್ನುವುದು ಪೊಲೀಸರ ವಿಚಾರಣೆಯಿಂದ ಹೊರಬರಬೇಕಾಗಿದೆ.

Tags: MAIN
ShareTweetSendShare

Discussion about this post

Related News

ಆಯುಷ್ಮಾನ್ ಭಾರತ್ ಯೋಜನೆ ದಕ ಜಿಲ್ಲೆಗೆ ೨೫ ಕೋಟಿ ೧೧ ಲಕ್ಷ ರೂಪಾಯಿ ಅನುದಾನ

ಆಯುಷ್ಮಾನ್ ಭಾರತ್ ಯೋಜನೆ ದಕ ಜಿಲ್ಲೆಗೆ ೨೫ ಕೋಟಿ ೧೧ ಲಕ್ಷ ರೂಪಾಯಿ ಅನುದಾನ

ನಾಳೆಯಿಂದ 6,7,8 ನೇ ತರಗತಿ ಪ್ರಾರಂಭ : ವಿದ್ಯಾರ್ಥಿಗಳ ಸ್ವಾಗತಕ್ಕೆ ಸಜ್ಜಾದ ಶಾಲೆಗಳು

ಕರಾವಳಿಯಲ್ಲಿ ಮಳೆಯ ಅಬ್ಬರ : ನಾಳೆ ಜುಲೈ 09ಕ್ಕೆ ಶಾಲಾ ಕಾಲೇಜುಗಳಿಗೆ ರಜೆ

Dose Mela in refresh cafe puttur three days

ಪುತ್ತೂರಿನಲ್ಲಿ ದೋಸೆ ಮೇಳ : ಮೂರು ದಿನಗಳ ಕಾಲ ನಡೆಯಲಿದೆ ದೋಸೆ ಜಾತ್ರೆ

ಸಾಮಾಜಿಕ ಹೋರಾಟಗಾರ ಕಾಂಗ್ರೆಸ್ ಮುಖಂಡ ಪದ್ಮನಾಭ ನರಿಂಗಾನ ಇನ್ನಿಲ್ಲ

ಅರುಣ್ ಪುತ್ತಿಲ ವಿರುದ್ಧ ತೊಡೆ ತಟ್ಟಿದ ಸಂಜೀವ ಮಠಂದೂರು

ಪುತ್ತಿಲ ಬಿಜೆಪಿಗೆ ಬಂದ್ರೆ ಕರಾವಳಿಯಲ್ಲಿ ಕಾಂಗ್ರೆಸ್ ಗೆ ಸಂಕಷ್ಟ…?

ಹತ್ತೂರ ಒಡೆಯನ ಸನ್ನಿಧಿಯ ಅಭಿವೃದ್ಧಿಗೆ 2 ಕೋಟಿ ರೂ ಅನುದಾನ ತಂದ ಅಶೋಕ್ ರೈ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

Yakshagana : ಲೀಲಾವತಿಯವರಿಗೆ leelavathi baipadithaya ಪ್ರಶಸ್ತಿ ಒಲಿದಿದ್ದು ಹೇಗೆ…. ಮಗ ಬಿಚ್ಚಿಟ್ಟ ರಹಸ್ಯ

ಕೊರಗಜ್ಜ koragajja ಸಿನಿಮಾಗೆ ಸಂಕಷ್ಟ : ಕಳಸದಲ್ಲಿ ನಡೆದ ಕಿರಿಕ್ ನ ಅಸಲಿ ಕಥೆಯೇನು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್